ಫೆಬ್ರವರಿ 1 ರಂದು ಬಜೆಟ್ಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅರ್ಥಶಾಸ್ತ್ರಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಂತೆ, ಇತ್ತ ಕಡೆ ನಿರ್ಮಲಾ ಸೀತಾರಾಮನ್ ಅವರು ಈ ಸಭೆಯಲ್ಲಿ ಗೈರು ಹಾಜರಾಗಿರುವುದಕ್ಕೆ ಈಗ ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.
ಇತ್ತೀಚೆಗೆ ಬಿಡುಗಡೆಯಾದ ಫೋರ್ಬ್ಸ್ ವರ್ಲ್ಡ್ಸ್ 100 ಮೋಸ್ಟ್ ಪವರ್ಫುಲ್ ವುಮನ್(Forbes Worlds 100 Most Powerful Woman) ಪಟ್ಟಿಯಲ್ಲಿ, ನಿರ್ಮಲಾ ಸೀತಾರಾಮನ್ 34 ನೇ ಸ್ಥಾನದಲ್ಲಿದ್ದಾರೆ.
ಪಶ್ಚಿಮ ಬಂಗಾಳದ ವಿವಿಧ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಕೆ.ಜಿ.ಗೆ 140 ರೂ.ಗೆ ಏರಿದರೆ, ಹೈದರಾಬಾದ್ನಲ್ಲಿ ಪ್ರತಿ ಕೆ.ಜಿ.ಗೆ 150 ರೂ. ತಲುಪಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನ, ಹಣಕ್ಕಿಂತ ಈರುಳ್ಳಿ ಕಳ್ಳತನದ ಪ್ರಕರಣಗಳು ದೇಶದಲ್ಲಿ ಹೆಚ್ಚಾಗಿವೆ. ಇತ್ತೀಚೆಗಷ್ಟೇ, ಮಧ್ಯಪ್ರದೇಶದ ಮಾಂಡ್ಸೌರ್ನ ರೈತ 30,000 ರೂ. ಮೌಲ್ಯದ ಈರುಳ್ಳಿ ಬೆಳೆಯನ್ನು ಕಳ್ಳರು ಬೇರುಸಹಿತ ಕಿತ್ತೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗೌರವಿಸುತ್ತಿದ್ದರೂ ಸಹ, ಅವರು ತಮ್ಮ ಆಲೋಚನೆಗಳನ್ನು ಬಲವಾಗಿ ಮಂಡಿಸಲು ಸಾಧ್ಯವಾಗದ ಕಾರಣ ಅವರನ್ನು 'ನಿರ್ಬಲ' (ದುರ್ಬಲ) ಎಂದು ಕರೆಯಬೇಕೆಂದು ಅನಿಸುತ್ತದೆ ಎಂದು ಹೇಳಿದರು.
ಇಂತಹ ವಿಷಯಗಳು ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುತ್ತವೆ. ತನ್ನ ನಂಬಿಕೆಯನ್ನು ಹರಡುವ ಬದಲು ಉತ್ತರಗಳನ್ನು ಪಡೆಯುವ ಉತ್ತಮ ಮಾರ್ಗಗಳಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆರ್ಥಿಕ ಬೆಳವಣಿಗೆ ಇಳಿದಿರಬಹುದು ಆದರೆ ಆರ್ಥಿಕ ಹಿಂಜರಿತವಿಲ್ಲ, ಮತ್ತು ದೇಶದಲ್ಲಿ ಯಾವುದೇ ಆರ್ಥಿಕ ಹಿಂಜರಿತ ಉಂಟಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಮುಂದಿನ ಮಾರ್ಚ್ ವೇಳೆಗೆ ಸರ್ಕಾರವು ಮಾರಾಟವಾಗುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ವಾಣಿಜ್ಯ ಸಚಿವಾಲಯವು ವಾಷಿಂಗ್ಟನ್ನೊಂದಿಗಿನ ವ್ಯಾಪಾರ ಒಪ್ಪಂದದ ಬಗ್ಗೆ ಕಾರ್ಯ ನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಾತುಕತೆಗಳನ್ನು ಮುಕ್ತಾಯಗೊಳಿಸುವ ಭರವಸೆಯಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕಗಳು ಕುಸಿತಕ್ಕೆ ಪ್ರಮುಖ ಕಾರಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಘುರಾಮ್ ರಾಜನ್ ಅವರ ಜೋಡಿ ಕಾರಣ ಎಂದು ಆರೋಪಿಸಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಈಗ ಮನಮೋಹನ್ ಸಿಂಗ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರಿ ಬ್ಯಾಂಕುಗಳಲ್ಲಿನ ಸಾಲ ನೀಡುವ ಕೆಟ್ಟ ಸಂಪ್ರದಾಯದಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಕುಸಿತಕ್ಕೆ ಕಾರಣವಾಯಿತು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂತಹ ಪರಿಸ್ಥಿತಿಗೆ ಪ್ರಮುಖವಾಗಿ ಮನಮೋಹನ್ ಸಿಂಗ್-ರಘುರಾಮ್ ರಾಜನ್ ಕಾರಣ ಎಂದು ಅವರು ಹೇಳಿದರು.
