ಬೆಟ್ಟ ಪ್ರದೇಶಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಮುಂಬರುವ 2-4 ದಿನಗಳಲ್ಲಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಯಲು ಪ್ರದೇಶದಲ್ಲಿನ ತಾಪಮಾನವು ನಾಲ್ಕು ಡಿಗ್ರಿಗಳಿಗೆ ಇಳಿಯಬಹುದು (ತಾಪಮಾನದಲ್ಲಿ 4 ° C) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭವಿಷ್ಯ ನುಡಿದಿದೆ.
ದಕ್ಷಿಣ ಭಾರತದಲ್ಲಿ 'ನಿವಾರ್' ಚಂಡಮಾರುತ ಹಾದುಹೋದ ನಂತರ, ಈಗ ಮತ್ತೊಂದು ಅಪಾಯವು ಸಮೀಪಿಸುತ್ತಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಧಾರಾಕಾರ ಮಳೆಯಾಗುವ ಬಗ್ಗೆ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಸೆಪ್ಟೆಂಬರ್ 23 ರಂದು ಬಿಎಂಸಿ ತುರ್ತು ಸೇವೆಗಳನ್ನು ಹೊರತುಪಡಿಸಿ ತನ್ನ ಎಲ್ಲಾ ಕಚೇರಿಗಳನ್ನು ಮುಚ್ಚಲು ನಿರ್ಧರಿಸಿದೆ.
ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಷ್ಟ್ರೀಯ ಹವಾಮಾನ ಮುನ್ಸೂಚನೆ ಕೇಂದ್ರ ಮತ್ತು ನವದೆಹಲಿಯ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಮತ್ತು ಆಂಧ್ರಪ್ರದೇಶದ ಪಕ್ಕದ ಕರಾವಳಿ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುತ್ತಿದೆ.
ರಾತ್ರಿ ಮಳೆ ಸುರಿದು ನಿಂತಿದ್ದರೂ ರಾಜಕಾಲುವೆಯಿಂದ ನೀರು ಬರುತ್ತಿರುವುದು ನಿಂತಿಲ್ಲ. ಬೆಳಿಗ್ಗೆಯೂ ಇಲ್ಲಿನ ಜನ ಮನೆಗೆ ತುಂಬಿಕೊಂಡಿದ್ದ ನೀರನ್ನು ಹೊರಗೆ ಕಳಿಸುವ ಹರಸಾಹಸ ಮಾಡುತ್ತಿದ್ದಾರೆ.
ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ದೇಶದಲ್ಲಿ ಸಾಮಾನ್ಯಕ್ಕಿಂತ ಶೇಕಡಾ 7 ರಷ್ಟು ಹೆಚ್ಚಿನ ಮಳೆಯಾಗಿದೆ. ಮಾನ್ಸೂನ್ ಸದ್ಯಕ್ಕೆ ಮುಂದುವರಿಯುವ ಸಾಧ್ಯತೆಯಿದೆ, ಸೆಪ್ಟೆಂಬರ್ ಮೂರನೇ ವಾರದಲ್ಲಿ ದೇಶದ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರಮುಖ ನದಿಗಳಾದ ಬೈತರಾಣಿ, ಬ್ರಾಹ್ಮಣಿ, ಸುಬರ್ನರೆಖಾ ಮತ್ತು ಬುಧಬಲಂಗಾಗಳು ತಮ್ಮ ಅಪಾಯದ ಮಟ್ಟ ಹರಿಯುತ್ತಿವೆ, ಹಲವು ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಮತ್ತು ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿವೆ.
ಕಳೆದ ವರ್ಷ ಹಾಗೂ ಈ ಬಾರಿ ಎಲ್ಲೆಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮುಂದಿನ ವಾರ ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಶಾಶ್ವತ ಪರಿಹಾರಕ್ಕಾಗಿ ಆಗ್ರಹಗಳು ಕೇಳಿಬರುತ್ತಿದ್ದು, ಆಯಾ ಕ್ಷೇತ್ರದಲ್ಲಿಯೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಬಂದಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ 'ಕೂಡಲೇ ನಿಮ್ಮ ನಿಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಹೋಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಿ' ಎಂದು ಸೂಚನೆ ನೀಡಿದ್ದರು.
ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸುತ್ತೇನೆ- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಸದ್ಯ ಕೋವಿಡ್-19 (COVID-19) ಪಾಸಿಟಿವ್ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ಆಸ್ಪತ್ರೆಯಿಂದಲೇ ಉಸ್ತುವಾರಿ ಸಚಿವರಿಗೆ ಪ್ರವಾಹ ಪರಿಸ್ಥಿರಿ ಎದುರಿಸಲು ಸಜ್ಜಾಗುವಂತೆ ಸೂಚನೆ ನೀಡಿದ್ದಾರೆ.
ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಉತ್ತರ ಮತ್ತು ಈಶಾನ್ಯ ಭಾರತದ ಮೇಲೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜುಲೈ 19-21ರವರೆಗೆ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯಕ್ಕೆ ರೆಡ್ ಅಲರ್ಟ್ ಜಾರಿ ಮಾಡಿದೆ.