72 ಜನ ಸಾವು, 92 ಜನ ಗಾಯಗೊಂಡಿದ್ದಾರೆ. 8 ಜನ ಮಳೆಗೆ ಕಾಣೆಯಾಗಿದ್ದಾರೆ ಎಂದು ವರದಿ. ಹಿಮಾಚಲಕ್ಕೆ ರೆಡ್ ಅಲರ್ಟ್ ಘೋಷಿಸಿದ IMD. ಉತ್ತರಾಖಂಡ್ಗೆ ಆರೆಂಜ್ ಅಲರ್ಟ್ ಘೋಷಣೆ. ಹಿಮಾಚಲ ಪ್ರದೇಶ ಹೆಚ್ಚು ಹಾನಿಗೊಳಗಾದ ರಾಜ್ಯ. ನೀರಲ್ಲಿ ಕೊಚ್ಚಿಹೋಗ್ತಿರೋ ಮನೆಗಳು,ವಾಹನಗಳು
ಮುಳುಗುತ್ತಿರುವ ಸೇತುವೆಗಳು, ಹೆದ್ದಾರಿಗಳು
ಅಂಗನವಾಡಿ, ಪ್ರೈಮರಿ, ಹೈಸ್ಕೂಲ್, ಪಿಯು ಕಾಲೇಜಿಗೆ ರಜೆ
ತಗ್ಗು ಪ್ರದೇಶ, ನದಿ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ
ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
ಜಿಲ್ಲಾ-ತಾಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂತಪ್ಪದೆ ಪಾಲಿಸಲು ಆದೇಶ
IMD ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಬಡಾಕೆರೆ ಗ್ರಾಮದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಅಪಾರ ಪ್ರಮಾಣದ ಜಮೀನು ಮಳೆ ನೀರಿನಿಂದ ಜಲಾವೃತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುರುವಾರ ಶಾಲೆಗಳಿಗೆ ರಜೆ ಘೋಷಿಸಿದೆ.
ಕೇರಳದ ದಕ್ಷಿಣ ಭಾಗದಲ್ಲಿ ಸತತ ಎರಡನೇ ದಿನವಾದ ಭಾನುವಾರವೂ ಭಾರೀ ಮಳೆ ಸುರಿಯುತ್ತಿರುವುದರಿಂದ, ರಾಜ್ಯ ರಾಜಧಾನಿ ತಿರುವನಂತಪುರಂನ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೆಲವು ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಧ್ಯ ಕೇರಳದ ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮೂರು ಜನ ಸಾವನ್ನಪ್ಪಿದ್ದಾರೆ, ಎಂಟು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ ಮತ್ತು ಸುಮಾರು 9,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹಿಮಾಚಲ ಪ್ರದೇಶದ ಕೆಲವು ಭಾಗಗಳೊಂದಿಗೆ ಉತ್ತರಾಖಂಡದ 13 ಜಿಲ್ಲೆಗಳಲ್ಲಿ ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.ಉತ್ತರಾಖಂಡಕ್ಕೆ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಇದೇ ರೀತಿಯ ಎಚ್ಚರಿಕೆಯನ್ನು ನೀಡಿದ 24 ಗಂಟೆಗಳ ನಂತರ ಈ ಬೆಳವಣಿಗೆ ಬರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.