ರಾಹುಲ್ ಗಾಂಧಿ ಅವರು ಪ್ರಸಿದ್ಧ ಪೊಂಗಲ್ ಹಬ್ಬ ಮತ್ತು ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಹಿನ್ನೆಲೆಯಲ್ಲಿ ಮಾತ್ರ ಭೇಟಿ ನೀಡುತ್ತಿದ್ದಾರೆ. ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್. ಅಳಗಿರಿ ತಿಳಿಸಿದ್ದಾರೆ.
'ಬಿಜೆಪಿಯಲ್ಲಿ ಮೋದಿ ಹೇಗೋ, ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿ ಹಾಗೇ. ಅವರು ಕೇಂದ್ರ ಸರ್ಕಾರದ ವಿರುದ್ಧದ ನಿಜವಾದ ಹೋರಾಟಗಾರ. ಸರ್ವಾಧಿಕಾರಿಗಳು ತಮ್ಮ ವಿರುದ್ಧ ಒಬ್ಬ ವ್ಯಕ್ತಿ ಹೋರಾಟಡಿದರೂ ಭಯ ಪಡುತ್ತಾರೆ.
ಇತ್ತೀಚೆಗೆ ಜಾರಿಗೆ ಬಂದ ಕೇಂದ್ರ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ಕೆಲವು ರೈತರನ್ನು ಅವರ ರಾಜಕೀಯ ಯಜಮಾನರು ದಾರಿ ತಪ್ಪಿಸಿದ್ದಾರೆ ಮತ್ತು ದೇಶಾದ್ಯಂತದ ರೈತರು ತಮ್ಮೊಂದಿಗಿರುವಂತೆ ಅವರು ಚಿತ್ರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಪಕ್ಷದ ಹಿರಿಯ ಭಿನ್ನಮತೀಯ ನಾಯಕರೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ನಂತರ ಈಗ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಲಂಗಾಣ, ಗುಜರಾತ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ಪಕ್ಷದ ಸಂಘಟನೆಯಲ್ಲಿನ ನಾಯಕತ್ವ ಬದಲಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪಕ್ಷದ ನಾಯಕತ್ವದ ಬಗ್ಗೆ ಅಸಮಧಾನಗೊಂಡಿರುವ ಬೆನ್ನಲ್ಲೇ ಇಂದು ನಡೆದ ಭಿನ್ನಮತೀಯರ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ಪರವಾಗಿ ಕೆಲಸ ಮಾಡಲು ಸಿದ್ಧರಿರುವುದಾಗಿ ಹೇಳಿದರು.ಆ ಮೂಲಕ ನೂತನ ವರ್ಷಕ್ಕೆ ಹೊಸ ಅಧ್ಯಕ್ಷರ ನೇಮಕದ ಸಿದ್ದತೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸಾರಥ್ಯ ವಹಿಸುವ ಮುನ್ಸೂಚನೆಯನ್ನು ನೀಡಿದ್ದಾರೆ.
ಪಕ್ಷವು ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಕಾರ್ಯವಿಧಾನವನ್ನು ಪ್ರಾರಂಭಿಸಲಿದೆ ಆದರೆ ಪಕ್ಷದ 99.9% ಸದಸ್ಯರು ರಾಹುಲ್ ಗಾಂಧಿಯನ್ನು ಚುಕ್ಕಾಣಿ ಹಿಡಿಯಬೇಕೆಂದು ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಶುಕ್ರವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸರ್ಕಾರವು ಸ್ಪಂಧಿಸದಿರುವ ಹಿನ್ನಲೆಯಲ್ಲಿ ಬೇಸತ್ತು ಸಿಖ್ ಧರ್ಮ ಗುರು ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ರಾಹುಲ್ ಗಾಂಧಿ ಮೋದಿ ಸರ್ಕಾರವು ತನ್ನ ಕ್ರೌರ್ಯದ ಎಲ್ಲ ಮೀತಿಗಳನ್ನು ಮೀರಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ಇಬ್ಬರು ಕಾಂಗ್ರೆಸ್ ಸದಸ್ಯರಾದ ರಾಜೀವ್ ಸಾತವ್ ಮತ್ತು ರೇವಂತ್ ರೆಡ್ಡಿ ಅವರು ಬುಧವಾರ ರಕ್ಷಣಾ ಸಂಸತ್ತಿನ ಸಮಿತಿ ಸಭೆಯಿಂದ ಹೊರನಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಆತ್ಮಚರಿತ್ರೆಯ "ಎ ಪ್ರಾಮಿಸ್ಡ್ ಲ್ಯಾಂಡ್" ನಲ್ಲಿ ಮಾಡಿದ ರಾಹುಲ್ ಗಾಂಧಿಯವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಶಿವಸೇನೆ ನಾಯಕ ಸಂಜಯ್ ರೌತ್, ಭಾರತದ ಬಗ್ಗೆ ಬರಾಕ್ ಒಬಾಮರ ಜ್ಞಾನವನ್ನು ಪ್ರಶ್ನಿಸಿದರು ಮತ್ತು ವಿದೇಶಿ ರಾಜಕಾರಣಿ ಭಾರತೀಯ ರಾಜಕೀಯ ನಾಯಕರ ಬಗ್ಗೆ ಅಂತಹ ಅಭಿಪ್ರಾಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
ತಮ್ಮ ಆತ್ಮಚರಿತ್ರೆಯಾದ 'ಎ ಪ್ರಾಮಿಸ್ಡ್ ಲ್ಯಾಂಡ್' ನಲ್ಲಿ ಒಬಾಮಾ ಅವರು ರಾಹುಲ್ ಗಾಂಧಿಯ ಕುರಿತು ಟಿಪ್ಪಣಿ ಮಾಡಿದ್ದಾರೆ. ಇದರಲ್ಲಿ ರಾಹುಲ್ ಅವರನ್ನು ಕಡಿಮೆ ಅರ್ಹತೆ ಮತ್ತು ಉತ್ಸಾಹದ ಕೊರತೆಯಿರುವ ನಾಯಕ ಎಂದು ಬಣ್ಣಿಸಿದ್ದಾರೆ.
ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕ್ಷೇತ್ರ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ (ಅಕ್ಟೋಬರ್ 4) ಪಂಜಾಬ್ನ ಮೊಗಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಚಾಲನೆ ನೀಡಿದರು.
ಮೇಲ್ಜಾತಿಯ ಠಾಕೂರ್ ಸಮುದಾಯದ ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ 20 ವರ್ಷದ ದಲಿತ ಮಹಿಳೆ ಮನೀಷಾ ವಾಲ್ಮೀಕಿಯ ಪ್ರಕರಣ ಈಗ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು 201 ಪಕ್ಷದ ಮುಖಂಡರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಲಿತ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್ ಕಡೆಗೆ ಪಯಾಣ ಬೆಳೆಸಿದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘನೆಗಾಗಿ ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಇಂದು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಮೂಹಿಕ ಅತ್ಯಾಚಾರಕ್ಕೊಳಗಾದವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಹತ್ರಾಸ್ಗೆ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.