ಮಹಾರಾಷ್ಟ್ರದ ಮುಂದಿನ ಸರ್ಕಾರವನ್ನು ಶಿವಸೇನೆ ನೇತೃತ್ವ ವಹಿಸಲಿದ್ದು, ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಕಾರ್ಯರೂಪಕ್ಕೆ ಬರುತ್ತದೆ ಎಂದು ಪಕ್ಷದ ವಕ್ತಾರ ಸಂಜಯ್ ರೌತ್ ಶುಕ್ರವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿರುವ ಶಿವಸೇನಾ ವಕ್ತಾರ ಸಂಜಯ್ ರೌತ್ ಬಿಜೆಪಿ ಅಧ್ಯಕ್ಷ ಶಾ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಅಯೋಧ್ಯ ಪ್ರಕರಣದಲ್ಲಿ ಶನಿವಾರ ಸುಪ್ರೀಂ ಕೋರ್ಟ್ ರಾಮ ಮಂದಿರದ ಪರವಾಗಿ ತೀರ್ಪು ನೀಡುದ್ದು, ಮೂರು ತಿಂಗಳೊಳಗೆ ನಿರ್ಮಾಣದ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕೇಂದ್ರ ಸರ್ಕಾರವು ಟ್ರಸ್ಟ್ ನಿರ್ಮಿಸುವ ಮೂಲಕ ದೇವಾಲಯವನ್ನು ನಿರ್ಮಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಶಿವಸೇನೆಯ ಸಂಜಯ್ ರೌತ್, ನೀವು 'ಹಂಗಾಮ' ಎಂದು ಕರೆಯುತ್ತಿರುವಿರಿ, ವಾಸ್ತವವಾಗಿ ಇದು 'ಹಂಗಾಮ' ಅಲ್ಲ, ನ್ಯಾಯ ಮತ್ತು ಹಕ್ಕುಗಳ ಹೋರಾಟ. ಇದರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಬಿಜೆಪಿ-ಶಿವಸೇನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಏತನ್ಮಧ್ಯೆ, ಸಂಸದ ಸಂಜಯ್ ರೌತ್ ಅವರ ನೇತೃತ್ವದಲ್ಲಿ ಶಿವಸೇನೆ ಮುಖಂಡರು ಇಂದು ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿಯಾದರು.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಚಾರವಾಗಿ ಬಿಜೆಪಿ- ಶಿವಸೇನಾ ನಡುವೆ ಮುಸುಕಿನ ಗುದ್ದಾಟ ತಾರಕ್ಕೆರಿದ್ದು, ಈಗ ಶಿವಸೇನಾ ವಕ್ತಾರ ಸಂಜಯ್ ರೌತ್ ಮಹಾರಾಷ್ಟ್ರದಲ್ಲಿ ಯಾವ ದುಶ್ಯಂತ್ ಇಲ್ಲ, ತಮ್ಮ ಪಕ್ಷದ್ದು ಧರ್ಮ ಮತ್ತು ಸತ್ಯದ ರಾಜಕಾರಣ ಎಂದು ಹೇಳಿದ್ದಾರೆ.
2014 ಕ್ಕೆ ಹೋಲಿಸಿದರೆ 2019 ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳನ್ನು ಪಡೆದಿದ್ದರೂ ಈಗ ಮಹಾರಾಷ್ಟ್ರದಲ್ಲಿ ಶಿವಸೇನೆ ಬಳಿ ರಿಮೋಟ್ ಕಂಟ್ರೋಲ್ ಪವರ್ ಇದೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.
'ರಾಜ್ಯ ಚುನಾವಣೆಯಲ್ಲಿ ಪಾಕಿಸ್ತಾನದ ವಿಷಯವನ್ನು ಎತ್ತುವ ಮೂಲಕ ನೀವು ಏನು ಮಾಡುತ್ತೀರಿ. ಈ ವಿಷಯದಲ್ಲಿ ಲೋಕಸಭೆಯಲ್ಲಿ ಜನರು ನಿಮಗೆ ಮತ ಹಾಕಿದ್ದಾರೆ. ನೀವು ಅದೇ ವಿಷಯಗಳಲ್ಲಿ ಗೆದ್ದಿದ್ದೀರಿ' ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದು ಬಾಲ ಠಾಕ್ರೆ ಅವರ ಕನಸಾಗಿತ್ತು. ಅದಕ್ಕಾಗಿಯೇ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡೆವು ಎಂದು ಸಂಜಯ್ ರೌತ್ ಹೇಳಿದ್ದಾರೆ.
'ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಷಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಟ್ರಂಪ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಆರ್ಟಿಕಲ್ 370ನ್ನು ಹಿಂತೆಗೆದುಕೊಂಡ ನಂತರ, ಈಗ ಹಿಂದೂಸ್ತಾನ್ ಕಾಶ್ಮೀರವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ ಎಂಬುದನ್ನು ಪಾಕಿಸ್ತಾನವು ಒಪ್ಪಿಕೊಳ್ಳಲಿದೆ.'
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.