ಪ್ರಯಾಣದ ವೇಳೆ ಯಾವುದೇ ರೀತಿಯ ತೊಂದರೆಯಾಗಬಾರರು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಕನ್ಫರ್ಮ್ ಟಿಕೆಟ್ ಬಯಸುವುದು ಸಾಮಾನ್ಯ. ಪ್ರಯಾಣಿಕರ ಈ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ರೇಲ್ವೆ ವಿಭಾಗ ಮುಂಗಡ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ಮಾಡಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿಯಾಗಲಿ ಎಂದರು.
ಸರ್ಕಾರಿ ಉದ್ಯೋಗಗಳಿಗೆ ಬಡ್ತಿಗಾಗಿ ಕೋಟಾ ಮತ್ತು ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪಿನಲ್ಲಿ ತಿಳಿಸಿದೆ. ಕೋಟಾಗಳನ್ನು ಒದಗಿಸಲು ರಾಜ್ಯಗಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಮತ್ತು ಸಾರ್ವಜನಿಕ ಸೇವೆಯಲ್ಲಿ ಕೆಲವು ಸಮುದಾಯಗಳ ಪ್ರಾತಿನಿಧ್ಯದಲ್ಲಿ ಅಸಮತೋಲನವನ್ನು ತೋರಿಸುವ ದತ್ತಾಂಶವಿಲ್ಲದೆ ರಾಜ್ಯಗಳು ಅಂತಹ ನಿಬಂಧನೆಗಳನ್ನು ಮಾಡಲು ಒತ್ತಾಯಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಆರ್ಥಿಕವಾದ ದುರ್ಬಲ ವಿಭಾಗಗಳಿಗೆ (ಇಡಬ್ಲ್ಯೂಎಸ್) ಕಾಯ್ದಿರಿಸಲಾದ ಬೋಧಕ ವರ್ಗದ ಸ್ಥಾನಗಳಿಂದ ವಿನಾಯಿತಿ ಕೋರಿ ಎಲ್ಲಾ ಐಐಎಂ ಗಳು ಈಗ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿವೆ.
ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇರುವುದರಿಂದ ಮೀಸಲಾತಿ ಅಗತ್ಯವಿದೆ, ಮತ್ತು ಅದರ ಫಲಾನುಭವಿಗಳು ಇದು ಅಗತ್ಯವೆಂದು ಭಾವಿಸುವವರೆಗೂ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೋಮವಾರ ಹೇಳಿದೆ.
ಬಿಜೆಪಿ-ಆರ್ಎಸ್ಎಸ್ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುತ್ತವೆ. ಯಾವುದೇ ಕಾರಣಕ್ಕೂ ದಲಿತರ ಪ್ರಗತಿಯನ್ನು ಬಯಸುವುದಿಲ್ಲ. ಮೀಸಲಾತಿಯನ್ನು ಕೊನೆಗೊಳಿಸಲು ಅವರು ಯೋಜಿತ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಎಲ್ ಪುನಿಯಾ ಹೇಳಿದ್ದಾರೆ.
ಮಹಾರಾಷ್ಟ್ರದ ಮರಾಠ ಸಮುದಾಯವು ಕೇಂದ್ರ ಸರ್ಕಾರವು ಮೇಲ್ಜಾತಿ ಬಡವರಿಗೆ ನೀಡಿರುವ ಶೇ.10 ರಷ್ಟು ಮೀಸಲಾತಿ ಮರಾಠ ಸಮುದಾಯಕ್ಕೆ ಅನ್ವಯವಾಗುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಸಂವಿಧಾನದ 124ನೇ ತಿದ್ದುಪಡಿಯ ಪ್ರಕಾರ ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಶೇ. 10 ಮೀಸಲಾತಿ ನೀಡುವ ಮಸೂದೆಯನ್ನು ಸಂಸತ್ತಿನಲ್ಲಿ ಜ. 9ರಂದು ಅನುಮೋದಿಸಲಾಗಿತ್ತು. ಅದರನ್ವಯ ನೂತನ ಮೀಸಲಾತಿ ತಿದ್ದುಪಡಿ ಕಾಯ್ದೆ ಫೆ. 1ರಿಂದ ಜಾರಿಯಾಗುತ್ತಿದೆ.
ಇತ್ತೀಚೆಗಷ್ಟೇ ಮೇಲ್ಜಾತಿಯಲ್ಲಿ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಿರುವ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಈ ಹಿಂದೆ ಐತಿಹಾಸಿಕ ಸುಪ್ರಿಂಕೋರ್ಟ್ ನ ತೀರ್ಪಿಗೆ ಕಾರಣವಾಗಿದ್ದ ವಕೀಲೆ ಇಂದಿರಾ ಸಾವ್ನಿ ಈಗ ಮೋದಿ ಸರ್ಕಾರದಲ್ಲಿ ಮೇಲ್ಜಾತಿ ಬಡವರಿಗೆ ನೀಡಿರುವ ಶೇ.10 ರಷ್ಟು ಮೀಸಲಾತಿ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.
ಶನಿವಾರದಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ "ಇದು ಅಟಲ್ ಜಿ ಇಲ್ಲದ ಮೊದಲ ರಾಷ್ಟ್ರೀಯ ಸಮಾವೇಶವಾಗಿದೆ" ಎಂದರು.
ಸಾಮಾನ್ಯ ವಿಭಾಗದ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್)ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ 2019 ರ ಸಂವಿಧಾನ(124 ನೇ ತಿದ್ದುಪಡಿ) ಮಸೂದೆಯನ್ನು ಪ್ರಶ್ನಿಸಿ ಈಗ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.