ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣ ಈಗ ಮಹಾರಾಷ್ಟ್ರದಲ್ಲಿ ಬಂಡಾಯ ಎದ್ದಿರುವ ಬೆನ್ನಲ್ಲೇ ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಶಾಸಕರಿಗೆ ಬಿಜೆಪಿ ಜೊತೆ ವೀಲಿನವಾಗಿರಿ, ನಾವು ಹೊಸದಾಗಿ ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ ಎಂದು ಹೇಳಿದ್ದಾರೆ.
Maharashtra Political Crisis: ಸದ್ಯ ಎಲ್ಲರ ಚಿತ್ತ ಮಹಾರಾಷ್ಟ್ರ ರಾಜ್ಯ ರಾಜಕಾರಣದ ಮೇಲಿದೆ. ಈ ಬೆನ್ನಲ್ಲೇ ಶಿವಸೇನೆ ಸಂಸದ ಸಂಜಯ್ ರಾವತ್ ರಾಜ್ಯ ವಿಧಾನಸಭೆ ವಿಸರ್ಜನೆಯ ಸುಳಿವು ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆಯಲ್ಲಿ ಆರನೇ ಸ್ಥಾನದಿಂದ ತಮ್ಮ ಪಕ್ಷದ ಅಭ್ಯರ್ಥಿ ಸಂಜಯ್ ಪವಾರ್ ಸೋಲಿನ ಬಗ್ಗೆ ಮಾತನಾಡುತ್ತಾ ಎರಡು ದಿನ ಇಡಿ ನಮ್ಮ ಕೈಗೆ ನೀಡಿದರೆ ದೇವೇಂದ್ರ ಫಡ್ನವಿಸ್ ಕೂಡ ಉದ್ಧವ್ ಠಾಕ್ರೆಗೆ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.ಬಿಜೆಪಿ ಆರು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಅವರ ಹೇಳಿಕೆ ಬಂದಿದೆ.
ಪ್ರವಾದಿ ಮುಹಮ್ಮದ್ ಕುರಿತು ನೂಪುರ್ ಶರ್ಮಾ ಅವರ ಹೇಳಿಕೆಗಳ ವಿವಾದ ತೀವ್ರಗೊಳ್ಳುತ್ತಿದ್ದಂತೆ, ಅಲ್ ಖೈದಾ ಹೊರಡಿಸಿದ ಬೆದರಿಕೆಗಳನ್ನು ಉಲ್ಲೇಖಿಸಿ, ದೇಶದ ಸಾಮಾಜಿಕ ಸಾಮರಸ್ಯವನ್ನು ಕದಡುವುದಕ್ಕೆ ಪ್ರಮುಖವಾಗಿ ಭಾರತೀಯ ಜನತಾ ಪಕ್ಷವು ಹೊಣೆಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಸೇನಾ ಮೌತ್ ಪೀಸ್ ಸಾಮ್ನಾದಲ್ಲಿ ಪ್ರಕಟವಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ ರಾವತ್, ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರೂ ಅವರು ಸೃಷ್ಟಿಸಿದ ಅಸ್ತ್ರವಿದ್ದಂತೆ ಹೊರತು ಆಸ್ತಿಯಲ್ಲ ಎಂದು ಆರೋಪಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಟೀಕಾ ಪ್ರಹಾರ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವತ್ ತಮ್ಮ ಪಕ್ಷವು ಅದೇ ಮಾತನ್ನು ಹೇಳಿದೆ, ಆದರೆ ವಿಭಿನ್ನ ಪದಗಳಲ್ಲಿ ಎಂದು ಅವರು ಹೇಳಿದ್ದಾರೆ.
ಜೂನ್ 5 ರಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ಅಯೋಧ್ಯೆ ಭೇಟಿಯನ್ನು ಮುಂದೂಡುವ ಸಾಧ್ಯತೆಯಿದೆ.ಇತ್ತೀಚೆಗೆ ಪುಣೆಗೆ ಭೇಟಿ ನೀಡಿದ್ದ ರಾಜ್ ಠಾಕ್ರೆ ಅವರು ಅನಾರೋಗ್ಯದ ಕಾರಣದಿಂದ ತಮ್ಮ ಭೇಟಿಯನ್ನು ರದ್ದುಪಡಿಸಿ ಮುಂಬೈಗೆ ಮರಳಿದ್ದರು.
