PM Modi: ಈ ಹಿಂದೆ ನೇಮಕಾತಿ ಪ್ರಕ್ರಿಯೆ ನಡೆಸಲು ಸಂಪೂರ್ಣ ಒಂದರಿಂದ ಒಂದೂವರೆ ವರ್ಷ ಬೇಕಾಗುತ್ತಿತ್ತು, ಆದರೆ ಇಂದು ಕೆಲವೇ ತಿಂಗಳಲ್ಲಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣಗೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Ayodhya Ram Mandir: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, 2024 ರ ಜನವರಿ 14 ರಿಂದ 26 ರ ನಡುವೆ ಯಾವುದೇ ದಿನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಯಾಗಲಿದೆ ಎನ್ನಲಾಗಿದೆ. ಇದರೊಂದಿಗೆ ಶತಮಾನಗಳ ಭಕ್ತರ ನಿರೀಕ್ಷೆಗೆ ತೆರೆ ಬೀಳಲಿದೆ.
ಪ್ರಧಾನಿಯಾಗಿ ಒಂಬತ್ತು ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಪ್ರಧಾನಿ ಮೋದಿ ದೇಶದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಜನರಿಂದ ಅಂತಹ ಪ್ರೀತಿಯನ್ನು ಪಡೆಯುವುದು ಯಾವಾಗಲೂ ವಿನಮ್ರ ಭಾವವನ್ನು ಮತ್ತು ಜನರಿಗಾಗಿ ಇನ್ನಷ್ಟು ಶ್ರಮಿಸುವ ಶಕ್ತಿಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಟೋಕಿಯೊದಲ್ಲಿ ನಡೆದ ಕ್ವಾಡ್ ನಾಯಕರ ಸಭೆಯಲ್ಲಿ, ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರವಾದ ಸವಾಲನ್ನು ನೀಡಿದರು. ಪ್ರಧಾನಿ ಮೋದಿ ಮಾತನಾಡುವ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರಮುಖ ನಾಗರಿಕರಿಂದ ಮನವಿಗಳ ಸುರಿಮಳೆಯನ್ನು ಎದುರಿಸುತ್ತಿದ್ದೇವೆ ಎಂದು ಇಬ್ಬರೂ ನಾಯಕರು ಹೇಳಿದ್ದಾರೆ.
5ನೇ ರಾಷ್ಟ್ರ ಮಟ್ಟದ ರೋಜಗಾರ್ ಮೇಳದಲ್ಲಿ ಅವರು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆಯುಷ್ ಇಲಾಖೆಯ ಸಚಿವರಾದ ಡಾ.ಮುಂಜಪರಾ ಮಹೇಂದ್ರಭಾಯಿ ಕಲುಭಾಯಿ, ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮುಂದಿನ ಒಂದು ವರ್ಷದಲ್ಲಿ ಸುಮಾರು 10 ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಗುರಿಯನ್ನು ಹೊಂದಿದ್ದಾರೆ. ದೇಶದ ಅಭಿವೃದ್ಧಿಗೆ ಉದ್ಯೋಗ ಸೃಷ್ಟಿ ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಒಂದು ದಿನದ ನಂತರ, ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಮೋದಿ ಅಲೆ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ.
Karnataka Assembly Election :28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 30ರಿಂದ 35 ಕಿ.ಮೀ. ವರೆಗೆ ಈ ರೋಡ್ ಶೋ ನಡೆಯಲಿದೆ.
ಮೋದಿಯವರಾದಿಯಾಗಿ ಬಿಜೆಪಿ ನಾಯಕರು ಕರ್ನಾಟಕವನ್ನು ನಂಬರ್ ಒನ್ ಮಾಡುತ್ತೇವೆ ಎನ್ನುತ್ತಾರೆ. ಮೋದಿಯವರು ಹೋದ ಎಲ್ಲ ರಾಜ್ಯಗಳಲ್ಲೂ ಹೀಗೆ ಹೇಳುತ್ತಾರೆ. ಇಷ್ಟಕ್ಕೂ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿದ್ದಿದ್ದರೆ ಕರ್ನಾಟಕವು ಅನೇಕ ವಿಚಾರಗಳಲ್ಲಿ ನಂಬರ್ ಒನ್ ಆಗಿತ್ತು. ಕೈಗಾರಿಕೆ, ಸೇವಾ ವಲಯಗಳಲ್ಲಿ ನಾವು ಮುಂದೆಯೇ ಇದ್ದೆವು. ಈ ಪ್ರತಿಷ್ಠೆಯನ್ನು ಹಾಳು ಮಾಡಿದ್ದೆ ಬಿಜೆಪಿ ಸರ್ಕಾರ.
ಕುಂದಾನಗರಿ ಬಳಿಕ ಕರಾವಳಿ ಭಾಗದಲ್ಲಿ ನಮೋ ಸುನಾಮಿ. ಉತ್ತರಕನ್ನಡ ಜಿಲ್ಲೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಹವಾ. 6 ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಮೋ ಮತಬೇಟೆ. ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಥ್. ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಬೃಹತ್ ಸಮಾವೇಶ.
ಮಧ್ಯಾಹ್ನ ಕುಂದಾನಗರಿ.. ಸಂಜೆ ಕರಾವಳಿಯಲ್ಲಿ ನಮೋ ಹವಾ. ಬೆಳಗಾವಿ.. ಉತ್ತರ ಕನ್ನಡ.. ದಕ್ಷಿಣ ಕನ್ನಡದಲ್ಲಿ ಮೋದಿ ಸುನಾಮಿ. ಬಹಿರಂಗ ಸಮಾವೇಶದ ಮೂಲಕ ಪ್ರಧಾನಿ ಮೋದಿ ಪವರ್ ಶೋ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ.
ಸಂಜೆ ಕಲಬುರಗಿಯಲ್ಲಿ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
Karnataka Assembly Election: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ, ಜೊತೆಗೆ ತಜ್ಞರ ಅಭಿಪ್ರಾಯವನ್ನು ಪಡೆದು ಈ ಪ್ರಣಾಳಿಕೆಯನ್ನು ಸಿದ್ದಪಡಿಸಲಾಗಿದೆ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
Karnataka Assembly Elections: ರಾಜ್ಯದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಘಟಾನುಘಟಿ ನಾಯಕರು ರಾಜ್ಯದೆಲ್ಲೆಡೆ ರೋಡ್ ಶೋ ಮುಖಾಂತರ ಮತ ಸೆಳೆಯಲು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ನಿನ್ನೆ (ಭಾನುವಾರ, 30 ಏಪ್ರಿಲ್) ಮೈಸೂರಿನಲ್ಲಿ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಲೋಪ ಕಂಡು ಬಂದಿದ್ದು, ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.