ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್ಸಿಪಿ ಸರ್ಕಾರ ರಚನೆಯಾದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ಗೆ ಮಾಸ್ಟರ್ ಸ್ಟ್ರೋಕ್ ನೀಡಿ ರಾಜ್ಯದಲ್ಲಿ ಬಿಜೆಪಿ-ಎನ್ಸಿಪಿ ಮೈತ್ರಿ ಸರ್ಕಾರ ರಚಿಸಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಎನ್ಸಿಪಿಯಾ ಅಜಿತ್ ಪವಾರ್ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದರು.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಉಭಯ ಪಕ್ಷಗಳು ತಮ್ಮ ಚರ್ಚೆಯನ್ನು ಪೂರ್ಣಗೊಳಿಸಿವೆ ಮತ್ತು ಈಗ ಮೈತ್ರಿಕೂಟದ ರೂಪುರೇಷೆಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಶಿವಸೇನೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್-ಎನ್ಸಿಪಿ ಒಕ್ಕೂಟ ಗುರುವಾರ ತಿಳಿಸಿದೆ.
"ಭಾರತದ ಸಂವಿಧಾನದ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಎಂಬ ಪದವಿದೆ. ಶಿವಸೇನೆ ಸಂವಿಧಾನವನ್ನು ಅನುಸರಿಸುತ್ತದೆ. ಎಲ್ಲಾ ರೈತರು ಮತ್ತು ಸಾಮಾನ್ಯ ಜನರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಸಹಾಯ ನೀಡಬೇಕು. ಶಿವಾಜಿ ಮಹಾರಾಜ್ ಅವರು ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸುವ ಮೂಲಕ ತಮ್ಮ ರಾಜ್ಯವನ್ನು ಮಾಡಿದರು" ಎಂದು ಶಿವಸೇನೆ ನಾಯಕ ಸಂಜಯ್ ರೌತ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜಕೀಯದ ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆಯೊಂದಿಗಿನ ಮೈತ್ರಿಗೆ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಕುರಿತಾಗಿ ಶರದ್ ಪವಾರ್ ಅವರ ಭಿನ್ನ ಹೇಳಿಕೆಗಳನ್ನು ಲೆಕ್ಕಿಸದೆ, ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆ ಸರ್ಕಾರ ರಚನೆ ಕಾರ್ಯ ನಡೆಯಲಿದೆ ಎಂದು ಶಿವಸೇನೆ ಹೇಳಿದೆ.
ಮಹಾರಾಷ್ಟ್ರದ ರಾಜಕೀಯ ನಾಟಕ ಈಗ ದೆಹಲಿಗೆ ಸ್ಥಳಾಂತರಗೊಂಡಿದೆ. ಮೊದಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾದರು. ಇದಾದ ನಂತರ ಶಿವಸೇನೆ ಸಂಸದ ಸಂಜಯ್ ರೌತ್ ಅವರು ಎನ್ಸಿಪಿ ಮುಖ್ಯಸ್ಥರನ್ನು ಭೇಟಿ ಮಾಡಲು ಅವರ ನಿವಾಸವನ್ನು ತಲುಪಿದರು.
ಸೋನಿಯಾ ಗಾಂಧಿ ಅವರೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ದೆಹಲಿಯ 10, ಜನಪಥ್ ನಿವಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷರ ಭೇಟಿ ಬಳಿಕ ತಿಳಿಸಿದರು.
ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆಗಾಗಿ ವಿಧಾನಗಳನ್ನು ರೂಪಿಸಲು ಎನ್ಸಿಪಿ-ಕಾಂಗ್ರೆಸ್ ಜಂಟಿ ಸಮನ್ವಯ ಸಮಿತಿಯ ನಿರ್ಣಾಯಕ ಸಭೆ ಪ್ರಸ್ತುತ ಮುಂಬೈನ ಟ್ರೈಡೆಂಟ್ ಹೋಟೆಲ್ನಲ್ಲಿ ನಡೆಯುತ್ತಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮಹಾರಾಷ್ಟ್ರದಲ್ಲಿ(Maharashtra) ಹೊಸ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮುಂಬೈಯಿಂದ ದೆಹಲಿಗೆ ರಾಜಕೀಯ ಆಂದೋಲನ ತೀವ್ರಗೊಂಡಿದೆ. ಶಿವಸೇನೆ(Shiv Sena) ಮತ್ತು ಎನ್ಸಿಪಿ(NCP) ನಡುವೆ ಹೊಸ ಸರ್ಕಾರ ರಚನೆಯಲ್ಲಿ ಕಾಂಗ್ರೆಸ್(Congress) ಪಾತ್ರ ಏನು ಎಂದು ಚರ್ಚಿಸಲು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
ನವೆಂಬರ್ 7 ರೊಳಗೆ ಹೊಸ ಸರ್ಕಾರವನ್ನು ಪಡೆಯಲು ರಾಜ್ಯವು ವಿಫಲವಾದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗುವುದು ಎಂಬ ಹೇಳಿಕೆಯ ಮೇಲೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಎನ್ಸಿಪಿ ನಾಯಕ ನವಾಬ್ ಮಲಿಕ್ ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.