Pulwama: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡರು . ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಡಾ. ಉಮರ್ ಉನ್ ನಬಿ ಅವರ ಮನೆಯನ್ನು ಪುಲ್ವಾಮಾದ ಕೊಯಿಲ್ನಲ್ಲಿ ಅಧಿಕಾರಿಗಳು ಕೆಡವಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ. ಭಯೋತ್ಪಾದಕರ ಈ ಕೃತ್ಯಕ್ಕೆ ಭಾರತ ಮಾತ್ರವಲ್ಲ ಅಮೆರಿಕ ಇನ್ನಿತರ ರಾಷ್ಟ್ರಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ತಾನು ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ನಿನ್ನೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿತ್ತು.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಎಲ್ಲರೂ ಖಂಡಿಸಿದ್ದು, ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುವ ಮುಂದಿನ ದಿಟ್ಟ ಹೆಜ್ಜೆಗೆ ಸರ್ವ ಪಕ್ಷಗಳಿಂದಲೂ ಬೆಂಬಲ ಸೂಚಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದರು.
ಪಹಲ್ಗಾಮ್ನಲ್ಲಿ ಉಗ್ರ ಕೃತ್ಯ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ
ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಾಲೆ ಹತ್ತಿರದಿಂದ ಪ್ರೊಟೆಸ್ಟ್
ಹಳೆ ಹುಬ್ಬಳ್ಳಿ ಸರ್ಕಲ್ವರೆಗೆ ಪ್ರತಿಭಟನಾ ಮೆರವಣಿಗೆ
ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸಿದ ಎಸ್ಡಿಪಿಐ
ಧರ್ಮ ಕೇಳಿ ಕೊಲ್ಲುವ ಮಾನಸಿಕತೆ ನಾಶವಾಗಲಿ
ಪಹಲ್ಗಾಮ್ ಉಗ್ರ ದಾಳಿಯಲ್ಲಿ ಇಬ್ಬರು ಕನ್ನಡಿಗರೂ ಸೇರಿದಂತೆ 26 ಜನರು ಮೃತಪಟ್ಟಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಸ್ಥಳೀಯ ಮುಸಲ್ಮಾನ್ ವ್ಯಕ್ತಿಯೊಬ್ಬರು ಒಂದು ಹುಡುಗನನ್ನು ಬೆನ್ನ ಮೇಲೆ ಹೊತ್ತು ರಕ್ಷಣೆ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಹುಡುಗ ಬೇರಾರೂ ಅಲ್ಲ ಮೃತ ಮಂಜುನಾಥ್ ರಾವ್ ಅವರ ಮಗ ಅಭಿ ಜೈ. ಈ ಬಗ್ಗೆ ಮಂಜುನಾಥ್ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಹಿತಿ ನೀಡಿದ್ದಾರೆ.
Pahalgam Attack: ಪ್ರವಾಸಕ್ಕೆಂದು ತೆರಳಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಂತಹ ದುರಂತ ಘಟನೆಯಲ್ಲಿ ಕಣ್ಣ ಮುಂದೆಯೇ ಪತಿಯನ್ನು ಕಳೆದುಕೊಂಡ ಪಲ್ಲವಿಯವರು ಇಡೀ ಘಟನೆಯನ್ನು ಬಣ್ಣಿಸಿದ್ದಾರೆ.
Pahalgam Attack: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯೊಂದಿಗೆ ಸಂಬಂಧ ಹೊಂದಿದ್ದ ಉಗ್ರ ಆಸಿಫ್ ಶೇಖ್ ಮನೆಯನ್ನು ಭಾರತೀಯ ಸೇನೆಯ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ನೆಮ್ಮದಿಯಾಗಿ ಇದ್ದ ಭಾರತೀಯರಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶದ ಕಟ್ಟೆ ಹೊಡೆಯುವಂತೆ ಮಾಡಿದ ದಿನ. ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ..ಭಾರತದ ಪ್ರತಿಯೊಬ್ಬ ಮನೆಮನೆಯ ಜನರು ಕಣ್ಣೀರಿಟ್ಟ ದಿನ..
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಕಳೆದ ನಾಲ್ಕು ದಿನಗಳಲ್ಲಿ ಹತರಾದ ಒಟ್ಟು ಭಯೋತ್ಪಾದಕರ ಸಂಖ್ಯೆ 8 ಕ್ಕೆ ತಲುಪಿದೆ.ಇತ್ತೀಚಿನ ಎನ್ಕೌಂಟರ್ ಪುಲ್ವಾಮಾ ಜಿಲ್ಲೆಯ ಪಹೂ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ, ಪುಲ್ವಾಮಾ ದಾಳಿಯ (Pulwama Attack) ರೂವಾರಿಯಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 4 ಜೆಇಎಂ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಕೊಂದಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮತ್ತೊಂದು ಘಟನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಶಿಬಿರದಲ್ಲಿ ಶರಣಾದ ಭಯೋತ್ಪಾದಕನು ಪೊಲೀಸ್ ಸಿಬ್ಬಂದಿಯಿಂದ ರೈಫಲ್ ಅನ್ನು ಕಿತ್ತು ಅವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.