ಮಹಾರಾಷ್ಟ್ರದ ರಾಜಕೀಯವನ್ನು ಅರ್ಥಮಾಡಿಕೊಳ್ಳುವವರು ಈ ಸರ್ಕಾರದ ಕಿಂಗ್ ಮೇಕರ್ ಶರದ್ ಪವಾರ್ ಅವರ ಇಚ್ಛೆಯಿಲ್ಲದೆ ಮಹಾರಾಷ್ಟ್ರದ ಹೊಸ ಸರ್ಕಾರದಲ್ಲಿ ಏನೂ ಆಗುವುದಿಲ್ಲ ಎಂದು ನಂಬುತ್ತಾರೆ, ಏಕೆಂದರೆ ಶರದ್ ಪವಾರ್ ಈ ಸರ್ಕಾರದ ಅಡಿಪಾಯ ಎಂದು ನಂಬಲಾಗಿದೆ.
ಮಂಗಳವಾರ ತಡರಾತ್ರಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾದ ನಂತರ ಆದಿತ್ಯ ಠಾಕ್ರೆ, "ಮಹಾ ವಿಕಾಸ್ ಅಗಾಡಿ ಅವರು ಉದ್ಧವ್ ಠಾಕ್ರೆ ಸಾಹೇಬರನ್ನು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದಾರೆ. ರಾಜ್ಯಪಾಲರು ಇಂದು ನಮಗೆ ಸಮಯವನ್ನು ನೀಡಿದರು ಮತ್ತು ಸರ್ಕಾರ ರಚಿಸುವ ಅವಕಾಶವನ್ನು ನಾವು ಬಯಸುತ್ತೇವೆ. ಜನರಿಗೆ ಮತ್ತು ರಾಜ್ಯಕ್ಕೆ ಸ್ಥಿರವಾದ ಸರ್ಕಾರವನ್ನು ಒದಗಿಸಿ ನಾವು ಜನಪರ ಕೆಲಸ ಮಾಡಲು ಬಯಸುತ್ತೇವೆ" ಎಂದರು.
ಕಳೆದ ವಾರಾಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯ ಅಚ್ಚರಿಯ ಪುನರಾಗಮನಕ್ಕೆ ಪ್ರಮುಖ ಕಾರಣವಾದ ಅಜಿತ್ ಪವಾರ್ ಮಂಗಳವಾರ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಸಿಎಂ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ NCP ನಾಯಕ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ಸೋಮವಾರ ಎರಡೂ ಕಡೆಯ ವಾದ-ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿಗೆ ಸಂಬಂಧಿಸಿದ ಪ್ರಕರಣದ ತನ್ನ ಆದೇಶವನ್ನು ಇಂದು ಬೆಳಿಗ್ಗೆ 10.30 ಕ್ಕೆ ಕಾಯ್ದಿರಿಸಿತ್ತು. ತೀರ್ಪು ಓದಿದ ನ್ಯಾಯಮೂರ್ತಿ ಎನ್.ವಿ.ರಮಣ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ಹಾಗಾಗಿ ಆದಷ್ಟು ಬೇಗ ಬಹುಮತ ಸಾಬೀತು ಪಡಿಸಬೇಕು ಎಂಬ ಮಹತ್ವದ ಆದೇಶ ಹೊರಡಿಸಿದರು.
ರಾತ್ರೋರಾತ್ರಿ ಏನೆಲ್ಲಾ ಬೆಳವಣಿಗೆಗಳಾಗಬಹುದು. ನಸುಕಿನಲ್ಲೇ ಸರ್ಕಾರವೊಂದು ಕಣ್ಣು ಬಿಡಬಹುದು. ಚುನಾವಣಾ ಪೂರ್ವ ಮೈತ್ರಿ ಪುಡಿಪುಡಿಯಾಗಬಹುದು. ಚುನಾವಣೋತ್ತರ ಮೈತ್ರಿ ಹತ್ತಿಕ್ಕಲು ಷಡ್ಯಂತ್ರ ನಡೆಯಬಹುದು. ಈ ಎಲ್ಲಾ ಚಮತ್ಕಾರಗಳ ನಡುವೆಯೂ ದೇಶದ ಜನ ನಿರೀಕ್ಷೆ ಇಟ್ಟುಕೊಂಡಿರುವುದು ನ್ಯಾಯಾಂಗದ ಮೇಲೆ.
