INDIAN HIGH COMMISSION: ಯುನೈಟೆಡ್ ಕಿಂಗ್ಡಮ್ನಲ್ಲಿರುವ ಭಾರತೀಯ ಹೈಕಮಿಷನ್ ಎದುರು ಭಾರತೀಯರು ಸತತ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆಕ್ರೋಶದ ಮಧ್ಯೆಯು ಯುಕೆ ಪೋಲೀಸ್ ಡ್ಯಾನ್ಸ್ ಫುಲ್ ವೈರಲ್ ಆಗಿದೆ.
ಯೂತ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಪಟೇಲ್ ಮತ್ತು ಇತರ 6 ಮಂದಿಯ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 353 (ಹಲ್ಲೆ), 427 (50 ರೂ. ಮೇಲ್ಪಟ್ಟು ನಷ್ಟ ಉಂಟು ಮಾಡಿದ ಕಿಡಿಗೇಡಿತನ), 447 (ಅಪರಾಧ ಅತಿಕ್ರಮಣ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿ ಪ್ರಕರಣ ದಾಖಲಿಸಲಾಗಿದೆ.
ಆಟೋ ಸಾರಥಿಗಳಿಗೆ ಬೈಕ್, ಟ್ಯಾಕ್ಸಿ ಚಾಲಕರು ಕೌಂಟರ್ ನೀಡಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದು, ಆಟೋ ಚಾಲಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬಂಜಾರ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದಕ್ಕೆಲ್ಲ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ ನಾವು ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ, ಈ ರೀತಿಯ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಈ ಪ್ರಚೋದನೆಗೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Protest by Banjara community: ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿಂದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನಿಸಿದ್ದಾರೆ.
ರಾಯಚೂರಿನಲ್ಲಿ ಕಳಪೆ ಕಾಮಗಾರಿಯಿಂದ ನೂರಾರು ಮನೆಗಳು ಕುಸಿದು ಬಿದ್ದಿವೆ.. 80 ವರ್ಷ ಬಾಳಿಕೆ ಬರಬೇಕಾದ ಮನೆ 20 ವರ್ಷಕ್ಕೆ ನೆಲಸಮವಾಗಿವೆ. ಯೋಗ್ಯ ಮನೆ ಕೊಡಿ ಅಂತ ಜನ DC ಕಚೇರಿ ಮುಂದೆ ಪ್ರತಿಭಟನೆ ಮಾಡ್ತಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಲಕ್ಷಾಂತರ ರೈತರು ವಿವಿಧ ರಾಜ್ಯಗಳಿಂದ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಎಸ್ಕೆಎಂ ಹೇಳಿಕೊಂಡಿದೆ. ದೆಹಲಿ ಪೊಲೀಸರು 'ಕಿಸಾನ್ ಮಹಾಪಂಚಾಯತ್'ಗೆ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಮುಸ್ಲಿಂ ಯುವಕ ಆಜಾನ್ ಕೂಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಆಜಾನ್ ಹಾಗು ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಅವಹೇಳನ ಆರೋಪ ಹಿನ್ನೆಲೆ, ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ವಿರೋಧ ವ್ಯಕ್ತಪಡಿಸಿದ್ದಾರೆ.
Health Department : ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅವರನ್ನು ಖಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.ಆದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರ ವಿರುದ್ದ ಹಲವಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.