ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರೆಡ್ಡಿ ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಾಕ್ಷ್ಯಚಿತ್ರಕ್ಕೆ ವಿಧಿಸಿರುವ ನಿರ್ಬಂಧಗಳನ್ನು ಪ್ರಶ್ನಿಸಿದರು.
ಫೆಬ್ರವರಿ 10 ರಂದು ಗಾಂಧಿ ಅವರಿಗೆ ಪತ್ರ ಬರೆದಿರುವ ಕಾರ್ಯದರ್ಶಿ, ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಲೋಕಸಭೆಗೆ ಫೆಬ್ರವರಿ 15 ರೊಳಗೆ ತಮ್ಮ ವಿರುದ್ಧ ವಿಶೇಷ ಹಕ್ಕುಗಳ ಉಲ್ಲಂಘನೆಯ ನೋಟಿಸ್ಗೆ ಉತ್ತರವನ್ನು ನೀಡುವಂತೆ ಕೇಳಿಕೊಂಡಿದ್ದಾರೆ.ಈ ಮನವಿಯನ್ನು ಸ್ಪೀಕರ್ ಪರಿಗಣಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 12, 2023 ರಂದು ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯ 246-ಕಿಮೀ ವಿಭಾಗವನ್ನು ಉದ್ಘಾಟಿಸಿದರು. ದೆಹಲಿ-ದೌಸಾ-ಲಾಲ್ಸೋಟ್ ವಿಭಾಗದ ಉದ್ಘಾಟನೆಯನ್ನು ಗುರುತಿಸಲು ಪ್ರಧಾನಿ ರಿಮೋಟ್ನ ಗುಂಡಿಯನ್ನು ಒತ್ತಿದರು. ಇದು ದೆಹಲಿಯಿಂದ ಜೈಪುರ ನಡುವಿನ ಪ್ರಯಾಣದ ಸಮಯವನ್ನು 5 ಗಂಟೆಗಳಿಂದ 3.5 ಗಂಟೆಗಳಿಗೆ ಕಡಿಮೆ ಮಾಡುತ್ತದೆ.
ಜಮಿಯತ್ ಉಲಾಮಾ-ಇ-ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಶುಕ್ರವಾರ ಇಸ್ಲಾಂ ಧರ್ಮವು ವಿಶ್ವದ ಅತ್ಯಂತ ಹಳೆಯ ಧರ್ಮವಾಗಿದೆ ಎಂದು ಹೇಳಿದ್ದಾರೆ.ಶುಕ್ರವಾರ ಸಂಘಟನೆಯ 34ನೇ ಸಾಮಾನ್ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಸೇರಿದ್ದಂತೆ ಮಹಮೂದ್ ಅವರಂತಹ ಜನರಿಗೂ ಸೇರಿದೆ ಎಂದು ಹೇಳಿದರು.
ಒಟ್ಟಾರೆಯಾಗಿ, ಗ್ರೀನ್ ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಗೆ ಪ್ರಚಾರದ ಕೊರತೆ ಕಳವಳದ ವಿಚಾರವಾಗಿದ್ದು, ಈ ಯೋಜನೆಯ ಕುರಿತು ಎಚ್ಎಎಲ್ನ ಧೋರಣೆಯ ಕುರಿತು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಎಚ್ಎಎಲ್ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ಕ್ರಮ ಕೈಗೊಂಡು, ಈ ಘಟಕಕ್ಕೆ ಸೂಕ್ತ ಪ್ರಚಾರ ನೀಡಬೇಕಿದೆ. ಆ ಮೂಲಕ ಭಾರತದ ಏರೋಸ್ಪೇಸ್ ಉದ್ಯಮಕ್ಕೆ ಅಗತ್ಯ ಉತ್ತೇಜನ ನೀಡಬೇಕಿದೆ.
ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಹೊಸ ವೀಡಿಯೋ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಿತು. ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಿಎಂ ಮೋದಿ ಬಿಲ್ ಗೇಟ್ಸ್ ವೀಡಿಯೊದ ಕುರಿತು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ, ಬಿಲ್ ಗೇಟ್ಸ್ ತಯಾರಿಸಿದ ರೊಟ್ಟಿ ನೋಡಿ ʼಸೂಪರ್ʼ ಅಂತ ಶೀರ್ಷಿಕೆ ನೀಡಿದ್ದಾರೆ.
“ಭಾರತದ ಜನರು ಪರದೆಯ ಮೇಲೆ ಸರಾಸರಿ ಆರು ಗಂಟೆಗಳ ಕಾಲ ಕಳೆಯುತ್ತಾರೆ. ಇದು ಕಳವಳಕಾರಿ ವಿಷಯ ಎಂದು ದೆಹಲಿಯಲ್ಲಿ ನಡೆದ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಹೇಳಿದರು. ನಮ್ಮ ದೇಶದಲ್ಲಿ ಗ್ಯಾಜೆಟ್ ಬಳಕೆದಾರರಿಗೆ ಸರಾಸರಿ ಆರು ಗಂಟೆಗಳ ಸ್ಕ್ರೀನ್ ಸಮಯವು ಅರ್ಥಹೀನವಾಗಿದೆ ಅದು ತಯಾರಕರಿಗೆ ಮಾತ್ರ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದರು.
