ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶಿತರಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ವೀರೇಂದ್ರ ಹೆಗ್ಗಡೆ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯಸಭೆ ಎಂದರೆ ಹಿರಿಯ ವೇದಿಕೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾವು ಸೀಮಿತ ಪ್ರದೇಶಗಳಲ್ಲಿ ಮಾಡುತ್ತಿದ್ದ ಸೇವೆಗಳನ್ನು ಈ ಮೂಲಕ ದೇಶವ್ಯಾಪಿ ಮಾಡಲು ಅವಕಾಶ ಸಿಕ್ಕಿದೆ. ಈ ಸ್ಥಾನಕ್ಕೆ ನನ್ನನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯು ತಾನು ಸ್ಪರ್ಧಿಸಿದ್ದ ಎಲ್ಲಾ ಮೂರು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ನಾಲ್ಕು ಸ್ಥಾನಗಳಿಗಾಗಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಒಂದರಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಇನ್ನೊಂದೆಡೆಗೆ ಗೆಲ್ಲಲು ಸೂಕ್ತ ನಂಬರ್ ಇಲ್ಲದಿದ್ದರೂ ಕೂಡ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದ ಜೆಡಿಎಸ್ ಪಕ್ಷವು ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ.
ಭಾರತ ಕ್ರಿಕೆಟ್ (Team India) ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ (Harbhajan Singh) ಅವರನ್ನು ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
2022 ರ ಐದು ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದ ಕಾರಣ ಕಾಂಗ್ರೆಸ್ ಪಕ್ಷವು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಎಎನ್ಐ ವರದಿ ಮಾಡಿದೆ.
ಮಹಾರಾಷ್ಟ್ರದಲ್ಲಿ 19,909 ಆತ್ಮಹತ್ಯೆಗಳು ವರದಿಯಾಗಿವೆ. ತಮಿಳುನಾಡು (16,883), ಮಧ್ಯಪ್ರದೇಶ (14,578), ಪಶ್ಚಿಮ ಬಂಗಾಳ (13,103) ಮತ್ತು ಕರ್ನಾಟಕ (12,259) ನಂತರದ ಸ್ಥಾನದಲ್ಲಿವೆ.
Padma Awards 2022 - ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattaacharjee), ನಟ ವಿಕ್ಟರ್ ಬ್ಯಾನರ್ಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದಲ್ಲದೇ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh), ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ (CDS Bipin Rawat) ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಸಾಂಕ್ರಾಮಿಕ ರೋಗದ ಮೂರನೇ ಅಲೆ ಪ್ರಾರಂಭವಾದಾಗಿನಿಂದ ಜನವರಿ 20 ರವರೆಗೆ ಸಂಸತ್ತಿನಲ್ಲಿ ಕನಿಷ್ಠ 875 ಸಿಬ್ಬಂದಿ ಕೋವಿಡ್ -19 ಗೆ ಪಾಸಿಟಿವ್ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
Election Laws Amendment Bill 2021 - ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲ್ಪಟ್ಟ ಚುನಾವಣಾ ಕಾನೂನು ತಿದ್ದುಪಡಿ ಮಸೂದೆ, 2021 ಅನ್ನು ಇಂದು ರಾಜ್ಯಸಭೆಯು (Rajya Sabha) ಧ್ವನಿ ಮತದಿಂದ ಅಂಗೀಕರಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ನಕಲು ಮತ್ತು ನಕಲಿ ಮತದಾನವನ್ನು ತಡೆಗಟ್ಟಲು ಮತದಾರರ ಕಾರ್ಡ್ (Voter ID) ಮತ್ತು ಪಟ್ಟಿಯನ್ನು ಆಧಾರ್ ಕಾರ್ಡ್ನೊಂದಿಗೆ (Aadhaar Card) ಲಿಂಕ್ ಮಾಡಲಾಗುವುದು ಎಂದು ಕರಡು ಮಸೂದೆಯಲ್ಲಿ ತಿಳಿಸಲಾಗಿದೆ.
ಕಳೆದ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿರುವ ಗಂಭೀರ ಆರೋಪದ ಮೇಲೆ 12 ವಿರೋಧ ಪಕ್ಷದ ಸಂಸದರನ್ನು ರಾಜ್ಯಸಭೆಯಿಂದ (Rajya Sabha) ಅಮಾನತುಗೊಳಿಸಲಾಗಿದೆ. ಇದೀಗ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಹಾಜರಾಗದಂತೆ ಸೂಚನೆ ನೀಡಲಾಗಿದೆ.
ಬುಧವಾರ (ಆಗಸ್ಟ್ 11) ರಾಜ್ಯಸಭೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿತು ಮತ್ತು ವಿರೋಧ ಪಕ್ಷದ ಸಂಸದರು ಸದನದ ಬಾವಿಗೆ ಇಳಿದೆ ಪ್ರತಿಭಟನೆ ನಡೆಸಿದರು. ಅಲ್ಲದೆ ವಿಪಕ್ಷದ ಸಂಸದರು ಹೊರಗಿನಿಂದ ಮಾರ್ಷಲ್ಗಳನ್ನು ಕರೆದು ಅನುಚಿತವಾಗಿ ವರ್ತಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.