ಕನಕಪುರ ಬಂಡೆ ಡಿಕೆಶಿ ʻಆʼ ಮಾತು ಹೇಳಿದ್ದು ಯಾಕೆ..? ಡಿ.ಕೆ.ಶಿವಕುಮಾರ್ ಮಾತಿನ ಹಿಂದಿನ ಮರ್ಮವೇನು..? ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದ ʻಕೈʼ ಕಲಿ ಯಾರು..? ʻಸಾಮ್ರಾಟ್ʼ ಮಣಿಸಲು ಕಾಂಗ್ರೆಸ್ ಅಸ್ತ್ರ ಯಾರು ಗೊತ್ತಾ..? ಅಶೋಕ್ ಸೋಲುಣಿಸಲು ಡಿಕೆ ಬ್ರದರ್ಸ್ ಮೆಗಾ ಸ್ಕೆಚ್.
ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮತ್ರ ನಡೆಯೊಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಏನಾಗುತ್ತೋ ನೋಡೊಣ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
Karnataka Assembly Election: ಬಿಜೆಪಿ ಹಾಗೂ ನಿಮ್ಮ ಪಟ್ಟಿ ನೋಡಿದರೆ ಅಲೆ ಯಾರ ಪರವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ 141 ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಬಿಜೆಪಿ 65-70 ಕ್ಷೇತ್ರಗಳನ್ನು ಗೆಲ್ಲಲಿದೆ' ಎಂದು ತಿಳಿಸಿದರು.
ಬೆಂಗಳೂರು ಇತಿಹಾಸದಲ್ಲಿ ದಾಖಲಾಗುವ ಯೋಜನೆ ಜಾರಿ ಮಾಡುತ್ತಿದ್ದೇವೆ. ನಾಡಪ್ರಭು ಕೆಂಪೇಗೌಡರ ಹುಟ್ಟೂರು ಬಳಿಯ ಆವತಿ ಸಮೀಪದ ಬೆಟ್ಟ ಹಲಸೂರಿನಲ್ಲಿ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಚುನಾವಣೆ ಆಗಲಿ, ಫಲಿತಾಂಶ ಬರಲಿ. ಓಡು ಮಗಾ, ಓಡು ಮಗಾ ಸರದಿ ಯಾರದ್ದೆನ್ನುವುದು ಜನಕ್ಕೇ ಗೊತ್ತಾಗುತ್ತದೆ. ಎಷ್ಟಾದರೂ ಓಡು ಮಗಾ ರೇಸ್ʼನಲ್ಲಿ ನಿಮ್ಮನ್ನು ಸರಿಗಟ್ಟುವ ವೀರರೂ ಶೂರರೂ ಕರ್ನಾಟಕದಲ್ಲಿ ಇದ್ದಾರೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ರಾಜ್ಯದಲ್ಲಿ ಮತದಾರ ದೊಡ್ಡೋನು. ಯಾರ ಪಾಳೇಗಾರಿಕೆ ಇಲ್ಲಿ ನಡೆಯಲ್ಲ ಎಂದು HD ಕುಮಾರಸ್ವಾಮಿಗೆ R.ಅಶೋಕ್ ಟಾಂಗ್ ನೀಡಿದ್ದಾರೆ. ಕುದುರೆ ಏರದೇ ಕುಮಾರಸ್ವಾಮಿ ಬಿಟ್ ಹೋದ್ರು. ಮತ್ತೆ ಅಧಿಕಾರಕ್ಕೆ ಬರ್ತೀನಿ ಅಂದ್ರೆ ಜನ ನಂಬಲ್ಲ ಎಂದಿದ್ದಾರೆ.
ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಮಾತಿನ ವಿಚಾರ. ʻಕಾಂಗ್ರೆಸ್ ಪಕ್ಷ ಯಾವಗಲೂ ವಿದೇಶದವರನ್ನೇ ನಂಬಿದೆʼ. ʻಕಾಂಗ್ರೆಸ್ ಮೊದಲು ಆರಂಭಿಸಿದ್ದೇ ಒಬ್ಬ ವಿದೇಶಿ ವ್ಯಕ್ತಿʼ. ಆರೋಗ್ಯ ಸಮಸ್ಯೆಯಿಂದ ವಿದಾಯ ಇದೆ, ಒಳ್ಳೆಯದಾಗಲಿ ಎಂದು ಬಾಗಲಕೋಟೆಯ ಕಲಾದಗಿಯಲ್ಲಿ ಆರ್.ಅಶೋಕ್ ಹೇಳಿದ್ರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣ್ತಿದೆ. ತಿರುಕ ಮಲಗಿ ಕನಸು ಕಾಣ್ತನಲ್ಲಾ ಹಾಗೆ ಕಾಣ್ತಾ ಅವ್ರೆ ಎಂದು ಡಿಕೆಶಿ ಮತ್ತು ಸಿದ್ದರಾಮಯ್ಯ ವಿರುದ್ಧ R.ಅಶೋಕ್ ವಾಗ್ದಾಳಿ ನಡೆಸಿದ್ರು.
ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ ಮಾತನಾಡಿದ, ಮತ್ತೆ ಡಬಲ್ ಇಂಜನ್ ಸರ್ಕಾರ ಅಧಿಕಾರಕ್ಕೆ ತರಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬೆಂಗಳೂರಲ್ಲಿ ಮನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.