ಕವಿ ಕೈಫಿ ಅಜ್ಮಿ ಜನ್ಮ ಶತಮಾನೋತ್ಸವದ ನಿಮಿತ್ತ ಕರಾಚಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಶಬ್ನಾ ಅಜ್ಮಿ ಹಾಗೂ ಜಾವೇದ್ ಅಖ್ತರ್ ದಂಪತಿಗಳು ಪುಲ್ವಾಮಾ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಈಗ ಈ ಹಿಂದೆ ಸರಿದಿದ್ದಾರೆ.
ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿರುವ ವಿಚಾರವನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ "ನಮ್ಮ ಬೆಂಬಲ ಸರ್ಕಾರಕ್ಕಿದೆ, ಉಗ್ರ ಶಕ್ತಿಗಳಿಗೆ ದೇಶವನ್ನು ವಿಭಜಿಸಲು ಬಿಡುವುದಿಲ್ಲ" ಎಂದು ತಿಳಿಸಿದ್ದಾರೆ.
ಜೈಷ್-ಎ-ಮೊಹಮ್ಮದ್ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟಗೊಂಡ ಬಸ್ನಲ್ಲಿ 44 ಸಿಬ್ಬಂದಿ ಇದ್ದರು.
ದೇಶ ಮತ್ತು ವಿಶ್ವದ ಹಲವು ರಾಷ್ಟ್ರಗಳು ಈ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿವೆ. ಹುತಾತ್ಮರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದೀಗ ಸರ್ಕಾರದ ಮುಂದಿನ ಹೆಜ್ಜೆ ಏನು ಎಂಬುದು ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಕೇಂದ್ರ ಸರ್ಕಾರದತ್ತ ನೆಟ್ಟಿದೆ.
ಉಗ್ರರು ಐಇಡಿ ಬಳಸಿ 26 ಸಿಆರ್ಪಿಎಫ್ ಸೈನಿಕರನ್ನು ಅವಂತಿಪುರಾದಲ್ಲಿ ಹತ್ಯೆ ಮಾಡಿದ್ದಾರೆ. ಈ ಉಗ್ರ ಕೃತ್ಯವನ್ನು ಖಂಡಿಸಿರುವ ಪ್ರಧಾನಿ ಮೋದಿ ಉಗ್ರರ ದಾಳಿಯಲ್ಲಿ ಬಲಿಯಾದವರ ಸೈನಿಕರ ತ್ಯಾಗ ವ್ಯರ್ಥವಾಗುವಂತಿಲ್ಲ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಡಿಸೆಂಬರ್ 31 ರಂದು ಪುಲ್ವಾಮಾದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಐದು ಸೈನಿಕರು ಮೃತಪಟ್ಟಿದ್ದಾರೆ. ವಿಶೇಷವೆಂದರೆ, ಇಬ್ಬರು ಸೈನಿಕರು ಗುಂಡು ನಿರೋಧಕ ಜಾಕೆಟ್ಗಳನ್ನು ಧರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.