ಎಚ್ಡಿ ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.
ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆಶ್ಲೀಲ ವಿಡಿಯೋ ಸಂಬಂಧ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣಗೆ ವಿಶೇಷ ತನಿಖಾ ತಂಡವು ಲುಕ್ ಔಟ್ ನೊಟೀಸ್ ನೀಡಿದೆ. ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದರು.
Parameshwar On Prajwal Revanna Case : ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಒಂದು ವೇಳೆ ರೇವಣ್ಣ ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದಲ್ಲಿ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Prajwal Revanna Case: ಈ ನಡುವೆ ಆರೋಪಿಯು ರಾಜತಾಂತ್ರಿಕ ಪಾಸ್ಪೋರ್ಟನ್ನು ಬಳಕೆ ಮಾಡಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.ಎಸ್.ಐ.ಟಿ ಯು ತನಿಖೆಯನ್ನು ಮುಂದುವರೆಸಬೇಕಾದರೆ ಆರೋಪಿಯ ವಿಚಾರಣೆ ನಡೆಸುವ ಅಗತ್ಯವಿದೆ
ರಶ್ಮಿ ಗೌತಮ್ ಅವರು ಪ್ರಾಣಿ ಪ್ರಿಯೆ. ಆಗಾಗ ಮೂಕ ಜೀವಿಗಳ ಮೇಲಿನ ಹಿಂಸೆಯನ್ನು ವಿರೋಧಿಸಿ ಧ್ವನಿ ಎತ್ತುತ್ತಾರೆ. ಪ್ರಾಣಿಗಳನ್ನೂ ಮನುಷ್ಯರಂತೆ ನಡೆಸಿಕೊಳ್ಳಿ ಎಂದು ಹೇಳುತ್ತಾರೆ. ಇದೀಗ ಅವರ ಇತ್ತೀಚಿನ ಇನ್ಟಾಗ್ರಾಮ್ ಸ್ಟೇಟಸ್ ಒಂದು ಸಂಚಲನ ಸೃಷ್ಟಿಸುತ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
Prajwal Revanna Pen Drive Case: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುತ್ತಾರೆಂಬುದು ಕೇಂದ್ರಕ್ಕೆ ಕನಸು ಬೀಳುತ್ತದೆಯೇ? ರಾಜ್ಯ ಸರ್ಕಾರ ತನ್ನ ತಪ್ಪನ್ನು ಕೇಂದ್ರದ ಮೇಲೆ ಹಾಕಲು ನೋಡುತ್ತಿದೆ ಎಂದು ಜೋಶಿ ಹೇಳಿದರು.
ಹೆಚ್.ಡಿ. ಕುಮಾರಸ್ವಾಮಿ ಅವರು ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.