2019 ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ನಂತರ ಎಚ್ಚೆತ್ತುಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ನೂತನ ಅಭಿಯಾನದ ಮೂಲಕ ಜನರ ಒಲವು ಗಳಿಸಿ ಕೊಳ್ಳುವತ್ತ ಮುಂದಾಗಿದ್ದಾರೆ.
ಮಮತಾ ಬ್ಯಾನರ್ಜಿಯ ಸಹಚರರು ಹಾಗೂ ತೃಣಮೂಲ ಕಾಂಗ್ರೆಸ್ನ ನಾಯಕರು ಹೊರಗಿನ ಗೂಂಡಾಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದನ್ನೆಲ್ಲ ತಿಳಿದಿದ್ದರೂ ಪೊಲೀಸರು ದೀದಿಯ ಸೇನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಹಿನ್ನಲೆಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ವಿರುದ್ಧ ಜೊತೆಯಾಗಿ ಹೋರಾಡಲು ಕಾಂಗ್ರೆಸ್ ಮತ್ತು ಸಿಪಿಎಂಗೆ ಮನವಿ ಮಾಡಿದ್ದಾರೆ.
ಕೋಲ್ಕತ್ತಾದ ಉತ್ತರಕ್ಕೆ ಇರುವ ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತರ ನಡುವೆ ನಡೆದ ಘರ್ಷಣೆಯಲ್ಲಿ 17 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಯಿತು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸ್ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಕರೆದು ತುರ್ತು ಸಭೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ವೈದ್ಯರ ಪ್ರತಿಭಟನೆಯ ದಿನಗಳ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಬೇಡಿಕೆಗಳಿಗೆ ಒಪ್ಪಿಕೊಂಡು ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದ್ದಾರೆ'ಸಾವಿರಾರು ಜನರು ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಿದ್ದಾರೆ ಆದ್ದರಿಂದ ಎಲ್ಲ ವೈದ್ಯರು ಕೆಲಸಕ್ಕೆ ಮರಳಬೇಕೆಂದು ಮನವಿ ಮಾಡುತ್ತೇನೆ' ಎಂದು ಮಮತಾ ಹೇಳಿದರು.
ಪಶ್ಚಿಮ ಬಂಗಾಳನ್ನು ಗುಜರಾತ್ ಆಗಿ ಪರಿವರ್ತಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ನೀವು ಬಂಗಾಳದಲ್ಲಿದ್ದರೆ, ನೀವು ಬಾಂಗ್ಲಾ ಕಲಿಯಬೇಕು" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತಾದ ಎಸ್.ಕೆ.ಕೆ.ಎಂ ಆಸ್ಪತ್ರೆಯ ಪ್ರತಿಭಟನಾಕಾರರು ತಮ್ಮ ಭೇಟಿಯ ವೇಳೆಯಲ್ಲಿ ತಮ್ಮನ್ನು ನಿಂದಿಸಿದ ವೈಧ್ಯರನ್ನು ಕ್ಷಮಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿಯೇತರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತುಎನ್.ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು ಆಗುವ ಕುರಿತಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ಚುನಾವಣೆ ಫಲಿತಾಂಶದ ನಂತರ ಅವರಿಬ್ಬರಿಗೂ ಈಗ ಮೋದಿ ಎದುರಿಸುವುದು ಕಷ್ಟವಾಗಿರಬಹುದು ಎಂದು ಹೇಳಿದರು.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.