Lok Sabha Election 2024: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.
Lok Sabha Election 2024: ಪ್ರೊ.ರಾಜೀವ್ ಗೌಡ ಸಮರ್ಥ ಸಂಸದ ಆಗುವ, ನಾಡಿನ ಜನತೆಯ ಧ್ವನಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಸೂರ್ಯ ಪೂರ್ವದಲ್ಲಿ ಹುಟ್ಟೋದು ಎಷ್ಟು ಸತ್ಯವೋ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರೊ.ರಾಜೀವ್ ಗೌಡ ಗೆಲ್ಲೋದು ಅಷ್ಟೇ ಸತ್ಯವೆಂದು ಸಿಎಂ ಸಿದ್ದರಾಮಯ್ಯನವರು ಭವಿಷ್ಯ ನುಡಿದಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ ಅವರಿಗೆ ಧನ್ಯವಾದಗಳು ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
CM Siddaramaiah: ಈಗಲೂ ಕಾಲ ಮಿಂಚಿಲ್ಲ, ಸನ್ಮಾನ್ಯ ನಿರ್ಮಲಾ ಸೀತಾರಾಮನ್ ಅವರೇ, ದಯವಿಟ್ಟು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾಗಿರುವ ಬರಪರಿಹಾರ ಮತ್ತು ತೆರಿಗೆ ಪಾಲನ್ನು ಕೊಟ್ಟು ಬಿಡಿ. ಮತ್ತೆ ಮತ್ತೆ ಸುಳ್ಳುಗಳ ಮೂಲಕ ನಿಮ್ಮ ವೈಫಲ್ಯವನ್ನು ಸಮರ್ಥಿಸಿಕೊಳ್ಳಲು ಹೋಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನಾವು ದೇಶದ ಹಿತದಲ್ಲಿ ತೆರಿಗೆ ಕಟ್ಟುತ್ತೇವೆ ಎಂಬುದನ್ನು ನೆನಪಿನಲ್ಲಿ ಇಡಬೇಕು. ಮೈ ಟ್ಯಾಕ್ಸ್ ಮೈ ರೈಟ್ ಕುರಿತು ತಪ್ಪು ಅರ್ಥದಲ್ಲಿ ಮಾತನಾಡಿದರೆ, ದೇಶದ ಹಿತ ಆಗಲಾರದು ಎಂದು ವಿಶ್ಲೇಷಿಸಿದ್ದಾರೆ.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
Congress guarantee schemes: ʼನಮ್ಮವರೇ ನಮಗೆ ಮೂಲ' ಎಂಬಂತೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆಯಲ್ಲಿ, ಅನುದಾನದಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ, ಅಕ್ಕಿ ಕೊಡುವ ವಿಚಾರದಲ್ಲಿ, ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲಿ ಅನ್ಯಾಯವಾಗುತ್ತಿರುವುದು ಆ ಸೂರ್ಯ ಚಂದ್ರರಷ್ಟೇ ಸತ್ಯ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ಲಕ್ಷದ್ವೀಪ ಸೇರಿದಂತೆ ದೇಶದ ದ್ವೀಪಗಳಿಗಾಗಿ ಯೋಜನೆಗಳನ್ನು ಘೋಷಿಸಿದರು.
Budget 2024 : ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಬಜೆಟ್ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Union Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ(ಫೆಬ್ರವರಿ ೧) ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಿದ 6ನೇ ಬಜೆಟ್ ಇದಾಗಿತ್ತು.
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Education Budget 2024:ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಸರ್ಕಾರವು ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. (Budget 2024 News In Kannada / Business News In Kannada)
3-day week off : ಮಧ್ಯಂತರ ಬಜೆಟ್ನಲ್ಲಿ ಎಲ್ಲಾ ಸೆಕ್ಟರ್ನ ಉದ್ಯೋಗಿಗಳಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 3 ದಿನಗಳ ವಾರದ ರಜೆ ನೀತಿಯನ್ನು ಘೋಷಿಸಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಿದ್ರೆ ಈ ಸುದ್ದಿ ನಿಜವೇ..? ಬನ್ನಿ ತಿಳಿಯೋಣ..
Interim Budget 2024 Big Announcements:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ನಾಲ್ಕು ವರ್ಗಗಳ ಅಭಿವೃದ್ಧಿಗೆ ಗರಿಷ್ಠ ಒತ್ತು ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ನಾಲ್ಕು ವರ್ಗಗಳೆಂದರೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರು.
Budget 2024: ಬಜೆಟ್ ದಿನದಂದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ, ಹಣಕಾಸು ಸಚಿವರು ತಮ್ಮ ವೇಳಾಪಟ್ಟಿಯಂತೆ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ತಲುಪಿದರು. ನಂತರ ತಮ್ಮ ತಂಡದೊಂದಿಗೆ ಸಂಸತ್ ಭವನವನ್ನು ತಲುಪಿದರು.
Union Budget 2024: ಮುಂದಿನ ಹಣಕಾಸು ವರ್ಷಕ್ಕೆ ಕೃಷಿ ಸಾಲದ ಗುರಿಯನ್ನು 22-25 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರವು ಮಧ್ಯಂತರ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಮೂಲಕ ಕೇಂದ್ರ ಸರ್ಕಾರವು ಪ್ರತಿಯೊಬ್ಬ ಅರ್ಹ ರೈತರಿಗೆ ಸಾಂಸ್ಥಿಕ ಸಾಲದ ಪ್ರವೇಶವನ್ನು ಮತ್ತಷ್ಟು ಖಚಿತಪಡಿಸುವ ಸಾಧ್ಯತೆ ಇದೆ. (Business News In Kannada / Budget 2024 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.