BJP Slams Priyank Kharge: ತಂದೆಯ ಕೃಪಾಕಟಾಕ್ಷದಿಂದ ಸಿದ್ದರಾಮಯ್ಯರ ಹಿಡಿತಕ್ಕೂ ಸಿಗದೆ ಪ್ರಿಯಾಂಕ್ ಖರ್ಗೆ ಆಡಿದ್ದೇ ಆಟ ಎನ್ನುವಂತಾಗಿರುವುದು ಕರ್ನಾಟಕದ ದುರಂತ..! ಎಂದು ಬಿಜೆಪಿ ಕುಟುಕಿದೆ.
Elephant Attack On Women: 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ 45 ವರ್ಷದ ವೀಣಾ ಸಾವನ್ನಪ್ಪಿದ್ದಾರೆ. ನಿಮಗೆ ಇನ್ನೆಷ್ಟು ಬಲಿ ಬೇಕು? ಎಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka Political News: ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
JDS Karnataka Drought Study: ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
‘ರಾಜ್ಯವನ್ನು ಕಾಡುತ್ತಿರುವ ಬರ, ಕುಡಿಯುವ ನೀರಿನಂಥ ಜ್ವಲಂತ ಸಮಸ್ಯೆಗಳ ನಿರ್ವಹಣೆಗಿಂತಲೂ ಮುಂದಿನ ಎರಡು ವರ್ಷ ಕಾಲದವರೆಗಾದರೂ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯರವರಿಗೆ ದೊಡ್ಡ ತಲೆ ನೋವಾಗಿದೆ’ ಎಂದು ಬಿಜೆಪಿ ಕುಟುಕಿದೆ.
ಇದು ಒಂದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿದ್ದರಾಮಯ್ಯನವರೇ, ನಿಮಗೆ ಈ ಪಾಡು ಬರಬಾರದು. ನಾನೇ CM ಎಂದು ಹೇಳಿಕೊಳ್ಳುವ ದೌರ್ಭಾಗ್ಯ ಬರಬಾರದಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಲೇವಡಿ. ಅದಕ್ಕಾಗಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲವಾದಲ್ಲಿ ಎಲ್ಲ ಸೇರಿ ನಿಮ್ಮವರೇ ನಿಮ್ಮ ಸರ್ಕಾರ ಬೀಳಿಸ್ತಾರೆ..
ಬರ ಪ್ರವಾಸ ಬದಲು ಕೇಂದ್ರಕ್ಕೆ ನಿಯೋಗ ಹೋಗೋದು ಒಳ್ಳೆಯದು . ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ವೈ ಕಿಡಿ . ಸಿಎಂ ಅವ್ರು ಏನು ಬೇಕಾದ್ರೂ ಹುