ಕಾಂಗ್ರೆಸ್ ಪಕ್ಷದ ಒಳ ಜಗಳದಿಂದ ಆಡಳಿತ ಅದೋಗತಿಗೆ, ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಬೆಳಗಾವಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಜಗಳ ಬಗೆ ಹರಿಸಿಕೊಳ್ಳಿ, ಬೀದಿ-ಹಾದಿ ರಂಪ ಮಾಡ್ತಿದ್ದೀರಿ, ಸರಿಯಾಗಿ ಸರ್ಕಾರ ನಡೆಸಿ ಇಲ್ಲ ಬಿಟ್ಟು ಹೋಗಿ-ಜೋಶಿ.
ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೇಂದ್ರದತ್ತ ಬೆರಳು ತೋರಿ ಕಬ್ಬು ಬೆಳೆಗಾರರ ಹಿತರಕ್ಷಣೆಯಿಂದ ನುಣುಚಿಕೊಳ್ಳುವುದು ತರವಲ್ಲ. ಪ್ರಧಾನಿ ಮೋದಿ ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದ್ದು, ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತರಕ್ಷಣೆಗೆ ಹಿಂದೆಂದಿಗಿಂತಲೂ ಒಳ್ಳೇ ಕ್ರಮಗಳನ್ನೇ ಕೈಗೊಂಡಿದೆ ಎಂದು ವಿಸ್ತ್ರತವಾಗಿಯೇ ವಿವರಣೆ ನೀಡಿ ಸಿಎಂಗೆ ಚಾಟಿ ಬೀಸಿದ್ದಾರೆ.
Mysore dasara 2025 : ಬಾನು ಮುಷ್ತಾಕ್ ಹಣೆಯಲ್ಲಿ ಕುಂಕುಮ ಹಚ್ಚಿ ಬರಬೇಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇಫ್ತಾರ್ ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್ ಶಾಲೂ ಹೊದಿಸಿಕೊಂಡು ಸಿಎಂ ಹೋಗುತ್ತಾರಲ್ಲವೇ? ಎಂದು ಪ್ರಶ್ನೆ ಮಾಡಿದರು.
SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ನಾವು ಭಾರತೀಯ ಮುಸ್ಲಿಮರು, ಇಲ್ಲಿಯೇ ಇರುತ್ತೇವೆ.. ಅಲ್ಲಾ ಆಣೆಗೂ ಬೇಕಿದ್ರೆ ನಾನು ಪಾಕಿಸ್ತಾನದ ಜೊತೆ ಯುದ್ಧಕ್ಕೆ ಹೋಗುತ್ತೇನೆ.. ಸೂಸೈಡ್ ಬಾಂಬ್ ಕಟ್ಟಿಕೊಂಡು ಹೋಗುತ್ತೇನೆ ಎಂದ ಸಚಿವ ಜಮೀರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ.. ಜಮೀರ್ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದರು.
ವಕ್ಫ್ನಲ್ಲಿ ಪ್ರಮುಖವಾಗಿ ಆಡಳಿತಾತ್ಮಕವಾಗಿ ಪಾರದರ್ಶಕ ಬದಲಾವಣೆ ತರಬೇಕಿತ್ತು ಅದನ್ನು ಮಾಡಿದ್ದೇವೆ. ಹಾಗೆಂದ ಮಾತ್ರಕ್ಕೆ ದರ್ಗಾ, ಮಸೀದಿಯಂತಹ ಧಾರ್ಮಿಕ ಕೇಂದ್ರಗಳಿಗೆ ಧಕ್ಕೆ ತರುತ್ತೇವೆ ಎಂದಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದರು.
ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ ಮಹತ್ವದ ಸಮಾಲೋಚನೆ ಸಹ ನಡೆಸಿದರು.
ರಾಜ್ಯ ಸರ್ಕಾರದ್ದು ಕೇವಲ ವೋಟ್ ಬ್ಯಾಂಕ್ ಗಾಗಿ ಮುಸ್ಲಿಂ ಓಲೈಕೆಯ ಬಜೆಟ್ ಆಗಿದೆ. ಬಜೆಟ್ ಪೂರ್ತಿ ಮುಸ್ಲಿಂ ಮಯವಾಗಿದೆ. ದಲಿತರು ಸೇರಿದಂತೆ ಬೇರೆಲ್ಲಾ ವರ್ಗದವರನ್ನು ಕಡೆಗಣಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಸಿ ಕಿಡಿಕಾರಿದರು.
ರಾಜ್ಯ ಸರ್ಕಾರ ಅಕ್ಕಿ ಕೇಳಿದಾಗ ನಮ್ಮಲ್ಲಿ ಅಕ್ಕಿ ಇರಲಿಲ್ಲ. ಹಾಗಾಗಿ ಆಗ ಬಿಜೆಪಿ ಮತ್ತು ಬಿಜೆಪಿಯೇತರ ಅಧಿಕಾರವಿದ್ದ ಎಲ್ಲಾ ಸರ್ಕಾರಗಳಿಗೂ ಹೆಚ್ಚುವರಿ ಅಕ್ಕಿಯಿಲ್ಲ ಎಂದೇ ಹೇಳಲಾಗಿತ್ತು. ಬಳಿಕ ಕೇಂದ್ರ ಸರ್ಕಾರ, ಜೂನ್ ವೇಳೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಸಿದ್ಧವೆಂದು ರಾಜ್ಯ ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರಿಗೆ ತಿಳಿಸಿತ್ತು.
ರಾಜ್ಯಕ್ಕೆ ಎಷ್ಟು ಬೇಕಾದರೂ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂಬುದನ್ನು ಹೇಳಿದ್ದೇವೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಲು ಸಿದ್ಧವಿದ್ದಂತಿಲ್ಲ ಎಂದು ಜೋಶಿ ಹೇಳಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸಲು 10 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ಅವನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಳ್ಳಿಯಿಡುತ್ತಿದೆ ಎಂದು ಹರಿ ಹಾಯ್ಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.