GST Council : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕೌನ್ಸಿಲ್ನ ಸಭೆಯು ಜೂನ್ 22 ರಂದು ಇಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ.
ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಸಚಿವರಿದ್ದಾರೆ.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
Nirmala Sitharaman : ಪ್ರಧಾನಿ ಮೋದಿಯವರ ಕೊನೆಯ ಅವಧಿಯಲ್ಲಿ, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಮೂರನೇ ಬಾರಿಗೆ ಮಹಿಳಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ದಾಖಲೆ ನಿರ್ಮಿಸಿದ್ದಾರೆ.
PM Modi Oath Ceremony: NDA ಮೈತ್ರಿಕೂಟಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) 12, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ 16, ಏಕನಾಥ್ ಶಿಂಧೆ ಬಣದ ಶಿವಸೇನೆ 7, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ 5ರಲ್ಲಿ ಗೆಲುವು ಸಾಧಿಸಿದೆ. ಇದರ ಜೊತೆಗೆ ಸಣ್ಣ ಪಕ್ಷಗಳು ಮತ್ತು ಪಕ್ಷೇತರರು NDAಗೆ ಬೆಂಬಲ ನೀಡಿದ್ದು, 300ರ ಗಡಿ ದಾಟಿದೆ.
ಚಲಾವಣೆಯಲ್ಲಿರುವ ₹500 ಮುಖಬೆಲೆಯ ನೋಟುಗಳ ಸಂಖ್ಯೆ ಅತ್ಯಧಿಕ ಅಂದರೆ 5.16 ಲಕ್ಷದಷ್ಟಿದೆ. ಅದೇ ರೀತಿ ₹10 ಮುಖಬೆಲೆಯ ನೋಟುಗಳ ಸಂಖ್ಯೆ 2.49 ಲಕ್ಷದಷ್ಟಿದ್ದು 2ನೇ ಸ್ಥಾನದಲ್ಲಿದೆ ಎಂದು ಆರ್ಬಿಐ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿದೆ.
Lok Sabha Election 2024: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.
Lok Sabha Election 2024: ಪ್ರೊ.ರಾಜೀವ್ ಗೌಡ ಸಮರ್ಥ ಸಂಸದ ಆಗುವ, ನಾಡಿನ ಜನತೆಯ ಧ್ವನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯವೆಂದು ಸಿಎಂ ಸಿದ್ದರಾಮಯ್ಯನವರು ಭವಿಷ್ಯ ನುಡಿದಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ ಅವರಿಗೆ ಧನ್ಯವಾದಗಳು ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
CM Siddaramaiah: ಈಗಲೂ ಕಾಲ ಮಿಂಚಿಲ್ಲ, ಸನ್ಮಾನ್ಯ ನಿರ್ಮಲಾ ಸೀತಾರಾಮನ್ ಅವರೇ, ದಯವಿಟ್ಟು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾಗಿರುವ ಬರಪರಿಹಾರ ಮತ್ತು ತೆರಿಗೆ ಪಾಲನ್ನು ಕೊಟ್ಟು ಬಿಡಿ. ಮತ್ತೆ ಮತ್ತೆ ಸುಳ್ಳುಗಳ ಮೂಲಕ ನಿಮ್ಮ ವೈಫಲ್ಯವನ್ನು ಸಮರ್ಥಿಸಿಕೊಳ್ಳಲು ಹೋಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ ಎಂಬುದನ್ನು ನೆನಪಿನಲ್ಲಿ ಇಡಬೇಕು. ಮೈ ಟ್ಯಾಕ್ಸ್ ಮೈ ರೈಟ್ ಕುರಿತು ತಪ್ಪು ಅರ್ಥದಲ್ಲಿ ಮಾತನಾಡಿದರೆ, ದೇಶದ ಹಿತ ಆಗಲಾರದು ಎಂದು ವಿಶ್ಲೇಷಿಸಿದ್ದಾರೆ.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
Congress guarantee schemes: ʼನಮ್ಮವರೇ ನಮಗೆ ಮೂಲ' ಎಂಬಂತೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆಯಲ್ಲಿ, ಅನುದಾನದಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ, ಅಕ್ಕಿ ಕೊಡುವ ವಿಚಾರದಲ್ಲಿ, ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲಿ ಅನ್ಯಾಯವಾಗುತ್ತಿರುವುದು ಆ ಸೂರ್ಯ ಚಂದ್ರರಷ್ಟೇ ಸತ್ಯ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಲಕ್ಷದ್ವೀಪ ಸೇರಿದಂತೆ ದೇಶದ ದ್ವೀಪಗಳಿಗಾಗಿ ಯೋಜನೆಗಳನ್ನು ಘೋಷಿಸಿದರು.
Budget 2024 : ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಬಜೆಟ್ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.