ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ಸಂಜೆ ನಡೆಯಲಿರುವ ಸಂಪುಟ ಸಭೆ
೩೦೦೦ ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ
ರಾಜ್ಯದ ಸಿವಿಲ್ ಸೇವಾ ಹುದ್ದೆಗಳ ಮುಂಬಡ್ತಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಸಂಪುಟ ಅನುಮೋದನೆ ಸಾಧ್ಯತೆ
ಉತ್ತರ ಕರ್ನಾಟಕ ಭಾಗಕ್ಕೆ 3,000 ಕೋಟಿ ರು.ಗೂ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ
ಎಂಟನೇ ದಿನಕ್ಕೆ ಕಾಲಿಟ್ಟ ಬೆಳಗಾವಿ ಅಧಿವೇಶನ
ಉತ್ತರ ಕ.ಭಾಗದ ಸಮಸ್ಯೆಗಳ ಮೇಲೆ ಚರ್ಚೆ ಅಂತ್ಯ
ಇಂದು ಸಿಎಂರಿಂದ ಉತ್ತರ ಕ.ಮೇಲಿನ ಚರ್ಚೆಗೆ ಉತ್ತರ
ಒಟ್ಟು 5 ದಿನ ನಡೆದ ಉ.ಕ ಸಮಸ್ಯೆಗಳ ಮೇಲಿನ ಚರ್ಚೆ
ಚರ್ಚೆಯಲ್ಲಿ ಪಾಲ್ಗೊಂಡ ಬಹುತೇಕ ಎಲ್ಲಾ ಸದಸ್ಯರು
ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ
ಇಂದೂ ಸಹ ಕಲಾಪದಲ್ಲಿ ತೀವ್ರ ಗದ್ದಲದ ಸಾಧ್ಯತೆ
ಉತ್ತರ ಕ.ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ
ಬ್ರಿಟಿಷ್ ವೇಟ್ಲಿಫ್ಟರ್ ಲಾನ್ಸೆಸ್ಟನ್ ಎಲಿಯಟ್ (1874–1930) ಇಂಗ್ಲೆಂಡ್ ಪರವಾಗಿ 1896 ರ ಅಥೆನ್ಸ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದಷ್ಟೇ ಅಲ್ಲದೆ ಚಿನ್ನದ ಪದಕ ಗೆದ್ದ ಮೊದಲ ಕ್ರೀಡಾಪಟು ಎನ್ನುವ ಹೆಗ್ಗಳಿಕೆಯನ್ನು ಹೊಂದಿದ್ದಾರೆ.ಇಂತಹ ಮಹಾನ್ ಕ್ರೀಡಾಪಟು ಉತ್ತರ ಕರ್ನಾಟಕದ ಗ್ರಾಮದಲ್ಲಿ ಜನಿಸಿದ್ದರು ಎನ್ನುವ ಸಂಗತಿ ಬಹುತೇಕರಿಗೆ ತಿಳಿದಿಲ್ಲ.ಹಾಗಾಗಿ ಈ ರೋಚಕ ಇತಿಹಾಸದ ಬಗ್ಗೆ ಇಂದು ತಿಳಿದುಕೊಳ್ಳೋಣ ಬನ್ನಿ.
ನಿಲುವಳಿ ಸೂಚನೆ ಮೇಲೆ ಚರ್ಚೆ ಮುಂದುವರಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೆಪ್ಟಂಬರ್ ತಿಂಗಳಲ್ಲಿ ಸುರಿದ ಮಳೆಯಿಂದ ಹಾನಿಗೀಡಾದ ಬೆಳೆ ನಷ್ಟಕ್ಕೆ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ರು. ಅಧಿಕಾರಿಗಳು ೧೦ರಷ್ಟು ಬೆಳೆ ನಷ್ಟವಾಗಿಲ್ಲ ಎಂದು ವರದಿ ಕೊಟ್ಟಿದ್ದಾರೆ
ರೊಟ್ಟಿ ಪಂಚಮಿಯು ಕೃಷಿ, ಭಕ್ತಿ, ಮತ್ತು ಸಾಮಾಜಿಕ ಸಾಮರಸ್ಯವನ್ನು ಒಳಗೊಂಡ ಸರಳ ಹಬ್ಬ. ಇದು ಕರ್ನಾಟಕದ ಗ್ರಾಮೀಣ ಜೀವನದ ಸೌಂದರ್ಯವನ್ನು ಮತ್ತು ಕೃತಜ್ಞತೆಯ ಮನೋಭಾವವನ್ನು ತೋರಿಸುತ್ತದೆ.