ರಾಜ್ ಭವನಕ್ಕೆ ಸಲ್ಲಿಸಲಾದ ಪತ್ರದಲ್ಲಿ, ಮೂರು ಪಕ್ಷಗಳು ಪ್ರಸ್ತುತ ಮಹಾರಾಷ್ಟ್ರದ ಸರ್ಕಾರವು ಸಂಖ್ಯಾ ಬಲವನ್ನು ಹೊಂದಿಲ್ಲ ಎಂದು ಹೇಳಿಕೊಂಡಿದ್ದು, ಈ ಸರ್ಕಾರಕ್ಕೆ ಬಹುಮತ ಸಾಬೀತಿಗೆ ಅಗತ್ಯವಾದ ಸಂಖ್ಯಾಬಲವಿಲ್ಲ ಎಂದು ತಿಳಿಸಿದೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ಎರಡನೇ ದಿನ ಸುಪ್ರೀಂ ಕೋರ್ಟ್ನಲ್ಲಿ ವಾದ-ವಿವಾದ ಮಂಡನೆಯಾಯಿತು. ಅರ್ಜಿ ವಿಚಾರಣೆಯನ್ನು ಆಲಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠವು ನಾಳೆಗೆ ತೀರ್ಪು ಕಾಯ್ದಿರಿಸಿದೆ.
ಮಹಾರಾಷ್ಟ್ರದ ಬೆಳವಣಿಗೆಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ತಂದಿದೆ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಬಿನೊಯ್ ವಿಶ್ವಂ ಹೇಳಿದ್ದಾರೆ.
ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಬೆಳಿಗ್ಗೆ 10.30 ಕ್ಕೆ ವಿಚಾರಣೆಯನ್ನು ಪ್ರಾರಂಭಿಸಲಿದ್ದು, ಮಧ್ಯಾಹ್ನ 12 ರ ಮೊದಲು ತೀರ್ಪು ಹೊರಬರುವ ನಿರೀಕ್ಷೆಯಿದೆ.
ಮಹಾರಾಷ್ಟ್ರ ರಾಜಕೀಯ ನಾಟಕ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಈಗ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಟ್ವಿಟ್ಟರ್ ನಲ್ಲಿ ಬ್ರೇಕಿಂಗ್ ನ್ಯೂಸ್ ಗಾಗಿ ತೆರಳುತ್ತಿರುವ ಕ್ಯಾಮರಾಮೆನ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೊಸ ಸರ್ಕಾರ ರಚಿಸುವುದರ ವಿರುದ್ಧ ಶಿವಸೇನೆ, ಕಾಂಗ್ರೆಸ್ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ. ಇದೇ ವೇಳೆ ಮಹಾರಾಷ್ಟ್ರ ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸುವ ರಾಜ್ಯಪಾಲರ ಪತ್ರವನ್ನು ತೋರಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸೂಚಿಸಿದೆ.
ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಶನಿವಾರ ಕಬಡ್ಡಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈ ವಿಡಿಯೋವನ್ನು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕವನ್ನು ಚಿತ್ರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
Maharashtra : ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಯಲ್ಲಿ NCPಯ ಕೆಲ ನಾಯಕರು ಬಿಜೆಪಿಗೆ ಬೆಂಬಲ ಘೋಷಿಸಿ ಸರ್ಕಾರ ರಚನೆಗೆ ಸಾಥ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪಕ್ಷದ ಮುಖ್ಯಸ್ಥ ಶರದ್ ಪವಾರ್ 'ಬಂಡಾಯ ಶಾಸಕರಿಗೆ' ಪಕ್ಷಾಂತರ ವಿರೋಧಿ ಕಾನೂನಿನ(Anti-defection-law) ಬಗ್ಗೆ ಎಚ್ಚರಿಕೆ ನೀಡಿದರು. ಏನಿದು 'ಪಕ್ಷಾಂತರ ವಿರೋಧಿ' ಕಾನೂನು? ಎಂದು ತಿಳಿಯುವುದು ಮುಖ್ಯ ...
ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಸತತ ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಜಿತ್ ಪವಾರ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.