ನೀವು ಇನ್ನೂ ಪಡಿತರ ಚೀಟಿ ಹೊಂದಿಲ್ಲದಿದ್ದರೆ ನೀವು ಈಗ ಅದನ್ನು ಆನ್ಲೈನ್ನಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಇದಕ್ಕಾಗಿ ಎಲ್ಲಾ ರಾಜ್ಯಗಳು ವೆಬ್ಸೈಟ್ ಅನ್ನು ಪ್ರಾರಂಭಿಸಿವೆ. ಯಾವುದೇ ರಾಜ್ಯದ ಸ್ಥಳೀಯ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನೀವು ಅರ್ಜಿ ಸಲ್ಲಿಸಬಹುದು.
ಜೂನ್ 1, 2020 ರಿಂದ ಕೇಂದ್ರ ಸರ್ಕಾರವು 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಡಿತರ ಕಾರ್ಡ್ ಪೋರ್ಟಬಿಲಿಟಿ ಸೇವೆ 'ಒನ್ ನೇಷನ್-ಒನ್ ರೇಷನ್ ಕಾರ್ಡ್' ಅನ್ನು ಪ್ರಾರಂಭಿಸಲಿದೆ.
ಒಂದು ವೇಳೆ ನೀವೂ ಕೂಡ ಸಹ ಪಡಿತರ ಚೀಟಿ ಹೊಂದಿರುವವರಾಗಿದ್ದರೆ, ಈ ಸುದ್ದಿ ನಿಮಗೆ ಭಾರಿ ನೆಮ್ಮದಿ ನೀಡಲಿದೆ. ಏಕೆಂದರೆ, ಕೇಂದ್ರ ಸರ್ಕಾರ ಪಡಿತರ ಚೀಟಿಗಳಿಗೆ ಸಂಬಂಧಿಸಿದ ಒಂದು ನಿಯಮವನ್ನು ಬದಲಾಯಿಸಿದೆ. ಸರ್ಕಾರದ ನಿರ್ಧಾರದಿಂದ ಕೋಟ್ಯಂತರ ಫಲಾನುಭವಿಗಳು ಲಾಭ ಪಡೆಯುವ ನಿರೀಕ್ಷೆಯಿದೆ.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ 1,88,512 ಕುಟುಂಬ ವರ್ಗಕ್ಕೂ ಮೂರು ತಿಂಗಳು ಉಚಿತ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಎಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ 61,233 ಫಲಾನುಭವಿಗಳಿಗೂ ಪ್ರತಿ ಕೆಜಿಗೆ ರೂ.15ರಂತೆ 10 ಕೆಜಿ ಅಕ್ಕಿ ವಿತರಿಲಾಗುತ್ತದೆ.
ರಾಜ್ಯದಲ್ಲಿ 1.88 ಲಕ್ಷ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಮುಖ್ಯ ಮಂತ್ರಿಯವರ ಆದೇಶದಂತೆ ಅರ್ಜಿ ಸಲ್ಲಿಸಿದ್ದ ಎಲ್ಲ ಕುಟುಂಬಗಳಿಗೂ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳವರೆಗೆ ಪ್ರತಿ ತಿಂಗಳು 10 ಕೆ.ಜಿ ಉಚಿತ ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಒಟ್ಟು 20.58 ಲಕ್ಷ ಎಪಿಎಲ್ ಕಾರ್ಡುದಾರರು ಇದ್ದಾರೆ. ಬಿ.ಪಿ.ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಸಹ ತಿಂಗಳಿಗೆ 10 ಕೆ.ಜಿ ಯಂತೆ 3 ತಿಂಗಳು ಉಚಿತ ಅಕ್ಕಿಯನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ- ಸಚಿವ ಕೆ. ಗೋಪಾಲಯ್ಯ
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಇನ್ನೂ ಹೆಚ್ಚಿನ ಅನುದಾನವನ್ನು ನೀಡಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರಲ್ಲದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಒದಗಿಸಲಾದ ಟೆಸ್ಟಿಂಗ್ ಕಿಟ್ ಮತ್ತು ಪಿ.ಪಿ.ಇ ಮತ್ತು ಇತರೆ ಸಾಮಾಗ್ರಿಗಳನ್ನು ಹಾಸನ ಮೆಡಿಕಲ್ ಕಾಲೇಜಿಗೂ ನೀಡಬೇಕೆಂದು ಹೆಚ್.ಡಿ. ರೇವಣ್ಣ ಅವರು ಕೋರಿದ್ದಾರೆ.
ರಾಜ್ಯದ ಎಲ್ಲಾ ಎಪಿಎಂಸಿ ಮಾರುಕಟ್ಟೆಯಲ್ಲಿ ಕಡ್ಡಾಯವಾಗಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಿ ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನದಟ್ಟು ಮಾಡಬೇಕು. ಮಾರುಕಟ್ಟೆಗೆ ಬರುವಂತಹ ಎಲ್ಲಾ ರೈತರಿಗೆ ಹಾಗೂ ವರ್ತಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ತಿಂಡಿ, ಊಟ ಸೌಲಭ್ಯ ಸಿಗಬೇಕು ಎಂದು ಸಚಿವ ಎಸ್. ಟಿ. ಸೋಮಶೇಖರ್ ಸೂಚಿಸಿದರು.
ಕೇಂದ್ರ ಸರ್ಕಾರವು ದೇಶದ 12 ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(One Nation-One Ration Card) ಯೋಜನೆಯನ್ನು ಪ್ರಾರಂಭಿಸಿದೆ. ಜೂನ್ ವೇಳೆಗೆ ಈ ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರಲಾಗುವುದು.
ಮುಂದಿನ ಜೂನ್ 30, 2020 ರ ವೇಳೆಗೆ, 'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ವ್ಯವಸ್ಥೆಯನ್ನು ಇಡೀ ದೇಶದಲ್ಲಿ ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಲಾಗುವುದು ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.