ಕನ್ನಡ ಚಲಚನಚಿತ್ರ ಕಪ್ (KCC) ಕ್ರಿಕೆಟ್ ಟೂರ್ನ್ಮೆಂಟ್ ಶುರುವಾಗಲಿದೆ. ಇಷ್ಟು ದಿನ ಪರದೆ ಮೇಲೆ ಮ್ಯಾಜಿಕ್ ಮಾಡುತ್ತಿದ್ದ ಸಿನಿ ತಾರೆಯರು ಇದೀಗ ಬ್ಯಾಟ್ ಹಿಡಿದು ಗ್ರೌಂಡ್ನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ. ಇನ್ನು ಕೆಸಿಸಿ ಕುರಿತು ಕಿಚ್ಚ ಸುದೀಪ್ ಮಾಹಿತಿ ನೀಡಿದ್ದು, ಈ ಭಾರಿಯ ಟೂರ್ನ್ಮೆಂಟ್ನಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ ಅಂತ ಹೇಳಿದ್ರು.
Bigg Boss Kannada season 9 : ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲಿಸ್ಟ್ಗಳು ಫಿನಾಲೆಗಾಗಿ ಕಾಯುತ್ತಿದ್ದಾರೆ. ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವ ರಾಜ್ಕುಮಾರ್ ಅವರನ್ನು ಬಿಗ್ ಬಾಸ್ ಕನ್ನಡ 9 ಫೈನಲ್ಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.
ವೇದ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ಜೋಡಿಯ 4ನೇ ಚಿತ್ರ ಅನ್ನೋದು ವಿಶೇಷ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಸಿನಿಮಾ 1960ರ ದಶಕದಲ್ಲಿ ನಡೆಯುವ ಕಥೆ,
Shiva Rajkumar Birthday: ಇಂದು ಸೆಂಚ್ಯೂರಿ ಸ್ಟಾರ್ ಶಿವರಾಜ್ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಲಿರುವ ಚಿತ್ರದ ಟೈಟಲ್ ಅನೌನ್ಸ್ ಆಗಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 60 ನೇ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್. ಮಾನ್ಯತಾ ರೆಸಿಡೆನ್ಸಿ ನಿವಾಸಿಗಳ ಬಿಗ್ ಗಿಫ್ಟ್ ನೀಡಿದ್ದಾರೆ. ಶಿವಣ್ಣನ ಹುಟ್ಟುಹಬ್ಬದ ಪ್ರಯುಕ್ತ ಮಾನ್ಯತಾ ಟೆಕ್ ಪಾರ್ಕ್ ನ ಸರ್ಕಲ್ ಗೆ ಶಿವ ರಾಜ್ಕುಮಾರ್ ಹೆಸರಿಡಲು ನಿರ್ಧರಿಸಿದ್ದಾರೆ.
ಅರವತ್ತನೇ ವಯಸ್ಸಿನಲ್ಲೂ ಹದಿಹರೆಯದವರನ್ನು ನಾಚಿಸುವಂತಹ ಉತ್ಸಾಹವಿರುವ ನಟ ಶಿವರಾಜಕುಮಾರ್. ಇತ್ತೀಚೆಗೆ ಬಿಡುಗಡೆಯಾದ ಶಿವಣ್ಣ ಅಭಿನಯದ "ಬೈರಾಗಿ" ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಹೊಸಪೇಟೆ ನಗರದ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ದೊಡ್ಮನೆ ಹುಡ್ಗನ 7.04 ಅಡಿ ಎತ್ತರದ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಪುತ್ಥಳಿಯನ್ನಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಿಂದ ತರಿಸಲಾಗಿದೆ.
Hello everyone. My special thanks to Shivaraj Kumar Anna. I never believed the word that Puneet Sir was not here. I am never cry for that Puneet Sir is not with us. Because Puneet Sir means Celebration. Let us always celebrate him. Never cry that he is not there. My mother wants to hear if I speak Kannada. She dreamed a lot to see Raj Kumar. But that oppurtunity came like this today.
ʼಜೇಮ್ಸ್ʼ ಕೇವಲ ಚಿತ್ರವಲ್ಲ, ಇದು ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಮಹಾ ಕನಸು. ಅಪ್ಪು ನಮ್ಮನ್ನೆಲ್ಲಾ ಅಗಲಿದ ಮೇಲೆ ತೆರೆಗೆ ಬರುತ್ತಿರುವ ಸಿನಿಮಾ. ಅಲ್ಲದೆ ಅಪ್ಪು ಹೀರೋ ಆಗಿ ಮಿಂಚಿರುವ ಕೊನೇ ಚಿತ್ರ. ಹೀಗಾಗಿ ಜೇಮ್ಸ್ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳು ಇದ್ದವು. ಈ ಎಲ್ಲಾ ನಿರೀಕ್ಷೆಗಳನ್ನು ಜೇಮ್ಸ್ ಪೋಸ್ಟರ್ ದುಪ್ಪಟ್ಟು ಮಾಡಿದೆ. ಜೊತೆಗೆ ಅಣ್ಣಾವ್ರ ಮಕ್ಕಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕೆನ್ನುವ ಕೋಟಿ ಕೋಟಿ ಅಭಿಮಾನಿಗಳ ಕನಸು ಕೂಡ ನನಸಾಗಿದೆ.
'ಪುನೀತ್ ನನ್ನ ನಿಜವಾದ ಸ್ನೇಹಿತ. ಉಚಿತ ಶಿಕ್ಷಣ ಪಡೆಯುತ್ತಿದ್ದ 1800 ಮಕ್ಕಳ ಶ್ರೇಯೋಭಿವೃದ್ಧಿ ಕಾರ್ಯವನ್ನು ನಾನು ಮುಂದುವರಿಸುತ್ತೇನೆ. ಆ ಮಕ್ಕಳಿಗೆ ತೊಂದರೆಯಾಗದಂತೆ ನನ್ನ ಹಣ ಮತ್ತು ನನ್ನ ಶಕ್ತಿಯನ್ನೆಲ್ಲ ಹೂಡಿಕೆ ಮಾಡುತ್ತೇನೆ'
By accepting cookies, you agree to the storing of cookies on your device to enhance site navigation, analyze site usage, and assist in our marketing efforts.