Bengaluru power cut : ರಾಜ್ಯ ರಾಜಧಾನಿಯ ಜನರಿಗೆ ಎರಡು ದಿನಗಳ ಕಾಲ ಪವರ್ ಕಟ್ ಸಮಸ್ಯೆ ಎದುರಾಗಲಿದೆ. ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಟಷ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಸಮಸ್ಯೆ ಎದುರಾಗಲಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ಸಾರಿಗೆ ನೌಕರರನ್ನು ಕತ್ತಲೆಗೆ ದೂಡಿದ ಸರ್ಕಾರ. ಪ್ರತಿಭಟನೆ ಸ್ಥಳದಲ್ಲಿ ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕ ಕಟ್. ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ. ಬೆಳಗಾವಿ ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಪ್ರತಿಭಟನೆ.
ತುಮಕೂರಿನ ಪಾವಗಡ ತಾಲೂಕು ಆಸ್ಪತ್ರೆ ಕರ್ಮಕಾಂಡ ಬಯಲಾಗಿದೆ. ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ರೋಗಿಗಳು ಪರದಾಡುವಂತಾಗಿದೆ. ಮಳೆಯಿಂದ ನಿನ್ನೆ ರಾತ್ರಿ 4 ಗಂಟೆ ಕಾಲ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಜನರೇಟರ್ ಇದ್ದರೂ ಸಿಬ್ಬಂದಿ ಆನ್ ಮಾಡಿಲ್ಲ. ಇದರಿಂದಾಗಿ ನಡುರಾತ್ರಿ ಕರೆಂಟ್ ಇಲ್ಲದೇ ನೂರಾರು ರೋಗಿಗಳ ಪರದಾಡುವಂತಾಯ್ತು.
ಬೆಂಗಳೂರಿನಲ್ಲಿ ಸೋಮವಾರ (ಜೂನ್ 27) ಮತ್ತು ಬುಧವಾರ (ಜೂನ್ 29) ನಡುವೆ ನಿಗದಿತ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನಿರ್ವಹಣೆ ಕೆಲಸಗಳು, ಮರಗಳನ್ನು ಕತ್ತರಿಸುವುದು, ಕೇಬಲ್ಗಳನ್ನು ಹಾಕುವುದು ಇತ್ಯಾದಿಗಳಿಂದಾಗಿ ಈ ಕಡಿತವನ್ನು ನಿಗದಿಪಡಿಸಿದೆ.
ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ, ಉತ್ತರ ವಲಯ ಮತ್ತು ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಶ್ಚಿಮ ವಲಯದಲ್ಲಿ ಮಾತ್ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಪವರ್ ಕಟ್ ಉಂಟಾಗಲಿದೆ.
ದೆಹಲಿಯಲ್ಲಿನ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯು ಸುಧಾರಿಸದಿದ್ದರೆ ವಿದ್ಯುತ್ ಸ್ಥಗಿತಗೊಳಿಸುವ ಬಗ್ಗೆ ದೆಹಲಿ ಸಚಿವರು ಎಚ್ಚರಿಕೆ ನೀಡಿದ ಎರಡು ದಿನಗಳ ನಂತರ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಡೀ ದೇಶದಲ್ಲಿ ವಿದ್ಯುತ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದ್ದಾರೆ.