ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿರುವ ಭಾರತ ಸರ್ಕಾರದ ವಿರುದ್ಧ ವಿಶ್ವದ ಗಮನ ಸೆಳೆಯಲು ಮುಜಫರಾಬಾದ್ನಲ್ಲಿ ನಡೆಯಲಿರುವ 'ಮೆಗಾ ರ್ಯಾಲಿ'ವೊಂದನ್ನು ಉದ್ದೇಶಿಸಿ ಮಾತನಾಡುವುದಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದರು.
ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಈಗ ಸರ್ಕಾರದ ಮುಂದಿನ ಹಂತವೆಂದರೆ ಪಿಒಕೆ ಅನ್ನು ಭಾರತದ ಅಡಿಯಲ್ಲಿ ತರುವುದು ಎಂಬ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಹೇಳಿಕೆಗೆ ಜನರಲ್ ಬಿಪಿನ್ ರಾವತ್ ಪ್ರತಿಕ್ರಿಯಿಸಿದ್ದಾರೆ.
ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಈಗ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಮುಜಫರಾಬಾದ್ನಲ್ಲಿ ಬೃಹತ್ ರ್ಯಾಲಿ ನಡೆಸಲು ಮುಂದಾಗಿದ್ದು ಈ ವಿಚಾರವನ್ನು ಇಮ್ರಾನ್ ಖಾನ್ ಸ್ವತಃ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕಾಶ್ಮೀರ ಸಮಸ್ಯೆಯ ಬಗೆಗಿನ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಿಯಂತ್ರಣ ರೇಖೆಯ ಹತ್ತಿರ ಬಾಗ್ ಮತ್ತು ಕೋಟ್ಲಿ ವಲಯದ ಸುಮಾರು 2,000 ಸೈನಿಕರ ಮತ್ತೊಂದು ಬ್ರಿಗೇಡ್ ನ್ನು ಪಾಕಿಸ್ತಾನ ನಿಯೋಜಿಸಿದೆ ಎಂದು ಭಾರತೀಯ ಸೇನಾ ಮೂಲಗಳು ಗುರುವಾರ ತಿಳಿಸಿವೆ.
'ನಾವು ಯಾರ ಮೇಲೂ ದಾಳಿ ಮಾಡುವುದಿಲ್ಲ, ಆದರೆ ನಮ್ಮ ಮೇಲೆ ಯಾರು ಹಲ್ಲೆ ಮಾಡಿದರೂ, ನಾವು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತೇವೆ. ನಾವು ಯುದ್ಧೋಚಿತರಲ್ಲ- ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರ, ಈಗ ಜನರು ಭಾರತದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಏಕೀಕರಣಕ್ಕಾಗಿ ಪ್ರಾರ್ಥಿಸಬೇಕು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.