ಉತ್ತರ ಕರ್ನಾಟಕವು ದಕ್ಷಿಣ ಭಾರತದ ಡೆಕ್ಕನ್ ಪ್ರಸ್ಥಭೂಮಿಯ ಉತ್ತರ ಭಾಗದಲ್ಲಿ ನೆಲೆಗೊಂಡಿದೆ. ಇದು ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವಿನ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಿತು.
ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಇಂದು ಸಭೆ
ಬೆಳಗಾವಿ ಅಧಿವೇಶನದಲ್ಲಿ ಗುಡುಗಲು ನಡೆದಿದೆ ಪ್ಲಾನ್
ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರ ಜೊತೆ ಚರ್ಚೆ
ಮಧ್ಯಾಹ್ನ 1.30ಕ್ಕೆ ಸಭೆ ಕರೆದ ಆರ್.ಅಶೋಕ್
ಉತ್ತರ ಕರ್ನಾಟಕದವರಿಗೆ ಒಗಟು ಮಾತಿನ ಅರ್ಥ ಗೊತ್ತಾಗಲ್ಲ
ಅದು ಸಿ.ಟಿ.ರವಿ, ವಿಜಯೇಂದ್ರ ಅವರಿಗೆ ಮಾತ್ರ ಗೊತ್ತಾಗುತ್ತೆ
ಥೋ.. ಬಿಡ್ರಿ ನಾವು ಬಿಜೆಪಿ ಅವರಿಗಾಗಿ ಹೋರಾಟ ಮಾಡ್ತಿಲ್ಲ
ವಿಜಯೇಂದ್ರ ವಿರುದ್ಧ ಯಾದಗಿರಿಯಲ್ಲಿ ಯತ್ನಾಳ್ ಹೇಳಿಕೆ
ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಬೆಳಗಾವಿ ಹತ್ತಿರದ ಚನ್ನಮ್ಮನ ಕಿತ್ತೂರು, ನಂದಗಡ, ರಾಜಹಂಸಗಡ ಸೇರಿದಂತೆ ಇನ್ನೂ ಅನೇಕ ಪ್ರವಾಸಿ ತಾಣಗಳ ಕುರಿತು ಜಾಗತಿಕ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಈ ಭಾಗದ ಜನರ ಧೈರ್ಯ, ಕಾರ್ಯಕ್ಷಮತೆ, ಹಾಗೂ ನೈಸರ್ಗಿಕ ಸಂಪತ್ತುಗಳ ಕುರಿತು ಜಾಗೃತಿ ಮೂಡಿಸಬೇಕು.
ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.
Karataka Dhamanaka : ಮಾರ್ಚ್ 8 ರಂದು ತೆರೆ ಕಂಡಿರುವ ಸಿನಿಮಾ 'ಕರಟಕ ದಮನಕ' ಈಗಾಗಲೇ ಜನರ ಮನಗೆದ್ದಿದ್ದು ವಿಭಿನ್ನ ರೀತಿಯ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದೀಗ ಸಿನಿಮಾ ತಂಡ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದೆ. ಎಲ್ಲೆಲ್ಲಿ ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ.
North Karnataka: ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ.10,433 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.
New bus service: ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬರುವ ಶುಕ್ರವಾರ ಮಹಾಶಿವರಾತ್ರಿ ದಿನದಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.
ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಶಕ್ತಿ ಯೋಜನೆ ಆರಂಭಗೊಂಡಾಗ 84 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಈಗ 1ಕೋಟಿ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿರುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ 884 ಹೊಸ ಬಸ್ ಖರೀದಿಸಲಾಗುವುದು. ಈಗಾಗಲೇ 375 ಬಸ್ ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಹೊಸಪೇಟೆಯ ಕಲುಷಿತ ನೀರು ಸರಬರಾಜು ಪ್ರಕರಣ
ವಿಜಯನಗರ ಕಲುಷಿತ ನೀರು ಸೇವನೆಗೆ ಮೊದಲ ಬಲಿ
ಸೀತಮ್ಮ ಕಲುಷಿತ ನೀರು ಸೇವಿಸಿ ಸಾವಿಗೀಡಾದ ಮಹಿಳೆ
ಹೊಸಪೇಟೆಯ 100 ಹಾಸಿಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ
ನೀರಲ್ಲಿ ಪಾಚಿ ಮಿಶ್ರಿತ ನೀರು ಗ್ರಾಮಕ್ಕೆ ಸರಬರಾಜು ಆಗಿತ್ತು
ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.