Reena Roy: ರೀನಾ ರಾಯ್ ಅವರ ಹೆಸರು ಮೊದಲು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಜೊತೆ ತಳುಕು ಹಾಕಿಕೊಂಡಿತ್ತು. ಇಬ್ಬರೂ ಕೂಡ 7 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಸುದ್ದಿ ಪ್ರಕಾರ, ಇಬ್ಬರೂ ಪರಸ್ಪರ ಮದುವೆಯಾಗಲು ಬಯಸಿದ್ದರು ಆದರೆ ಶತ್ರುಘ್ನ ಪೂನಂ ಅವರನ್ನು ವಿವಾಹವಾದರು. ಹಾಗಾಗಿ ಇಬ್ಬರೂ ಶಾಶ್ವತವಾಗಿ ಬೇರ್ಪಟ್ಟರು.
Shatrughan Sinha Relationship: ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಿನ್ಹಾ ತನ್ನ ಪತಿಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದ ನಂತರವೂ ಯಾವಾಗಲೂ ಮೌನವಾಗಿದ್ದಳು. ಪೂನಂ ಸಿನ್ಹಾರ ಈ ಮೌನವು ಶತ್ರುಘ್ನ ಸಿನ್ಹಾಗೆ ರೀನಾ ರಾಯ್ ಜೊತೆ ಸಂಬಂಧ ಹೊಂದಲು ಅವಕಾಶ ಮಾಡಿಕೊಟ್ಟಿತ್ತೆ?
ಕಾಂಗ್ರೆಸ್ ಪಕ್ಷದ ಪಟ್ನಾ ಸಾಹಿಬ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಮತ್ತು ಲಕ್ನೋ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿರುವ ಪತ್ನಿ ಪೂನಮ್ ಸಿನ್ಹಾ ಪುತ್ರರಾದ ಲವ್ ಮತ್ತು ಕುಶ್ ಅವರು ಕಡಮ್ವಾನ್ನಲ್ಲಿರುವ ಸೇಂಟ್ ಸೆವೆರಿನ್ಸ್ ಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಅಭ್ಯರ್ಥಿಯಾಗಿ ಲಕ್ನೋದಿಂದ ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸ್ಪರ್ಧಿಸುತ್ತಿದ್ದಾರೆ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಪತಿ ಶತ್ರುಘ್ನ ಸಿನ್ಹಾ ಕುಟುಂಬದ ಸದಸ್ಯರಿಗೆ ಬೆಂಬಲಿಸುವುದು ತಮ್ಮ ಕರ್ತವ್ಯವೆಂದು ತಿಳಿಸಿದ್ದಾರೆ.
ನಟ ಶತ್ರುಘ್ನ ಸಿನ್ಹಾ ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬೆನ್ನಲ್ಲೇ ಈಗ ಅವರ ಪತ್ನಿ ಪೂನಂ ಸಿನ್ಹಾ ಮಂಗಳವಾರದಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶತ್ರುಘ್ನ ಸಿನ್ಹಾ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬಿಟ್ಟು ಕಾಂಗ್ರೆಸ್ ಗೆ ಎಪ್ರಿಲ್ 6 ರಂದು ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.ಈಗ ತಂದೆ ನಿರ್ಧಾರಕ್ಕೆ ಮಗಳು ಸೋನಾಕ್ಷಿ ಸಿನ್ಹಾ ಈಗ ಬೆಂಬಲ ವ್ಯಕ್ತಪಡಿಸಿದ್ದಾಳೆ.
ಬಿಜೆಪಿ ಪಕ್ಷದಲ್ಲಿ ಬಂಡಾಯ ನಾಯಕರಾಗಿ ಗುರುತಿಸಿಕೊಂಡಿದ್ದ ಶತ್ರುಘ್ನ ಸಿನ್ಹಾ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
2019 ಲೋಕಸಭೆ ಚುನಾವಣೆಯಲ್ಲಿ "ಬಿಹಾರಿ ಬಾಬು"ಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಹಾರಿ ಬಾಬು ಶತ್ರುಘ್ನ ಸಿನ್ಹಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಬಿಜೆಪಿ ಸಂಸದನಾಗಿದ್ದುಕೊಂಡೇ ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದ ಹಿರಿಯ ನಾಯಕ ಶತ್ರುಘ್ನ ಸಿನ್ಹಾಗೆ ಈ ಬಾರಿ ಪಾಟ್ನಾ ಸಾಹಿಬ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತಿಲ್ಲ ಎಂದು ಸುದ್ದಿ ಮೂಲಗಳು ತಿಳಿಸಿವೆ.
ನಟ ಹಾಗೂ ರಾಜಕಾರಣಿ ಅದೃಷ್ಟವಶಾತ್ ತಮ್ಮ ಹೆಸರು ಮೀಟೂ ಚಳುವಳಿಯಲ್ಲಿ ಬರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.ಇದೇ ವೇಳೆ ಸ್ಪಷ್ಟಪಡಿಸಿದ ಅವರು ಮೀಟೂ ಚಳುವಳಿಯನ್ನು ವ್ಯಂಗ್ಯ ಮಾಡುತ್ತಿಲ್ಲ ಆದ್ದರಿಂದ ತಮ್ಮ ಹೇಳಿಕೆಯನ್ನು ಸರಿಯಾದ ವಿಡಂಬನೆಯಲ್ಲಿ ತೆಗೆದುಕೊಳ್ಳಬೇಕೆಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.