ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ಫಾಫ್ ಡು ಪ್ಲೇಸಿಸ್ ನೇತೃತ್ವದ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿದೆ.
"ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಮುಂದಿನ ವರ್ಷ ಆರ್ಸಿಬಿ ತಂಡಕ್ಕೆ ಖಂಡಿತವಾಗಿಯೂ ಮರಳುತ್ತೇನೆ" ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಸ್ಪಷ್ಟನೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಗುರುತಿಸಿಕೊಂಡಿದ್ದ ಎಬಿಡಿ ಕಳೆದ ವರ್ಷ ಎಲ್ಲಾ ಪ್ರಕಾರದ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ಮತ್ತೆ ಆರ್ಸಿಬಿಗೆ ಹಿಂತಿರುಗುವುದಾಗಿ ಹೇಳಿಕೆ ನೀಡಿದ್ದು, ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲ ಎಂಬಂತಾಗಿದೆ.
IPL 2022: ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸುರೇಶ್ ರೈನಾ ಐದನೇ ಸ್ಥಾನದಲ್ಲಿದ್ದಾರೆ. ಸುರೇಶ್ ರೈನಾ ಐಪಿಎಲ್ನಲ್ಲಿ 5,528 ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಸುರೇಶ್ ರೈನಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 39 ಅರ್ಧಶತಕ ಮತ್ತು 1 ಶತಕ ಗಳಿಸಿದ್ದಾರೆ.
ಲೆಜೆಂಡರಿ ಬ್ಯಾಟ್ಸ್ಮನ್ಗಳೆಂದೆ ಖ್ಯಾತಿ ಪಡೆದ ಕ್ರಿಸ್ಗೇಲ್ ಮತ್ತು ಎಬಿ ಡಿವಿಲಿಯರ್ಸ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ʼಹಾಲ್ ಆಫ್ ಫೇಮ್ʼ ಗೌರವವನ್ನ ನೀಡಿದೆ. ಇದು ಐಪಿಎಲ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಫ್ರಾಂಚೈಸಿಯೊಂದು ತನ್ನ ಆಟಗಾರರಿಗೆ ನೀಡುತ್ತಿರುವ ಗೌರವವಾಗಿದೆ.
ಮುಂಬರುವ ಎಲ್ಲಾ ಪಂದ್ಯಗಳಲ್ಲಿ ಗೆಲುವು ಪಡೆದರೆ ಮಾತ್ರ ಆರ್ಸಿಬಿ ತಂಡವು ಪ್ಲೇ ಆಫ್ಗೆ ಪ್ರವೇಶ ಪಡೆಯಬಹುದು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಈ ಪಂದ್ಯವು ನಿರ್ಣಾಯಕವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್ಗಳಿಂದ ಜಯ ಸಾಧಿಸಿದೆ. ಈ ಋತುವಿನಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ನಂತರ ಚೆನ್ನೈಗೆ ಮೊದಲ ಸೋಲು ಇದಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ನ ಇನಿಂಗ್ಸ್ ನ 11ನೇ ಓವರ್ ನಡೆಯುತ್ತಿದ್ದ ವೇಳೆ ಹುಡುಗಿಯೊಬ್ಬಳು ಮಂಡಿಯೂರಿ ತನ್ನ ಗೆಳೆಯನಿಗೆ ಲವ್ ಪ್ರಪೋಸ್ ಮಾಡಿದಳು, ಇದನ್ನು ಒಪ್ಪಿಕೊಂಡ ಹುಡುಗ, ನಂತರ ಇಬ್ಬರೂ ಪರಸ್ಪರ ಅಪ್ಪಿಕೊಂಡರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಆರ್ಸಿಬಿ ತಂಡದಲ್ಲಿ ಸಾಂಘಿಕ ಪ್ರದರ್ಶನದ ಕೊರತೆ ಎದ್ದು ಕಾಣುತ್ತಿದೆ. ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದಾಗ ಬ್ಯಾಟಿಂಗ್ ವೈಫಲ್ಯ, ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ರೆ ಬೌಲಿಂಗ್ ವೈಫಲ್ಯ ಹೀಗೆ ತಂಡದಲ್ಲಿ ಸ್ಥಿರತೆ ಕಾಣಸಿಗುತ್ತಿಲ್ಲ.
ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡವು ಆರು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಯಲ್ ಚಾಲೆಂಜರ್ಸ್ ತಂಡವು ತಂಡದ ಮೊತ್ತ 11 ರನ್ ಗಳಾಗಿದ್ದಾಗ ದುಫ್ಲೆಸಿಸ್ ವಿಕೆಟ್ ಕಳೆದುಕೊಂಡು ಆಘಾತವನ್ನು ಎದುರಿಸಿತು.
ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು 9 ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಹೈದರಾಬಾದ್ ತಂಡವು ತನ್ನ ನಿರ್ಧಾರ ಸರಿ ಎನ್ನುವಂತೆ ಮಾರಕ ಬೌಲಿಂಗ್ ದಾಳಿಯನ್ನು ನಡೆಸಿತು.ಇದರ ಪರಿಣಾಮವಾಗಿ ಆರ್ಸಿಬಿ ತಂಡವು ತಂಡದ ಮೊತ್ತ 20 ರನ್ ಆಗುವಷ್ಟರಲ್ಲಿ ನಾಲ್ಕು ಮಹತ್ವದ ವಿಕೆಟ್ ಗಳನ್ನು ಕಳೆದುಕೊಂಡು ತೀವ್ರ ಆಘಾತವನ್ನು ಎದುರಿಸಿತು.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್ ಗಳ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.