ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ವಿರುದ್ಧದ ಅತ್ಯಾಚಾರದ ಆರೋಪ ಗಂಭೀರವಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ, ಪಕ್ಷವು ಈ ವಿಷಯದ ಬಗ್ಗೆ ಚರ್ಚಿಸಿ ಅದರ ಬಗ್ಗೆ ಆದಷ್ಟು ಬೇಗ ತೀರ್ಮಾನಿಸುತ್ತದೆ ಎಂದು ಹೇಳಿದರು.
ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಮಹಿಳೆಯ ಮೇಲೆ ಅತ್ಯಾಚಾರದ ಆರೋಪವನ್ನು ನಿರಾಕರಿಸಿದ್ದು, ಆದರೆ ಆಕೆಯ ಸಹೋದರಿಯೊಂದಿಗೆ ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಹೇಳಿದ್ದಾರೆ.ಅವರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ.ಮಹಿಳೆಯು ಈಗಾಗಲೇ ದೂರನ್ನು ದಾಖಲಿಸಿದ್ದಾರೆ ಆದರೆ ಎಫ್ಐಆರ್ ಇನ್ನೂ ದಾಖಲಾಗಬೇಕಾಗಿದೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಬಗ್ಗೆ ಮಾಧ್ಯಮಗಳಲ್ಲಿ ಆಧಾರರಹಿತ ವರದಿಗಳಿವೆ ಎಂದು ಎನ್ಸಿಪಿ ಮುಖ್ಯ ವಕ್ತಾರ ಮಹೇಶ್ ತಪಸೆ ಹೇಳಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಕ್ಷವನ್ನು ಬುಧವಾರ ತೊರೆದರು.ಖಡ್ಸೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರ ಸಚಿವ ಜಯಂತ್ ಪಾಟೀಲ್ ಪ್ರಕಟಣೆ ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ನೇತೃತ್ವದ ಒಕ್ಕೂಟದಲ್ಲಿ ಮುಂದಿನ ಉಪಮುಖ್ಯಮಂತ್ರಿಯಾಗಿ ತಮ್ಮ ಸೋದರಳಿಯ ಅಜಿತ್ ಪವಾರ್ ಅವರನ್ನು ನೇಮಕ ಮಾಡುವ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ನಿರಾಕರಿಸಿದ್ದಾರೆ.
ಮಹಾರಾಷ್ಟ್ರದ ವಿಧಾನಸಭಾ ಸ್ಪೀಕರ್ ಹುದ್ದೆಗೆ ಭಾನುವಾರ ವಿಧಾನಸಭೆಯಲ್ಲಿ ನಡೆದ ಸ್ಪೀಕರ್ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಮುಖಂಡ ಕಿಸಾನ್ ಕಾಥೋರೆ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡರು.ಈ ಹಿನ್ನಲೆಯಲ್ಲಿ ಕಾಂಗ್ರೆಸ್-ಎನ್ಸಿಪಿ-ಶಿವಸೇನೆ ಮೈತ್ರಿಕೂಟದ ಅಭ್ಯರ್ಥಿ ನಾನಾ ಪಟೋಲೆ ಅವಿರೋಧವಾಗಿ ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಉದ್ಧವ್ ಸರ್ಕಾರದ ಬಹುಮತ ಸಾಬೀತು, ಹೊಸ ಸ್ಪೀಕರ್ ಆಯ್ಕೆ, ವಿರೋಧ ಪಕ್ಷದ ಮುಖಂಡರ ಘೋಷಣೆ ಮತ್ತು ರಾಜ್ಯಪಾಲರ ಭಾಷಣಕ್ಕಾಗಿ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ.
ಶನಿವಾರ ಮಧ್ಯಾಹ್ನ 2 ಗಂಟೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ತನ್ನ ಬಹುಮತವನ್ನು ಸಾಬೀತುಪಡಿಸುತ್ತದೆ. ಹೊಸ ಸ್ಪೀಕರ್ ಆಯ್ಕೆ, ವಿರೋಧ ಪಕ್ಷದ ಮುಖಂಡರ ಘೋಷಣೆ ಮತ್ತು ರಾಜ್ಯಪಾಲರ ಭಾಷಣಕ್ಕಾಗಿ ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ವಿಶೇಷ ಸಭೆ ಕರೆಯಲಾಗಿದೆ.
ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷಗಳ ನಡುವಿನ ಮೈತ್ರಿಗಳಿಗೆ ನಿರ್ಬಂಧಗಳಿಲ್ಲ, ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ನಡುವಿನ ಮತದಾನದ ನಂತರದ ಮೈತ್ರಿಯನ್ನು ಪ್ರಶ್ನಿಸಿದ ಹಿಂದೂ ಮಹಾಸಭಾ ಮುಖಂಡರ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ರೈತರ ಕಲ್ಯಾಣ ಮತ್ತು ಅಭಿವೃದ್ಧಿಯು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ ಎಂದು ಶಿವಸೇನೆ-ಕಾಂಗ್ರೆಸ್-ಎನ್ಸಿಪಿ ಮೈತ್ರಿಕೂಟದ ಮುಖಂಡರು ಇಂದು ಮುಂಬೈನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಮಹಾರಾಷ್ಟ್ರದಲ್ಲಿ ಒಂದು ತಿಂಗಳ ಕಾಲ ನಡೆದ ರಾಜಕೀಯ ಬಿಕ್ಕಟ್ಟಿಗೆ ತೆರೆಬಿದ್ದಿದೆ. ಈಗ 59 ವರ್ಷದ ಉದ್ಧವ್ ಠಾಕ್ರೆ ಮನೋಹರ್ ಜೋಶಿ ಮತ್ತು ನಾರಾಯಣ್ ರಾಣೆ ನಂತರ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಸಿಎಂ ಆದ ಮೂರನೇ ಶಿವಸೇನೆ ನಾಯಕರಾಗಿದ್ದಾರೆ.
ಆದಿತ್ಯ ಠಾಕ್ರೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಇಬ್ಬರನ್ನೂ ಭೇಟಿಯಾಗಿ, ಅವರ ತಂದೆ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.