ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರು ಮಾಡಿದ ಕೋಮುವಾದಿ ಹೇಳಿಕೆ ಕುರಿತು ಶಿವಸೇನೆಯ ಮೌನವನ್ನು ಪ್ರಶ್ನಿಸಿದ ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಬಳೆಗಳನ್ನು ಧರಿಸಿರಬಹುದು, ಆದರೆ ಬಿಜೆಪಿ ಈ ವಿಷಯದಲ್ಲಿ ಮೌನವಾಗಿರುವುದಿಲ್ಲ ಎಂದು ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಗುರಿಯಾಗುತ್ತಿದ್ದಂತೆ, ಅದರ ಮಾಜಿ ಮಿತ್ರ ಶಿವಸೇನೆ ದೆಹಲಿ ಜನರು “ಬಿಜೆಪಿಯ ವಿಭಜಕ ಮತ್ತು ದ್ವೇಷ ತುಂಬಿದ ಅಭಿಯಾನವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದೆ.
2018 ರ ಕೊರೆಗಾಂವ್-ಭೀಮಾ ಹಿಂಸಾಚಾರದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ವಹಿಸಿಕೊಂಡಿದೆ, ಮಹಾರಾಷ್ಟ್ರ ಸರ್ಕಾರವು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಒಂದು ದಿನದ ನಂತರ ಈ ವಿಷಯವನ್ನು ಮುಂದುವರಿಸಲು ಕರೆ ನೀಡಿತು.
ಮಹಾರಾಷ್ಟ್ರದಾದ್ಯಂತದ ವಿದ್ಯಾರ್ಥಿಗಳು ಶಾಲೆಗಳಲ್ಲಿ ಜನವರಿ 26 ರಿಂದ ಬೆಳಿಗಿನ ಸಭೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಲಾತ್ತದೆ ಎಂದು ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಮಂಗಳವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್ಸಿಪಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಒಂದು ತಿಂಗಳ ನಂತರ, ಮೂರು ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದರೂ ರಾಜ್ಯದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿವೆ.
ಶ್ರೀಗಣೇಶನಿಗೆ ಚಳಿಯಿಂದ ಕಾಪಾಡುವ ಉದ್ದೇಶದಿಂದ ವಿಶೇಷ ಎಚ್ಚರಿಕೆ ವಹಿಸಲಾಗುತ್ತಿದೆ. ಭಕ್ತಾದಿಗಳೂ ಕೂಡ ಶ್ರದ್ಧೆಯಿಂದ ಗಣಪತಿ ಬಪ್ಪಾಗೆ ಸ್ವೆಟರ್ ಮತ್ತು ಶಾಲ್ ಗಳನ್ನು ನೀಡುತ್ತಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಶಿಫಾರಸ್ಸಿನ ಮೇರೆಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಖಾತೆ ಹಂಚಿಕೆಗೆ ಅನುಮತಿ ನೀಡುತ್ತಿದ್ದಂತೆ, ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮತ್ತು ಕಾಂಗ್ರೆಸ್ ಶಾಸಕರಿಗೆ ಹಣಕಾಸು, ಗೃಹ ಮತ್ತು ಕಂದಾಯ ಮುಂತಾದ ಪ್ರಮುಖ ಸಚಿವಾಲಯಗಳನ್ನು ಹಂಚಿಕೆ ಮಾಡಲಾಯಿತು.
ಮಾಲೆಗಾವ್ ನಲ್ಲಿ ಪ್ರತಿ ವರ್ಷ ಜಾತ್ರೆಯೊಂದು ನಡೆಯುತ್ತಿದ್ದು, ಈ ಜಾತ್ರೆಯಲ್ಲಿ ಕತ್ತೆಗಳ ಸಂತೆ ನಡೆಯುತ್ತದೆ. ಮೊದಲು ಈ ಸಂತೆಯಲ್ಲಿ ಒಂದು ಕತ್ತೆ 10 ಸಾವಿರದಿಂದ 15 ಸಾವಿರಕ್ಕೆ ಮಾರಾಟವಾಗುತ್ತಿತ್ತು. ಇದೀಗ ಕತ್ತೆಗಳ ಬೆಲೆಯಲ್ಲಿ ಏರಿಕೆಯಾಗಿದೆ.
ಶನಿವಾರ ಬೆಳಗ್ಗೆ 5: 22 ಕ್ಕೆ ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಉದ್ಧವ್ ಠಾಕ್ರೆ ನೇತೃತ್ವದ ಒಕ್ಕೂಟದಲ್ಲಿ ಮುಂದಿನ ಉಪಮುಖ್ಯಮಂತ್ರಿಯಾಗಿ ತಮ್ಮ ಸೋದರಳಿಯ ಅಜಿತ್ ಪವಾರ್ ಅವರನ್ನು ನೇಮಕ ಮಾಡುವ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ನಿರಾಕರಿಸಿದ್ದಾರೆ.
ಭಾರತೀಯ ಜನತಾ ಪಕ್ಷ(BJP) ನಾಯಕಿ ಪಂಕಜಾ ಗೋಪಿನಾಥ್ ಮುಂಡೆ ಸೋಮವಾರ ತಮ್ಮ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ ಹ್ಯಾಂಡಲ್ನಿಂದ ಪಕ್ಷದ ಹೆಸರನ್ನು ತೆಗೆದುಹಾಕಿದ್ದಾರೆ. ಈ ಕ್ರಮವು ಹಲವಾರು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.