Prime Minister Narendra Modi Republic Day Look: ಇಡೀ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ವರ್ಷ, ಈಜಿಪ್ಟ್ ಅಧ್ಯಕ್ಷ ಅಬಲ್ಡ್ ಫತಾಹ್ ಎಲ್-ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬಸಂತ್ ಪಂಚಮಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡರು. ಪ್ರಧಾನ ಮಂತ್ರಿ ಧರಿಸಿದ ಈ ಪೇಟ ಪ್ರತೀ ವರ್ಷ ಬೇರೆ ಬೇರೆಯಾಗಿದ್ದು, ಇದಕ್ಕೆ ಅರ್ಥವೂ ಇದೆ.
ಬಿಜೆಪಿ ಹೈಕಮಾಂಡ್ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದೆ. ಇಂದು ಯಾದಗಿರಿ, ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದು, ಕಮಲ ಪಾಳಯದ ಹುಮ್ಮಸ್ಸಿಗೆ ಕಾರಣವಾಗಿದೆ. ಮೋದಿ 10 ಸಾವಿರ ಕೋಟಿ ಹಣದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಮೋದಿ ರಾಜ್ಯಕ್ಕೆ ಎಷ್ಟು ಸಾರಿ ಬರ್ತಾರೆ ಅಷ್ಟು ಒಳ್ಳೆಯದು. ಮೋದಿ ಕರ್ನಾಟಕ ಅಷ್ಟೇ ಅಲ್ಲ ದೇಶಕ್ಕೆ ಪ್ರಭಾವ ಬೀರಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನ ಮತ್ತು ಛತ್ತೀಸ್ಗಢದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅತಿಯಾದ ಆತ್ಮವಿಶ್ವಾಸ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು ಮತ್ತು ಸರ್ಕಾರದ ನೀತಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಜನರೊಂದಿಗೆ ಸಂಪರ್ಕ ಸಾಧಿಸುವಂತೆ ಹೇಳಿದರು.
ಸಿದ್ದರಾಮಯ್ಯ ಒಂದು ಕ್ಷೇತ್ರ ಇಲ್ಲವೇ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಅವರಿಗೇ ಬಿಟ್ಟ ವಿಚಾರ. ಆದರೆ, ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧಿಸಿದರೂ ಗೆದ್ದೆ ಗೆಲ್ತಾರೆ. ಬಾದಾಮಿ ಜನರಂತೂ ಅಲ್ಲೇ ನಿಲ್ಲಬೇಕೆಂದು ಬೆನ್ನತ್ತಿದ್ದಾರೆ ಎಂದು ಸಿದ್ದರಾಮಯ್ಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಮೋದಿಗೆ ಹೂ ಹಾರ ಹಾಕಲು ಬಂದಿದ್ದ ಬಾಲಕನ ಪ್ರಕರಣ. ನನಗೆ ಪ್ರಧಾನಿ ಮೋದಿ ಅಂದ್ರೆ ತುಂಬಾ ಪ್ರೀತಿ ಎಂದ ಬಾಲಕ. ಹುಬ್ಬಳ್ಳಿಯಲ್ಲಿ ಬಾಲಕ ಕುನಾಲ್ ದೊಂಗಡಿ ಹೇಳಿಕೆ. ಪೊಲೀಸ್ ಸರ್ಪಗಾವಲನ್ನು ಭೇದಿಸಿ ಮೋದಿಗೆ ಹಾರ ಹಾಕಿದ್ದ ಕುನಾಲ್ ದೊಂಗಡಿ. ಕುನಾಲ್ ದೊಂಗಡಿ ಹುಬ್ಬಳ್ಳಿಯ ತೊರವಿಯಕ್ಕಲದ ನಿವಾಸಿ.
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.
26ನೇ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ಶೋ ನಡೆಸುತ್ತಿದ್ದ ವೇಳೆ ಭಾರಿ ಭದ್ರತಾ ಲೋಪ ಎಸಗಿರುವ ಘಟನೆ ವರದಿಯಾಗಿದೆ. ಗೇಟ್ ಹಾರಿ ಹಾರ ಹಾಕಲು ಯತ್ನಿಸಿದ ಯುವಕನೊಬ್ಬ ಭದ್ರತಾ ನಿಯಮಗಳನ್ನು ಉಲ್ಲಂಘಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡು ಯುವಕನನ್ನು ಭದ್ರತಾ ಸಿಬ್ಬಂದಿ ಎಳೆದೊಯ್ದಿದ್ದಾರೆ.
26ನೇ ಯುವ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಇಂದು ಪಿಎಂ ಮೋದಿಯವರಿಂದ ಜನೋತ್ಸವ ಉದ್ಘಾಟನೆ. ಕಾರ್ಯಕ್ರಮಕ್ಕೆ ಭಾರೀ ಬಿಗಿ ಭದ್ರತೆ ಒದಗಿಸಿದ ಪೊಲೀಸ್. ಹುಬ್ಬಳ್ಳಿಯಲ್ಲಿ 2900 ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ. ಭದ್ರತೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ರಾಷ್ಟ್ರ ಯುವಜನೋತ್ಸವದಲ್ಲಿ ಭಾಗಿಯಾಗಲು ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಬರುತ್ತಿದ್ದಾರೆ. ನಿಜವಾಗಿ ಇದು ಯುವ ಜನರಿಗೆ ಮಾರಕವಾದ ಉತ್ಸವ. ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ, ಉದ್ಯೋಗ ಕೇಳಿದ ಯುವಕರಿಗೆ ಪಕೋಡ ಮಾರಲು ಹೋಗಿ ಎಂದರು. ಮೋದಿ ಮೋದಿ ಎಂದು ಕೂಗುತ್ತಿದ್ದವರಿಗೆ ಬಿಜೆಪಿ ಪಕ್ಷ ಮಕ್ಮಲ್ ಟೋಪಿ ಹಾಕಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.