Swami Prasad Maurya: ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ’ ಎಂದು ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ. ತಮ್ಮ ಸ್ವಂತ ಬಲದ ಮೇಲೆ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿದ ದೇಶದ ಹಿರಿಯ ತಳಮಟ್ಟದ ನಾಯಕರಾಗಿ ಮುಲಾಯಂ ಸಿಂಗ್ ಯಾದವ್ ದೊಡ್ಡ ಸಾಧನೆ ಮಾಡಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಭಾನುವಾರ ಹದಗೆಟ್ಟಿದ್ದು, ಅವರನ್ನು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ.
Mulayam Singh Yadav Health Update: ಗಂಭೀರ ಆರೋಗ್ಯ ಸ್ಥಿತಿ ಹಿನ್ನೆಲೆ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಹಠಾತ್ ಹದಗೆಟ್ಟಿದೆ. ಭಾನುವಾರ ಮಧ್ಯಾಹ್ನ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರ ಸ್ಥಿತಿ ನೋಡಿದ ವೈದ್ಯರು ಕೂಡಲೇ ಅವರಿಗೆ ವೆಂಟಿಲೇಟರ್ಗೆ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸಹೋದರ ಶಿವಪಾಲ್ ಯಾದವ್ ಮತ್ತು ಪುತ್ರ ಪ್ರತೀಕ್ ಯಾದವ್ ಜೊತೆಗಿದ್ದರು. ಅಖಿಲೇಶ್ ಯಾದವ್ ಕೂಡ ತಂದೆಯ ಸ್ಥಿತಿ ತಿಳಿದ ತಕ್ಷಣ ಲಖನೌನಿಂದ ಗುರುಗ್ರಾಮಕ್ಕೆ ತೆರಳಿದ್ದಾರೆ.
ಇದೇ ವೇಳೆ ಸ್ಥಳೀಯರ ಜಾಗರೂಕತೆಯಿಂದ ಎಸ್ಪಿ ಜಿಲ್ಲಾಧ್ಯಕ್ಷರನ್ನು ಸುರಕ್ಷಿತವಾಗಿ ಕಾಪಾಡಲಾಗಿದೆ. ಸ್ಥಳೀಯರೆಲ್ಲಾ ಸೇರಿ ಹರಸಾಹಸಪಟ್ಟು ಟ್ರಕ್ ನಿಲ್ಲಿಸಿ ವಾಹನದಿಂದ ಜಿಲ್ಲಾಧ್ಯಕ್ಷರನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ಲಾರಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಅವರು ತಮ್ಮ ಪಕ್ಷವು ಇನ್ನು ಮುಂದೆ ಸಮಾಜವಾದಿ ಪಕ್ಷ (ಎಸ್ಪಿ) ಯೊಂದಿಗೆ ಮೈತ್ರಿ ಹೊಂದಿಲ್ಲ ಮತ್ತು ಬಿಎಸ್ಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶದ ವೈಭವದ ಗತಕಾಲವನ್ನು ಉಲ್ಲೇಖಿಸಿದ ಮುರ್ಮು, "ಬುಡಕಟ್ಟು ಸಮಾಜದಲ್ಲಿ ಜನಿಸಿದ ಮಹಿಳೆಯೊಬ್ಬರು ಬೆಂಬಲ ಪಡೆಯಲು ನಿಮ್ಮ ಮುಂದೆ ಬಂದಿದ್ದಾರೆ" ಎಂದು ಹೇಳಿದರು. "ನನ್ನ ಬಲವಾದ ಇಚ್ಛಾಶಕ್ತಿಯ ಉನ್ನತ ಶಿಕ್ಷಣವನ್ನು ಪಡೆದುಕೊಂಡೆ. ಅನೇಕ ಕೊರತೆಗಳ ಹೊರತಾಗಿಯೂ ಈ ಸಾಧನೆ ಮಾಡಿದೆ. ನಾನು ದುರ್ಬಲ ವರ್ಗಗಳು ಮತ್ತು ಬುಡಕಟ್ಟು ಸಮಾಜಕ್ಕಾಗಿ ಜೀವಮಾನವಿಡೀ ದುಡಿದಿದ್ದೇನೆ. ನಿಮ್ಮೆಲ್ಲರ ಬೆಂಬಲ ನನಗೆ ಸಿಗುವ ವಿಶ್ವಾಸವಿದೆ" ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತಿನ ದಾಳಿ ನಡೆಸಿದ ಯಾದವ್ "ನೀವು ಹೇಗೆ ನಮ್ಮನ್ನು ತಡೆಯುತ್ತಿದ್ದೀರಾ? ನೀವು ನಮ್ಮನ್ನು ಏಕೆ ಒಳಗೆ ಬಿಡುತ್ತಿಲ್ಲ? ನೀವು ಮತ ಪೆಟ್ಟಿಗೆಯನ್ನು ಬದಲಾಯಿಸಲು ಯತ್ನಿಸುತ್ತಿದ್ದೀರಾ?" ಎಂದು ಪ್ರಶ್ನಿಸಿದರು. ಇದೇ ವೇಳೆ ಒಬ್ಬ ಪೊಲೀಸ್ ಪೇದೆ ʼನೀವು ಹೀಗೆ ಮಾತನಾಡಬಾರದುʼ ಎಂದು ಹೇಳುತ್ತಿರುವುದು ಕಂಡುಬಂದಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮಾತೃ ಸಂಘಟನೆಯಾದ ಆರ್ಎಸ್ಎಸ್ನ ಸೂಚನೆಯ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯು ಪ್ರಕರಣ ದಾಖಲಿಸಲು ಹೋಗಿದ್ದ ಸಂದರ್ಭದಲ್ಲಿ ಲಲಿತ್ಪುರದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (ಜನವರಿ 29) ಮುಜಫರ್ನಗರ ಗಲಭೆಯಲ್ಲಿ ನೂರಾರು ಹಿಂದೂಗಳ ಹತ್ಯೆಗೆ ರಾಜ್ಯದಲ್ಲಿ ಸಮಾಜವಾದಿ ಪಕ್ಷದ ಆಡಳಿತವನ್ನು ದೂಷಿಸಿದ್ದಾರೆ ಮತ್ತು ಕೆಂಪು ಸಮಾಜವಾದಿ ಟೋಪಿಯನ್ನು ನಿಜವಾಗಿಯೂ ರಾಮಭಕ್ತರ ರಕ್ತದಿಂದ ಚಿತ್ರಿಸಲಾಗಿದೆ ಎಂದು ಹೇಳಿದರು. ಬಾಗ್ಪತ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.