ಸರ್ಕಾರದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
ವನವಾಸದಲ್ಲಿದ್ದ ಪಾಂಡವರು ತಮ್ಮ ಅಜ್ಞಾತ ವಾಸ ಮುಗಿಸಿ ಅದರಲ್ಲೂ ಬೃಹನ್ನಳೆ ವೇಷದಲ್ಲಿದ್ದ ಅರ್ಜುನ ತನ್ನ ಆಯುಧ ಇಟ್ಟಿದ್ದ ಶಮೀ ವೃಕ್ಷಕ್ಕೆ ಪೂಜೆ ಸಲ್ಲಿಸಿ ಆಯುಧ ಪಡೆದ ದಿನದ ಪ್ರತೀಕವಾಗಿ ನವರಾತ್ರಿಯಲ್ಲಿ ಶಮೀ ವೃಕ್ಷಕ್ಕೆ ಪೂಜೆ ಸಲ್ಲಿಸುವ ಪದ್ದತಿಯೂ ಇದೆ.
ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ- ಎಸ್.ಟಿ. ಸೋಮಶೇಖರ್
ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮೆರವಣಿಗೆಗೆ ವಿಧ್ಯುಕ್ತ ಚಾಲನೆ ನೀಡಿದರು.ಸಾಯಂಕಾಲ ನಿಗದಿತ ಸಮಯದಲ್ಲಿ ಅರೆಮನೆಯ ಮುಂಬಾಗದಿಂದ 8ನೇ ಬಾರಿಗೆ ಚಿನ್ನದ ಅಂಬಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿಯನ್ನು ಅರ್ಜುನ ಹೊತ್ತು ಸಾಗಲಿದ್ದಾನೆ.
ಇತಿಹಾಸದಲ್ಲಿ ಮೊದಲಬಾರಿಗೆ ಎನ್ನುವಂತೆ ದಶಮಿ ಕಾರ್ಯಕ್ರಮಗಳು ವಿಜಯದಶಮಿಯಂದು ನಿಂತು ಮತ್ತೊಂದು ದಿನದಂದು ನಡೆಯುತ್ತಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ.
ದಸರಾ ಹಬ್ಬ ಆಶ್ವಯುಜ ಪಾಡ್ಯದ ದಿನ ಪ್ರಾರಂಭಗೊಂಡು ವಿಜಯದಶಮಿಯ ದಿನ ಮುಕ್ತಾಯಗೊಳ್ಳುತ್ತದೆ. ದಸರಾ ಹಬ್ಬ ರಾಜ ಒಡೆಯರ್ ಕಾಲದಿಂದಲೂ ನಡೆದು ಬರುತ್ತಿರುವುದರ ಬಗ್ಗೆ ಉಲ್ಲೇಖಗಳಿದೆ. ಇದು ಒಡೆಯರ್ ವಂಶದಲ್ಲಿ ಪರಂಪರಾನುಗತವಾಗಿ ಆಚರಿಸುತ್ತಾ ಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.