ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ. ಮಂಗಳೂರಿನಲ್ಲಿ ಇಂದು 5ನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ರಾಹುಲ್ ಗಾಂಧಿ ಸಾರ್ವಜನಿಕ ಬಸ್ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡಿದರು
ಇತ್ತೀಚೆಗೆ ದಲಿತರ ವೋಟ್ ಬ್ಯಾಂಕಿಗೋಸ್ಕರ ಅಂಬೇಡ್ಕರ್ ಅವರನ್ನು ನಾಟಕದ ಪ್ರೀತಿಯನ್ನು ಬಿಜೆಪಿ ತೋರುಸುತ್ತಿದೆ. ದಲಿತರೊಳಗಡೆ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡ್ತ ಇದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಕುರಿತ ಹೇಳಿಕೆಗೆ ಕಮಲಪಾಳಯದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ರಾಷ್ಟ್ರದ ಕ್ಷಮೇ ಕೇಳಬೇಕು ಎಂದು ಖರ್ಗೆ ಅವರಿಗೆ ಒತ್ತಾಯಿಸುತ್ತಿದ್ದಾರೆ. ಮೋದಿ ವಿಷ ಸರ್ಪ ಎಂಬ ಕಾಂಗ್ರೆಸ್ ಅಧ್ಯಕ್ಷನ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಅಂತ ನಾನು ಹೇಳಿಲ್ಲ. ಬಿಜೆಪಿ ಪಾರ್ಟಿ ಹಾವು ಇದ್ದಂಗೆ, ಸ್ವಲ್ಪ ನೆಕ್ಕಿ ನೋಡ್ತೆವಿ ಅಂದ್ರೆ ಅಲ್ಟಿಮೇಟ್ಲಿ ಡೆತ್ ಅಂತ ಹೇಳಿದ್ದೇನೆ. ನಾನು ಮೋದಿಯವರ ಬಗ್ಗೆ ಏನೂ ಹೇಳಿಲ್ಲ. ವೈಯಕ್ತಿಕವಾಗಿ ನಾವು ಯಾರ ಬಗ್ಗೆಯೂ ಹೇಳೋದಿಲ್ಲ ಎಂದು ತಮ್ಮ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟತೆ ನೀಡಿದ್ದಾರೆ.
ನಾ ಖಾವುಂಗಾ ನಾ ಖಾನೇ ದೂಂಗ ಇದು ಪ್ರಧಾನಿ ಮೋದಿ ಜೀ ಅವರ ಸ್ಲೋಗನ್ ಆಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಭ್ರಷ್ಟರಿಗೆ ಮಣೆ ಆಕ್ತಾ ಇದ್ದಾರೆ. ಮೋದಿ ಮತ್ತುಅಮಿತ್ ಶಾ ಅವರು ಈ ಭ್ರಷ್ಟಾಚಾರದ ಬಗ್ಗೆ ಯಾಕೆ ಮೌನವಾಗಿದ್ದಾರೆ. ಇಡಿ, ಸಿಬಿಐ , ಐಟಿ ಎಂಬ ಎಲ್ಲ ಅಸ್ತ್ರಗಳನ್ನು ಪ್ರಯೋಗಿಸುತ್ತಾರೆ. ಈ ತನಿಖಾ ಸಂಸ್ಥೆಗಳು ರಾಜ್ಯದಲ್ಲಿರುವ ಭ್ರಷ್ಟಾಚಾರದ ಕಡೆ ಯಾಕೆ ನೋಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಟೀಕಾ ಪ್ರಹಾರ ನಡೆಸಿದರು.
'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿಯನ್ನು ಗುಣಗಾನ ಮಾಡಿದ್ದಾರೆ.
ಅಮೂಲ್ ಹಾಗೂ ನಂದಿನಿ ವಿವಾದದ ಬಗ್ಗೆ ಕೇಳಿದಾಗ, ‘ನಾವೆಲ್ಲರೂ ಪ್ರೀತಿಯಿಂದ ಬೆಳೆಸಿರುವ ನಂದಿನಿಯನ್ನು ಕಾಪಾಡಿಕೊಳ್ಳಬೇಕು. ರಾಜ್ಯದ ಜನರು ನಂದಿನಿ ವಿಚಾರದಲ್ಲಿ ವ್ಯಕ್ತಪಡಿಸುವ ಅಭಿಪ್ರಾಯವನ್ನು ಎಲ್ಲರೂ ಆಲಿಸಬೇಕು. ’
ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ʻಕೈʼ ಚುನಾವಣಾ ಸಮಿತಿ ಸಭೆ ನಡೆಯಲಿದೆ.. ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದ್ದು, ಸಭೆಯಲ್ಲಿ ಸಿದ್ದು, ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಲಿಸ್ಟ್ ಫೈನಲ್ ಆಗಲಿದೆ..
ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ ಮೂಡಿಲ್ಲ. ಈ ನಡುವೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
Rahul Gandhi Disqualification : 2024ರಲ್ಲಿ ರಾಹುಲ್ಗೆ ಅನುಕೂಲವಾಗುವಂತಹ ವಾತಾವರಣ ದೇಶಾದ್ಯಂತ ನಿರ್ಮಾಣವಾಗಬೇಕು. ಕಾನೂನಾತ್ಮಕ ಹೋರಾಟದಲ್ಲಿ ಹಿಂದೆ ಸರಿದಿರುವ ಕಾಂಗ್ರೆಸ್ ಈಗ ರಾಜಕೀಯದಲ್ಲಿ ಛಾಪು ಮೂಡಿಸಲು ಯತ್ನಿಸುತ್ತಿದೆ. ಆದರೆ ಸಂಕಲ್ಪ ಸತ್ಯಾಗ್ರಹದಿಂದ ರಾಹುಲ್ ಗಾಂಧಿಗೆ ಸಂಜೀವನಿ ಸಿಗುತ್ತಾ? ಕಾಂಗ್ರೆಸ್ನ ಸತ್ಯಾಗ್ರಹ ಒಂದೇ ಒಂದು ಗುರಿಯನ್ನು ಹೊಂದಿದೆ, ಅದು 2024 ರಲ್ಲಿ ರಾಹುಲ್ಗೆ ಬೆಂಬಲವನ್ನು ಗಳಿಸುವುದು ಮತ್ತು ದೇಶದದಲ್ಲಿ ಕಣ್ಮರೆಯಾಗುತ್ತಿರುವ ಕಾಂಗ್ರೆಸ್ಗೆ ಪುನಶ್ಚೇತನ ನೀಡುವುದುದಾಗಿದೆ.
ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ಎಂದು ಖರ್ಗೆ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಿತು. ಇದರಲ್ಲಿ ಕಾಂಗ್ರೆಸ್ ನ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಮುದ್ರೆ ಬಿದ್ದಿದೆ.
ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಿದ್ದಾರೆ. ಅಲ್ಲದೆ, ನಾಲ್ಕೈದು ಹಾಲಿಗಳಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.