Loksabha Election: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷ ಒಂದಾಗಿ ಚುನಾವಣೆ ಎದುರಿಸಲಿವೆ. ರಾಜ್ಯದ 28ಕ್ಷೇತ್ರಗಳಲ್ಲಿ ಬಿಜೆಪಿ 22ರಿಂದ 23 ಮತ್ತು ಜೆಡಿಎಸ್ ಪಕ್ಷ ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಕನ್ಫರ್ಮ್ ಎಂದು ಹೇಳಲಾಗುತ್ತಿದೆ.
ರಾಜ್ಯ ವಿಧಾನಸಭಾ ಚುನಾವಣೆ ಗೆದ್ದ ರೀತಿಯಲ್ಲೇ ಲೋಕಸಭೆಯಲ್ಲೂ ಗೆಲ್ಲಲು ಡಿಕೆಶಿ ಮಾಸ್ಟರ್ ಪ್ಲಾನ್. ಕಾಂಗ್ರೆಸ್ ಪಂಚ ಗ್ಯಾರಂಟಿ, ಆಪರೇಷನ್ ಹಸ್ತದ ಮೂಲಕವೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೌಂಟರ್ ಕೊಡಲು ಪ್ರತಿತಂತ್ರ ರೂಪಿಸಲಾಗುತ್ತಿದೆ.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಬಿಜೆಪಿ ವಲಸೆ ಶಾಸಕರು ಮತ್ತೆ ಕಾಂಗ್ರೆಸ್ ಗೆ ಬಂದರೆ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬಹುದು ಎಂಬ ಲೆಕ್ಕಾಚಾರ ಕೈ ಹಿರಿಯ ನಾಯಕರಲ್ಲಿದೆ. ಈ ಪೈಕಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಭಿನ್ನ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
Mahaghatabandhan: ಮೋದಿ ಮಣಿಸಲು ಕಾಂಗ್ರೆಸ್ ಮಹಾಘಟಬಂಧನ ಪ್ಲ್ಯಾನ್ ರೂಪಿಸಿದ್ದು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಹಾಘಟಬಂದನ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದಲ್ಲಿ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗಿದೆ. ಉತ್ತಮ ಆಡಳಿತದಿಂದಾಗಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ಪಾರದರ್ಶಕ ಮತ್ತು ಸಮಯಕ್ಕೆ ಬದ್ಧವಾಗಿದೆ. ಬಡತನ ಮತ್ತು ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸುವುದು ಮೋದಿ ಸರ್ಕಾರದ ಗುರಿಯಾಗಿದೆ. ಮೋದಿ ಸರ್ಕಾರದ ಅಂತ್ಯೋದಯ ಯೋಜನೆಗಳಿಂದ ಸಮಾಜದ ಬಡ ವರ್ಗದವರು ಪ್ರಯೋಜನ ಪಡೆದಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.
Rahul Gandhi in USA: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿರುವ ರಾಹುಲ್, ಹಲವು ವಿಷಯಗಳ ಕುರಿತು ಮಾತನಾಡಿದರು. 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿಯನ್ನು ಸೋಲಿಸುವ ಸೂತ್ರವನ್ನೂ ಇದೇ ವೇಳೆ ಅವರು ಹೇಳಿದ್ದಾರೆ.
2023ರ ರಾಜ್ಯ ವಿಧಾನಸಭಾ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ನಿಜಕ್ಕೂ ಹೈ ವೋಲ್ಟೇಜ್ ಕಣವಾಗಿ ಪರಿಣಮಿಸಿತ್ತು. ಶಿಷ್ಯನ ವಿರುದ್ಧವೇ ಗುರುವಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸುತ್ತಾರಾ ಎಂಬ ಜೆಡಿಎಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿರುವ ದೇವೇಗೌಡರ ಪುತ್ರ ಎಚ್.ಡಿ. ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಮಾಹಿತಿ ನೀಡಿದ್ದಾರೆ.
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೆಡಿಎಸ್ ಮುಖಂಡ ಹೆಚ್. ಡಿ. ಕುಮಾರಸ್ವಾಮಿ, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎಂಬುದನ್ನೂ ಸ್ವತ ಸಿದ್ಧರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಈಗಲಾದರೂ ಸತ್ಯ ಹೊರಬಂದಿದೆ ಎಂದು ವ್ಯಂಗ್ಯ ವಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.