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್ ಹಗರಣ ಬೆಳಕಿಗೆ ಬಂದ ನಂತರ ಸಂಜಯ್ ಗುಲಾಟಿ ತೀವ್ರ ಒತ್ತಡದಲ್ಲಿದ್ದರು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರು ಬ್ಯಾಂಕಿನಲ್ಲಿ ದೊಡ್ಡ ಮೊತ್ತದ ಹಣ ಠೇವಣಿದಾರರಾಗಿದ್ದರು. ನಾಲ್ಕು ಖಾತೆಗಳಲ್ಲಿ ಸುಮಾರು 80 ಲಕ್ಷ ರೂ. ಠೇವಣಿ ಇಟ್ಟಿದ್ದರು ಎನ್ನಲಾಗಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಚೌಕಟ್ಟನ್ನು ಪರಿಚಯಿಸಿ ಎರಡು ವರ್ಷಗಳಾದರೂ ಇನ್ನೂ ಕೆಲವು ನ್ಯೂನತೆಗಳನ್ನು ಹೊಂದಿರಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮಿಗಳು ಮತ್ತು ತೆರಿಗೆ ತಜ್ಞರ ಮುಂದೆ ಒಪ್ಪಿಕೊಂಡಿದ್ದಾರೆ.
ಬಹುಕೋಟಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಮ್ಸಿ) ಬ್ಯಾಂಕ್ ಹಗರಣಕ್ಕೂ ಮತ್ತು ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ, ಇದರಲ್ಲಿ ಸಾವಿರಾರು ಠೇವಣಿದಾರರು ತಮ್ಮ ಹಣವನ್ನು ಅದರ ಪ್ರವರ್ತಕರು ವಂಚಿಸಿದ್ದಾರೆ.
ನೀವು ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವ ಮಾಡಬೇಕಿದ್ದರೆ, ಅದನ್ನು ಎರಡು ದಿನಗಳಲ್ಲಿ ಅಂದರೆ 24 ಮತ್ತು 25 ಸೆಪ್ಟೆಂಬರ್ (ಮಂಗಳವಾರ ಮತ್ತು ಬುಧವಾರ) ನಿಭಾಯಿಸಬೇಕು. ಇದರ ನಂತರ, ಸೆಪ್ಟೆಂಬರ್ 26 ರಿಂದ ನಾಲ್ಕು ದಿನಗಳವರೆಗೆ ದೇಶಾದ್ಯಂತದ ಬ್ಯಾಂಕುಗಳು ಕಾರ್ಯ ನಿರ್ವಹಿಸುವುದಿಲ್ಲ.
ದೇಶೀಯ ಕಂಪನಿಗಳು ಮತ್ತು ಹೊಸ ಉತ್ಪಾದನಾ ಸಂಸ್ಥೆಗಳ ಮೇಲಿನ ಕಾರ್ಪೊರೇಟ್ ತೆರಿಗೆ ದರವನ್ನು ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ. ಈ ನಿರ್ಧಾರದಿಂದಾಗಿ ನಿಧಾನಗತಿಯ ಆರ್ಥಿಕತೆ ಪುನಚ್ಚೇತನಗೊಳ್ಳಲಿದೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.