ಕಾಂಗ್ರೆಸ್ ಪಕ್ಷವು ವಲಸೆಗಾರರಿಗೆ ವ್ಯವಸ್ಥೆ ಮಾಡಿದ ಬಸ್ ಗಳಿಗೆ ಅನುಮತಿ ನೀಡದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿ ಕುಟುಂಬದ ಸದಸ್ಯರ ವಿಶೇಷ ಸಂರಕ್ಷಣಾ ಗುಂಪು (ಎಸ್ಪಿಜಿ) ರಕ್ಷಣೆ ಹಿಂತೆಗೆದುಕೊಂಡಿರುವ ವಿಚಾರವಾಗಿ ಮಾತನಾಡುತ್ತಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ನಿರ್ಧಾರವು ರಾಜಕೀಯದ ಭಾಗ ಮತ್ತು ಇದು ನಡೆಯುತ್ತಲೇ ಇದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು. ಈ ಹಿನ್ನಲೆಯಲ್ಲಿ ಈಗ ಟ್ವೀಟ್ ಮಾಡಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ವಾದ್ರಾ ಆಡಳಿತಾರೂಡ ಬಿಜೆಪಿಗೆ ತನ್ನದೇ ಆದ ಸ್ವಾತಂತ್ರ್ಯ ಹೋರಾಟಗಾರ ಎಂದು ವ್ಯಂಗ್ಯವಾಡಿದರು.
ಭಾರತದ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ದೇಶದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಆದರೆ ಉತ್ತರ ಭಾರತೀಯರಲ್ಲಿ ಸಾಮರ್ಥ್ಯದ ಕೊರತೆ ಇರುವ ಕಾರಣ ಹಿಂದುಳಿದಿದ್ದಾರೆ ಎಂದು ಹೇಳಿದ್ದ ಕೇಂದ್ರ ಕಾರ್ಮಿಕ ಸಚಿವ್ ಸಂತೋಷ್ ಗಂಗ್ವಾರ್ ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ.
2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹೋದರ ರಾಹುಲ್ ಗಾಂಧಿಯನ್ನು ನಿನ್ನೆ ಶ್ರೀನಗರ ವಿಮಾನ ನಿಲ್ದಾಣದಿಂದ ತಡೆ ಹಿಡಿದಿದ್ದಕ್ಕೆ ಇಂದು ಅವರು ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ.
ಮಾಹಿತಿಯ ಪ್ರಕಾರ, ಇಲ್ಲಿ ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಗಳನ್ನು ಭೇಟಿ ಮಾಡಿ ಅವರ ಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ. ಈ ಸಮಯದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.
ಉತ್ತರ ಪ್ರದೇಶದ ಸೋನಭದ್ರದಲ್ಲಿ ಭೂವಿವಾದ ಹಿನ್ನಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 9 ಜನರು ಸಾವನ್ನಪ್ಪಿದ್ದರಲ್ಲದೆ 19 ಜನರು ಗಾಯಗೊಂಡಿದ್ದರು. ಈ ಘಟನೆಯ ಹಿನ್ನಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಯಲ್ಲಿ ಸೆಕ್ಷನ್ 144ನ್ನು ಜಾರಿ ಮಾಡಲಾಗಿತ್ತು.ಈ ವೇಳೆ ಸಂತ್ರಸ್ತರನ್ನು ಭೇಟಿ ಮಾಡಲು ತೆರಳಿದ್ದ ಪ್ರಿಯಾಂಕಾ ಗಾಂಧಿಗೆ ಪೊಲೀಸರು ತಡೆಯೋಡ್ಡಿದರು.
ಆಫ್ರಿಕಾದ ಗಾಂಧಿ ಎಂದೇ ಕರೆಯಲ್ಪಡುವ ನೆಲ್ಸನ್ ಮಂಡೇಲಾರ 101ನೇ ಜಯಂತಿಯಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಈಗ ನೆಲ್ಸನ್ ಮಂಡೇಲಾ ಜೊತೆಗಿರುವ ಫೋಟೋವೊಂದನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಅವರನ್ನು ಸ್ಮರಿಸಿದ್ದಾರೆ.
ರಾಹುಲ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, 2019 ರ ಚುನಾವಣೆಯ ಸೋಲಿನ ಜವಾಬ್ದಾರಿ ನನ್ನದೇ. ನಮ್ಮ ಪಕ್ಷದ ಭವಿಷ್ಯದ ಅಭಿವೃದ್ಧಿಗೆ ಹೊಣೆಗಾರಿಕೆ ಮುಖ್ಯವಾಗಿದೆ, ಅದಕ್ಕಾಗಿಯೇ ನಾನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಸ್ವರಾಜ್ ಭವನ ತಲುಪಲಿರುವ ಪ್ರಿಯಾಂಕ ಗಾಂಧಿ ಸಂಜೆ ಪಕ್ಷದ ಉನ್ನತ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.