ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಸುವವರ ಅಂಗಡಿಗಳಿಂದ ಸಾಮಾನುಗಳ ಖರೀದಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕೈರಾನಾ ಮತ್ತು ಅಲ್ಲಿನ ಸಮೀಪದ ಗ್ರಾಮಗಳ ಜನರಿಗೆ ಒತ್ತಾಯಿಸುತ್ತಿರುವುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿದೆ.
ಗೋರಖ್ಪುರದಲ್ಲಿ ಸಾಮಾಜವಾದಿ ಪಕ್ಷದ(ಎಸ್ಪಿ) ಅಭ್ಯರ್ಥಿಯನ್ನು ಸೋಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಮೇ 16 ರಂದು ಅಖಿಲೇಶ್ ಯಾದವ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಪತ್ರವನ್ನು ಕಳುಹಿಸಿದ್ದಾರೆ ಎಂದು ಎಸ್ಪಿ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ "ಈ ಅರ್ಜಿಯಲ್ಲಿ ವಿಚಾರಣೆಗೆ ಅಗತ್ಯವಾದ ಯಾವುದೇ ಅರ್ಹತೆಯಿಲ್ಲ" ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ.
ಅಜಂಗಢ ಕ್ಷೇತ್ರದ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಎಸ್ಪಿ ಸಾಕಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ನಟ ಶತ್ರುಘ್ನ ಸಿನ್ಹಾ ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಈಗ ಅವರ ಪತ್ನಿ ಪೂನಂ ಸಿನ್ಹಾ ಮಂಗಳವಾರದಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಅಧಿಕ ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಮುಲಾಯಂ ಸಿಂಗ್ ಯಾದವ್ 1996, 2004, 2009 ಮತ್ತು 2014 ರಲ್ಲಿ ಮೇನ್ಪುರಿ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಶನಿವಾರದಂದು ಸಂಸದ ಶ್ಯಾಮ ಚರಣ್ ಗುಪ್ತಾ ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರಿಕೊಂಡರು. 2019 ರ ಲೋಕಸಭೆ ಚುನಾವಣೆಯಲ್ಲಿ ಬಂಡಾ ಕ್ಷೇತ್ರದಿಂದ ಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಸಹರಾನ್ಪುರದ ದೇವಬಂದ್ನಲ್ಲಿ ನಡೆಯಲಿರುವ ಮೈತ್ರಿ ಪಕ್ಷಗಳ ಮೊದಲ ರ್ಯಾಲಿಯಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್ ಮತ್ತು ಆರ್ ಎಲ್ ಡಿ ನಾಯಕ ಅಜಿತ್ ಸಿಂಗ್ ರ್ಯಾಲಿಯ ನೇತೃತ್ವ ವಹಿಸಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು, ಮೊದಲ ಜಂಟಿ ರ್ಯಾಲಿ ಏಪ್ರಿಲ್ 7ರಂದು ಮುಸ್ಲಿಂ ಸಮುದಾಯದ ಪ್ರಧಾನವಾಗಿರುವ ಸಹರಾನ್ಪುರದ ದೇವಬಂದ್ನಲ್ಲಿ ನಡೆಯಲಿದೆ.
ಸಮಾಜವಾದಿ ಪಕ್ಷ(ಎಸ್ಪಿ) ಹತ್ರಾಸ್ ಲೋಕಸಭಾ ಕ್ಷೇತ್ರದಿಂದ ರಾಮ್ಜಿ ಲಾಲ್ ಸುಮನ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೇ ವೇಳೆ ಮಿರ್ಜಾಪುರ ಲೋಕಸಭಾ ಕ್ಷೇತ್ರದಿಂದ ರಾಜೇಂದ್ರ ಎಸ್.ವಿಂಡ್ ಅವರಿಗೆ ಟಿಕೆಟ್ ನೀಡಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಚಾರವಾಗಿ ಬಿಜೆಪಿಯನ್ನು ಕಿಡಿಕಾರಿದ ಸಮಾಜವಾದಿ ಪಕ್ಷದ ಸಂಸದ ಸದಸ್ಯ ಸುರೇಂದ್ರ ಸಿಂಗ್ ನಗರ ಬಿಜೆಪಿಗೆ ಚುನಾವಣೆ ಹತ್ತಿರ ಬಂದಾಗ ಮಾತ್ರ ಶ್ರೀರಾಮ ನೆನಪಾಗುತ್ತಾನೆ ಎಂದು ಟೀಕಿಸಿದರು.
ಕರ್ನಾಟಕ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್ + ಬಿಎಸ್ಪಿ ಮೈತ್ರಿಕೂಟ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ, ಉತ್ತರಪ್ರದೇಶಯಲ್ಲಿ ಅದರ ನೇರ ಪರಿಣಾಮವನ್ನು ಕಾಣಬಹುದು. ಅಖಿಲೇಶ್ ಯಾದವ್ ಮತ್ತು ಮಾಯಾವತಿ ನಡುವಿನ ಮೈತ್ರಿಯಲ್ಲಿ ಬಿರುಕು ಉಂಟಾಗಬಹುದು ಎಂದು ನಂಬಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.