Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ. ಇದುವರೆಗಿನ ವ್ಯವಸ್ಥೆಯಲ್ಲಿ ಲೋಕಸಭೆ ಸ್ಪೀಕರ್ ಸ್ಥಾನದ ಬಲಭಾಗದಲ್ಲಿ ಆಡಳಿತ ಪಕ್ಷದ ಸಂಸದರು ಮತ್ತು ಎಡಭಾಗದಲ್ಲಿ ವಿರೋಧ ಪಕ್ಷದ ಸಂಸದರು ಕುಳಿತುಕೊಳ್ಳುತ್ತಾರೆ.ಈ ಬಾರಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿಂದ ಗೆಲ್ಲುವ ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲಿದ್ದಾರೆ.
Sudha Murthy Rajya Sabha nomination: ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್ಫೋಸಿಸ್ ಫೌಂಡೇಷನ್ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು.
Rajya Sabha Election 2024: ಚುನಾವಣೆಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ಏಕೆಂದರೆ ಇಲ್ಲಿ ಜನರು ನೇರವಾಗಿ ಮತ ಚಲಾಯಿಸುವುದಿಲ್ಲ. ಅಂದರೆ ಈ ಚುನಾವಣೆಗೂ, ಜನಸಾಮಾನ್ಯರಿಗೂ ನೇರ ಸಂಬಂಧವಿರುವುದಿಲ್ಲ. .
ಲೋಕಸಭೆಯಿಂದ ಹೊರಗುಳಿದ ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಚ್ಚರಿಯ ನಡೆಯಲ್ಲಿ ಈ ತಿಂಗಳ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಥಾನವಾದ ಜೈಪುರದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದರು.
Rajya Sabha Election: ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಶುಭ ಹಾರೈಸಿದ್ದಾರೆ.
*ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ.." ಎಂದು ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
Aam Aadmi Party leader Sanjay Singh MP: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಸೋಮವಾರ ೨ನೇ ಬಾರಿಗೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಅವರ ವಿರುದ್ಧದ ಪ್ರಕರಣವು ವಿಶೇಷಾಧಿಕಾರಗಳ ಸಮಿತಿಯ ಮುಂದೆ ಬಾಕಿಯಿದೆ ಎಂದು ರಾಜ್ಯಸಭೆಯ ಮೂಲಗಳು ತಿಳಿಸಿವೆ.
ಎಂ.ಎಸ್.ಗಿಲ್ ಕಾಂಗ್ರೆಸ್ ಸದಸ್ಯರಾಗಿ ರಾಜ್ಯಸಭೆಯನ್ನು ಪ್ರವೇಶಿಸಿದ್ದರು ಮತ್ತು 2008ರಲ್ಲಿ ಕೇಂದ್ರ ಕ್ರೀಡಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಿಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ರಾಜ್ಯಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಗುರುವಾರ ಬಹುಮತದಿಂದ ಅಂಗೀಕರಿಸಿದೆ, ಲೋಕಸಭೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ಒಂದು ದಿನದ ನಂತರ ರಾಜ್ಯಸಭೆಯಲ್ಲಿ 215 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸುವುದರೊಂದಿಗೆ ಸದನದಲ್ಲಿ ಈ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.ಎಲ್ಲಾ ಪಕ್ಷಗಳ ಸದಸ್ಯರು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು.
Sugarcane payments: ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿಯವರು ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸುವುದು ನಿರಂತರ ಪ್ರಕ್ರಿಯೆ ಆಗಿದ್ದು, ಕಳೆದ 5 ವರ್ಷಗಳಿಂದ ಬಾಕಿ ಪಾವತಿ ಮೊತ್ತದಲ್ಲಿ ಇಳಿಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿ, ದೆಹಲಿ ಸರ್ಕಾರದಲ್ಲಿನ ಹಿರಿಯ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ಗಳನ್ನು ನಿರ್ವಹಿಸಲು ಹೊರಡಿಸಲಾದ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ರಾಜ್ಯಸಭೆ ಸೋಮವಾರ ಅಂಗೀಕರಿಸಿತು.
ಗೋವಾದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯ ಲುಜಿನ್ಹೋ ಫಲೈರೊ ಅವರು ಸಂಸತ್ತಿನ ಮೇಲ್ಮನೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಗೋವಾದಲ್ಲಿ ಪಕ್ಷದ ಚಟುವಟಿಕೆಗಳಿಂದ ಫಲೈರೊ ಅವರನ್ನು ಬಹಳ ಹಿಂದೆಯೇ ಹೊರಗಿಡಲಾಗಿತ್ತು, ಆದರೆ ಟಿಎಂಸಿ ನಾಯಕತ್ವವು ಅವರನ್ನು ರಾಜ್ಯಸಭೆಯನ್ನು ತೊರೆಯುವಂತೆ ಒತ್ತಾಯಿಸುತ್ತಿತ್ತು.
7th Pay Commission DA Arrears : ನೀವೇ ಕೇಂದ್ರ ಸರ್ಕಾರಿ ನೌಕರರಾಗಿದ್ದರೆ ಅಥವಾ ನಿಮ್ಮ ಕುಟುಂಬದ ಯಾರಾದರೂ ಕೇಂದ್ರ ಉದ್ಯೋಗಿಯಾಗಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಹೌದು, 18 ತಿಂಗಳ ಬಾಕಿ ಉಳಿಸಿಕೊಂಡಿರುವ ಕೇಂದ್ರ ನೌಕರರು ಬಹುದಿನಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಸದ್ಯ ಸಿನಿ ಇಂಡಸ್ಟ್ರಿಯಲ್ಲಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣಾ ಸಿನಿಮಾ ಸದ್ದು ಮಾಡುತ್ತಿದೆ. ಅಭಿಮಾನಿಗಳ ಮನಗೆದ್ದ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಇನ್ನು ನವದೆಹಲಿಯಲ್ಲಿ ಸಂಸದರಿಗಾಗಿ ವಿಕ್ರಾಂತ್ ರೋಣ ಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಮತ್ತು ತಂಡ ಭಾಗವಹಿಸಿತ್ತು. ಇದೇ ವೇಳೆ ನೂತನ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.