ಕಾಂಗ್ರೆಸ್ ಪಕ್ಷ ಉಳುವವನೇ ಭೂಮಿಯ ಒಡೆಯ ಎಂದು ಘೋಷಿಸಿ, ಉಳುವವನಿಗೆ ಭೂಮಿಯನ್ನು ಕೊಟ್ಟಿದೆ. ಆದರೆ ಈ ಸರ್ಕಾರ ಏನು ಮಾಡುತ್ತಿದೆ? ಕೃಷಿ ಭೂಮಿಯನ್ನು ಯಾರು ಬೇಕಾದರೂ ಖರೀದಿಸಬಹುದು ಅಂತಾ ಅವಕಾಶ ಕೊಟ್ಟಿದ್ದಾರೆ. ಆ ಮೂಲಕ ಯಡಿಯೂರಪ್ಪನವರು, ಅಶೋಕ್ ಅವರು ಸೇರಿ ಇಡೀ ರಾಜ್ಯವನ್ನು ಮಾರಲು ಹೊರಟಿದ್ದಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಡ್ಯದ ರೈತ ಧ್ವನಿ ಕಾರ್ಯಕ್ರಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಅಧಿವೇಶನ ಕರೆದರೆ ಟಿಎ, ಡಿಎ ತೆಗೆದುಕೊಳ್ಳುವುದಿಲ್ಲ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಡಿ.ಕೆ. ಶಿವಕುಮಾರ್ ಅವರ ಬಳಿ ದುಡ್ಡಿದ್ದರೆ ರಾಜ್ಯದ ಜನರಿಗೆ ಕೊಡಲಿ ಎಂದಿದ್ದರು.
ನಾನು ಎಲ್ಲಿಗೆ ಹೋಗಬೇಕು, ಎಲ್ಲಿಗೆ ಹೋಗಬಾರದು ಎಂದು ಹೇಳಲು ಅಶೋಕ್ ಯಾರು? ನನಗೆ ಅಶೋಕ್ ಅನುಮತಿ ಬೇಕಿಲ್ಲ. ಕೇವಲ ನನಗಷ್ಟೇ ಅಲ್ಲ. ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೂ ಅವರ ಅನುಮತಿ ಅಗತ್ಯವಿಲ್ಲ. ಒಬ್ಬ ರಾಜಕಾರಣಿಯಾಗಿ, ಒಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜನರ ನೆರವಿಗೆ ಧಾವಿಸುವುದು ನನ್ನ ಕರ್ತವ್ಯ- ಡಿ.ಕೆ. ಶಿವಕುಮಾರ್
ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಓಡಾಟವನ್ನು ನಿರ್ಬಂಧಿಸಿದ್ದರೂ, ಸಾಕಷ್ಟು ಜನರು ಅನಗತ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಒಡಾಡಿದ ಬೆನ್ನಲ್ಲೇ ಅವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೂ ಜನರ ಅನವಶ್ಯಕ ಓಡಾಟ ನಿಂತಿಲ್ಲ.
ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಆರ್. ಅಶೋಕ್ ಅವರು, ಸೋಮನಹಳ್ಳಿಯ 8 ಎಕರೆ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.