ಮಹಾರಾಷ್ಟ್ರದಲ್ಲಿ ಯಾವುದೇ ಧ್ವನಿವರ್ಧಕ ಮಾರ್ಗಸೂಚಿಗಳ ಉಲ್ಲಂಘನೆಯಾಗಿಲ್ಲ ಎಂದು ಬುಧವಾರ ಪ್ರತಿಪಾದಿಸಿದ ಶಿವಸೇನೆ ಸಂಸದ ಸಂಜಯ್ ರಾವತ್ ತಮ್ಮ ಪಕ್ಷಕ್ಕೆ ಯಾರೂ ಹಿಂದುತ್ವದ ಪಾಠ ಕಲಿಸುವ ಅಗತ್ಯವಿಲ್ಲ ಎಂದು ಹೇಳಿದರು.
‘ಶಿವಸೇನೆ’ ಮತ್ತು ‘ಮಾತೋಶ್ರೀ’ ಜೊತೆ ಆಟವಾಡಬೇಡಿ. ಶಿವಸೈನಿಕರ ತಾಳ್ಮೆಯನ್ನು ಪರೀಕ್ಷಿಸಬೇಡಿ. ತಾಳ್ಮೆ ಪರೀಕ್ಷಿಸಿದರೆ ನಾವು ಏನು ಅನ್ನೋದನ್ನು ತೋರಿಸಬೇಕಾಗುತ್ತದೆ ಎಂದು ರಾವತ್ ಕಿಡಿಕಾರಿದ್ದಾರೆ.
ಮಸೀದಿಗಳಲ್ಲಿ ಧ್ವನಿವರ್ಧಕಗಳ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿರುವ ರಾಜ್ ಠಾಕ್ರೆ ವಿರುದ್ಧ ಮುಸುಕಿನ ಗುದ್ದಾಟದಲ್ಲಿ ಶಿವಸೇನೆ ಸಂಸದ ಸಂಜಯ್ ರಾವುತ್ ಶನಿವಾರದಂದು ಎಂಎನ್ಎಸ್ ಮುಖ್ಯಸ್ಥರನ್ನು "ಹೊಸ ಹಿಂದೂ ಓವೈಸಿ" ಮತ್ತು ಅವರ ಪಕ್ಷನ್ನು "ಹೊಸ ಹಿಂದುತ್ವ ಎಂಐಎಂ" ಎಂದು ಕಿಡಿ ಕಾರಿದ್ದಾರೆ.
Gulabrao Patil Controversial Statemant - ಶಿವಸೇನಾ (Shiv Sena) ಸಂಸದ ಸಂಜಯ್ ರಾವುತ್ (Sanjay Raut) ಅವರು ತಮ್ಮ ಪಕ್ಷದ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ಗುಲಾಬ್ರಾವ್ ಪಾಟೀಲ್ (Gulabrao Patil) ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ,
ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ, ಅನೇಕ ರಾಜ್ಯಗಳು ವಿಶೇಷವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಸಹ ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಿದವು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನಕ್ಕೆ ಬಿಜೆಪಿ ಆಡಳಿತದ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶಿವಸೇನಾ ಸಂಸದ ಸಂಜಯ್ ರಾವುತ್, "ಕಾನೂನು ಎಲ್ಲರಿಗೂ ಸಮಾನವಾಗಿದ್ದರೆ ಪ್ರಿಯಾಂಕಾ ಗಾಂಧಿ ಏಕೆ ಜೈಲಿನಲ್ಲಿರಬೇಕು, ಇನ್ನೊಂದೆಡೆಗೆ ಮಂತ್ರಿ ಏಕೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ" ಎಂದು ಪ್ರಶ್ನಿಸಿದ್ದಾರೆ.
ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಸಂಸದ ಸಂಜಯ್ ರೌತ್ 'ಮಾನವ ಹಕ್ಕು ಹೋರಾಟಗಾರ ಸ್ಟಾನ್ ಸ್ವಾಮೀ ಅವರನ್ನು ಜೈಲಿನಲ್ಲಿ ಕೊಲ್ಲಲಾಯಿತು' ಎಂದು ಆರೋಪಿಸಿದ್ದಾರೆ.
ಮುಂಬೈನ ದಾದರ್ನಲ್ಲಿ ಸೇನಾ ಭವನದ ಹೊರಗೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನಿನ್ನೆ ನಡೆದ ಘರ್ಷಣೆಯ ನಂತರ ಶಿವಸೇನೆ ಸಂಜಯ್ ರೌತ್ ಅವರು ಬಿಜೆಪಿಯ ಗೂಂಡಾಗಿರಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು 'ಗೂಂಡಾಗಳು ಎಂದು ಯಾರೂ ನಮಗೆ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ, ನಮಗೆ ಪ್ರಮಾಣೀಕರಿಸಲಾಗಿದೆ" ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.