ತಡರಾತ್ರಿ ಮಂಡ್ಯ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಿಸಿದ್ದು ಮಂಡ್ಯದ ಗುತ್ತಲು ರಸ್ತೆ ಭಾರೀ ಮಳೆಗೆ ಜಲಾವೃತವಾಗಿದೆ.. ಮಂಡ್ಯ-ಕೆ.ಎಂ.ದೊಡ್ಡಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಕಾಲುವೆಯಂತಾದ ರಸ್ತೆಯಲ್ಲಿ ಜನ ಕಷ್ಟ ಪಟ್ಟು ಸಂಚಾರ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆಯಾಗಿದ್ದು ಸಂಜೆ ಸುರಿದ ಮಳೆಗೆ ಸುಲ್ತಾನ್ ಪೇಟೆ ರಸ್ತೆ ಜಲಾವೃತವಾಗಿದೆ. ಚಿಕ್ಕಪೇಟೆಯಿಂದ ಕಾಟನ್ ಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ..
ಸಿಲಿಕಾನ್ ಸಿಟಿಯನ್ನು ಬಿಟ್ಟೂ ಬಿಡದೆ ಕಾಡ್ತಿದೆ ರಣಚಂಡಿ ಮಳೆ! ಧಾರಾಕಾರ ಮಳೆಗೆ ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 1ರಿಂದ ಜುಲೈ 19ರವರೆಗೆ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ 365 ಮಿಮೀ ಮಳೆಯಾಗಬೇಕಿತ್ತು. ಆದರೆ, 462 ಮಿಮೀ ಮಳೆಯಾಗುವ ಮೂಲಕ ಕರಾವಳಿ ಭಾಗ, ಉತ್ತರ ಕರ್ನಾಟಕ ಭಾಗ ಸೇರಿದಂತೆ ಇನ್ನು ಹಲವೆಡೆ ಆಗಿರುವ ಅವಾಂತರಕ್ಕೆ ಇದೇ ಕಾರಣ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಊರಿಗೆ ಹೊಕ್ಕ ನೀರು, ರೈತರ ಬೆಳೆಮೇಲೂ ಪರಿಣಾಮ ಬೀರಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸೃಷ್ಟಿಸಿದ. ಫಸಲಿಗೆ ಬಂದ ಜಮೀನುಗಳಲ್ಲಿ ನೀರು ನಿಂತು ಜಿಲ್ಲೆಯ ರೈತ ಕಂಗಾಲಾಗಿದ್ದಾನೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ರಾಜ್ಯದಲ್ಲಿ ಇಂದು ಸೇರಿದಂತೆ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಅತಿಯಾದ ಮಳೆಯ ಸಂಭವವಿದ್ದು, ರಾಜಧಾನಿ ಬೆಂಗಳೂರಲ್ಲೂ ವರುಣಾರ್ಭಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಮಳೆಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿದರು. ಈ ವೇಳೆ ಜೆಸಿ ನಗರದ ನಿವಾಸಿಗಳು ರಾಜಕಾಲುವೆ ಉಕ್ಕಿ ನೀರು ಬಂದಿರೋದ್ರಿಂದ ಆಗಿರೋ ಸಮಸ್ಯೆ ಬಗ್ಗೆ ಸಿಎಂ ಗಮನಕ್ಕೆ ತಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.