ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರದಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಪಕ್ಷಕ್ಕೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದಾರೆ.
ವಾರಣಾಸಿಯಲ್ಲಿ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಒಂದು ದಿನ ಮೊದಲು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರದಂದು ತಮ್ಮ ಅವಧಿಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಯಿತು ಮತ್ತು ಅದಕ್ಕೆ ಸಾಕ್ಷ್ಯಗಳಿವೆ ಎಂದು ಹೇಳಿದರು.
ಸಮಾಜವಾದಿ ಪಕ್ಷದ (SP) ಅಧ್ಯಕ್ಷ ಅಖಿಲೇಶ್ ಯಾದವ್ ನಂತರ ಇದೀಗ ಸುಹೇಲ್ದೇವ್ ಎಸ್ಬಿಎಸ್ಬಿ ಅಧ್ಯಕ್ಷ ಓಂ ಪ್ರಕಾಶ್ ರಾಜ್ಭರ್ ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾನನ್ನು ಹಾಡಿ ಹೊಗಳಿದ್ದಾರೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಯುಪಿಯಲ್ಲಿ ವಿಜಯ ರಥ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಒಂದು ದಿನದ ಹಿಂದೆಯಷ್ಟೇ ಅಖಿಲೇಶ್, ಕಾನ್ಪುರ ಪ್ರದೇಶದಿಂದ ರಥಯಾತ್ರೆಯನ್ನು ಆರಂಭಿಸಿದರು.
ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಮತ್ತು ಇತರ ಇಬ್ಬರ ವಿರುದ್ಧ ತಾಲಿಬಾನ್ ಅನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ ಆರೋಪದ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗಿದೆ.
2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮುನ್ನ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗುರುವಾರ ತಮ್ಮ ಪಕ್ಷವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದರು.
ಉತ್ತರ ಪ್ರದೇಶದ ಗೋರಖ್ಪುರದ ರೈಲ್ವೆ ಆಸ್ಪತ್ರೆಯ ಶೌಚಾಲಯದಲ್ಲಿ ಕೆಂಪು ಮತ್ತು ಹಸಿರು ಅಂಚುಗಳನ್ನು ಬಳಸುವುದನ್ನು ಸಮಾಜವಾದಿ ಪಕ್ಷ ಆಕ್ಷೇಪಿಸಿದ್ದು, ಅದೇ ಬಣ್ಣಗಳನ್ನು ಹೊಂದಿರುವ ತನ್ನ ಪಕ್ಷದ ಧ್ವಜಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
ರಾಜ್ಯಸಭಾ ಸಂಸದ ಮತ್ತು ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಇನ್ನಿಲ್ಲ. 64 ವರ್ಷದ ಸಿಂಗ್ ಬಹಳ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕೆಲವು ತಿಂಗಳು ಸಿಂಗಾಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮೊದಲು ಸಿಂಗ್ ಅವರು 2013 ರಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು.
ಮುಸ್ಲಿಮರು ನಮಾಜ್ ಸಲ್ಲಿರುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಡಾ.ಶಫಿಕುರ್ ರಹಮಾನ್ ಬರ್ಕ್ ಹೇಳಿದ್ದಾರೆ. ಅಷ್ಟೇ ಅಲ್ಲ ದೇಶದ ಎಲ್ಲ ಮುಸ್ಲಿಮರು ಎಲ್ಲಿಯವರೆಗೆ ಮಸೀದಿಗಳಲ್ಲಿ ನಮಾಜ್ ಸಲ್ಲಿಸುವುದಿಲ್ಲವೋ ಅಲ್ಲಿಯವರೆಗೆ ದೇಶದಿಂದ ಕೊರೊನಾ ಮಹಾಮಾರಿ ತೊಲಗಿಸಲು ಸಾಧ್ಯವಿಲ್ಲ ಎಂಬ ವಿಶ್ವಾಸವನ್ನೂ ಕೂಡ ಅವರು ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ ಮುಖಂಡ ಬೆನಿ ಪ್ರಸಾದ್ ವರ್ಮಾ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ (ಮಾರ್ಚ್ 27) ಲಕ್ನೋದಲ್ಲಿ ನಿಧನರಾದರು. ಅವರಿಗೆ 79 ವಯಸ್ಸಾಗಿತ್ತು . ಹಿರಿಯ ಸಮಾಜವಾದಿ ನಾಯಕನ ಅಂತ್ಯಕ್ರಿಯೆ ಶನಿವಾರ ಅವರ ಸ್ವಂತ ಊರಾದ ಬರಾಬಂಕಿಯಲ್ಲಿ ನಡೆಯಲಿದೆ.
ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಯುವಕರು 'ಜೈ ಶ್ರೀ ರಾಮ್' ಎಂದು ಕೂಗಿದ ನಂತರ ಬಿಜೆಪಿ ಮುಖಂಡರಿಂದ ಬೆದರಿಕೆ ಕರೆ ಮತ್ತು ಸಂದೇಶ ಬಂದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲೆಲ್ಲೂ ಈರುಳ್ಳಿಯದ್ದೇ ಸುದ್ದಿ. ಅದು ಎಷ್ಟರ ಮಟ್ಟಿಗೆ ಎಂದರೆ ಮದುವೆ ಮನೆಯಲ್ಲೂ ಅದೇ ಸುದ್ದಿ. ಇದೇನು ಮದುವೆ ಮನೆಯಲ್ಲಿ ಈರುಳ್ಳಿ ಬಳಸಲ್ವಾ. ಇದ್ಯಾಕ್ ಹೀಗೆ ಹೇಳ್ತೀದಾರೆ ಅಂತ ಯೋಚನೆ ಮಾಡ್ತಾ ಇದ್ದೀರಾ...
ರಾಂಪುರದ ತಮ್ಮ ವಿಶ್ವವಿದ್ಯಾಲಯಕ್ಕೆ ರೈತರ ಭೂಮಿಯನ್ನು ಕಸಿದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಮತ್ತು ಲೋಕಸಭಾ ಸಂಸದ ಅಜಮ್ ಖಾನ್ ವಿರುದ್ಧ ಕಳೆದ ಒಂದು ತಿಂಗಳಲ್ಲಿ 27 ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಉತ್ತರಪ್ರದೇಶದ ಪ್ರಮುಖ ಗುಜ್ಜರ್ ನಾಯಕ ಸುರೇಂದ್ರ ಸಿಂಗ್ ನಗರ್ ಅವರು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.