ಸಿಎಂ ಸ್ಥಾನಕ್ಕಾಗಿ ಮುಡಾ ದಾಖಲೆ ಹೊರ ತಂದಿದ್ದು ಡಿಕೆಶಿ
ಬಿಜೆಪಿಯವ್ರು ಸಿದ್ದರಾಮಯ್ಯರನ್ನ ಕೆಳಗಿಳಿಸುವ ಪ್ರಯತ್ನಿಸಿಲ್ಲ
ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ
ಅಧಿಕಾರದಲ್ಲಿ ಇದ್ದವರೇ ಆ ರೀತಿ ದಾಖಲೆ ತೆಗೆಯಲು ಸಾಧ್ಯ
ವಿರೋಧ ಪಕ್ಷದವರು ಹೊರಗೆ ತೆಗೆಯಲು ಸಾಧ್ಯವಿಲ್ಲ ಎಂದ ರೆಡ್ಡಿ
Next CM of Karnataka: ತುಮಕೂರು ನಗರದಲ್ಲಿ ನಡೆಯುತ್ತಿದ್ದ DSS ಸಭೆಯಲ್ಲಿ ʼಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿʼ ಎಂಬ ಘೋಷಣೆ ಕೇಳಿಬಂದಿದೆ. ಸತೀಶ್ ಜಾರಕಿಹೊಳಿಯವರ ಸಮ್ಮುಖದಲ್ಲೇ ಈ ಘೋಷಣೆ ಹೊರಬಿದ್ದಿದೆ.
MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಜನರ ಆಶೀರ್ವಾದ ಇರೋವರೆಗೂ ಯಾರೂ ನನ್ನ ಏನೂ ಮಾಡೋಕಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರೆ ಆದ್ರೆ ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಕ್ರಾಂಬಿನೆಟ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಹಿಂದಿನ ಯಾವುದೋ ಕೇಸ್ ನ ಎಫ್ಐಆರ್ ಇಟ್ಕೊಂಡು ಆಟವಾಡ್ತಿದ್ದಾರೆ. ದ್ವೇಷದ ರಾಜಕಾರಣ ಮಾಡ್ತಿದ್ದಾರೆ.
ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಂದಿದ್ದು, ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದರೂ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವುದು ಸರಿಯಲ್ಲ- ಶಾಸಕ ಮಹೇಶ ಟೆಂಗಿನಕಾಯಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.