TeamLease RegTech ಹಾಗೂ Observer Research Foundation (ORF) ಸಂಸ್ಥೆಗಳು ಜಂಟಿಯಾಗಿ ತಯಾರಿಸಿದ ಸಂಶೋಧನಾ ವರದಿಯು ನಿರ್ಬಂಧಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ ಮತ್ತು ವ್ಯಾಪಾರಗಳನ್ನು ಸುಧಾರಿಸಲು ಶಿಫಾರಸುಗಳನ್ನು ಮಾಡುತ್ತದೆ.
Udyami Bharat: ಆತ್ಮನಿರ್ಭರ್ ಭಾರತಕ್ಕೆ ಎಂಎಸ್ಎಂಇಗಳ ಪಾತ್ರ ತುಂಬಾ ಮುಖ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 'ಉದ್ಯಮಿ ಭಾರತ' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಕಳೆದ 8 ವರ್ಷಗಳಲ್ಲಿ ಆತ್ಮ ನಿರ್ಭರ್ ಭಾರತವನ್ನು ರೂಪಿಸುವಲ್ಲಿ ಎಂಎಸ್ಎಂಇ ವಲಯ ಪ್ರಮುಖ ಪಾತ್ರವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪೇಟ್ಎಂ 2019-20ನೇ ಹಣಕಾಸು ವರ್ಷದಲ್ಲಿ ಎಂಎಸ್ಎಂಇಗಳಿಗೆ ಸಾಲವಾಗಿ 550 ಕೋಟಿ ರೂ. ನೀಡಿದೆ. ಆದರೆ ಈ ವರ್ಷ ಕಂಪನಿಯು ಈಗ ಈ ಮೊತ್ತವನ್ನು ಒಂದು ಸಾವಿರ ಕೋಟಿ ರೂಪಾಯಿಗಳಿಗೆ ಹೆಚ್ಚಿಸಿದೆ.
Jobs in MSME: ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಸಹಾಯದ ವ್ಯಾಪ್ತಿಯನ್ನು ವಿಸ್ತರಿಸಬೇಕು, ಇದರಿಂದ ಹೊಸ ಪ್ರತಿಭೆಗಳಿಗೆ ಮುಂದುವರಿಯಲು ಅವಕಾಶಗಳು ಸಿಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಮಾರು 20 ಲಕ್ಷ 97 ಸಾವಿರ ಕೋಟಿ ರೂ.ಗಳ ಆತ್ಮ ನಿರ್ಭರ್ ಭಾರತ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಕುರಿತು ಮೇ ನಲ್ಲಿ ವಿಸ್ತೃತ ಮಾಹಿತಿ ನೀಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪ್ಯಾಕೇಜ್ ನಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಣ್ಣ ಮತ್ತು ಮಧ್ಯಮವರ್ಗದ ವ್ಯಾಪಾರಿಗಳಿಗೆ ನೀಡುವುದಾಗಿ ಘೋಷಿಸಿದ್ದರು.
ಕೊರೋನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು 2020ರ ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೋವಿಡ್-19 ಕಾರಣದಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆಯನ್ನು ಸರ್ಕಾರವು ಘೋಷಿಸಿರುತ್ತದೆ. ಈಗಾಗಲೇ ಅಸ್ಥಿತ್ವದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಘಟಕಗಳು 2020ರ ಫೆಬ್ರವರಿ.29ರ ಅಂತ್ಯಕ್ಕೆ ಸಾಲ ಬಾಕಿ ಇರುವ ಮೊತ್ತದ ಮೇಲೆ ಗರಿಷ್ಠ ಶೇ.20 ರಷ್ಟು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.
ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ.
ಒಂದು ವೇಳೆ ನೀವೂ ಕೂಡ ನಿಮ್ಮ ಸ್ವಂತ ಉದ್ಯಮ ಆರಂಭಿಸಲು ಯೋಜನೆ ರೂಪಿಸುತ್ತಿದ್ದರೆ, LED ಬಲ್ಬ್ ಗಳ ಉದ್ಯಮ ಆರಂಭಿಸಬಹುದಾಗಿದೆ. ಮಿನಿಸ್ಟ್ರಿ ಆಫ್ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ ಪ್ರೈಸಸ್ (MSME Ministry) ಅಡಿ ಹಲವು ಸಂಸ್ಥೆಗಳು LED ತಯಾರಿಸುವ ತರಬೇತಿ ನೀಡುತ್ತಿವೆ.
ನರೇಂದ್ರ ಮೋದಿ ಸರ್ಕಾರವು ಜನರು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ನಗದು ಬೆಂಬಲ ನೀಡಲು ನಿರಾಕರಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ಕಾರ ಸಕ್ರಿಯವಾಗಿ ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ( Rahul Gandhi,) ಶನಿವಾರ ಆರೋಪಿಸಿದ್ದಾರೆ.
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಬೆನ್ನೆಲುಬು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಣ್ಣಿಸಿದ್ದಾರೆ. ಈ ವಲಯದಲ್ಲಿ 12 ಕೋಟಿ ಜನರು ಉದ್ಯೋಗದಲ್ಲಿದ್ದಾರೆ. 20 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ನಲ್ಲಿ ಈ ಕ್ಷೇತ್ರಕ್ಕೆ 3 ಲಕ್ಷ ಕೋಟಿ ಸಾಲ ನೀಡಲಾಗುವುದು ಎಂದು ಸಿತಾರಾಮನ್ ಘೋಷಿಸಿದ್ದಾರೆ ಜೊತೆಗೆ ಅದರ ಪರಿಭಾಷೆ ಅಥವಾ ವ್ಯಾಖ್ಯಾನವನ್ನು ಕೂಡ ಬದಲಾಯಿಸಲಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಲಾಭವಾಗಲಿದೆ ಎಂದಿದ್ದಾರೆ.
ಮೂಲಗಳ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆಯಲ್ಲಿ, ಎಕ್ಸಿಮ್ ಬ್ಯಾಂಕ್ಗೆ ಹೆಚ್ಚುವರಿ ಬಂಡವಾಳವನ್ನು ವಿಸ್ತರಿಸುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಗಣಿಸಬಹುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.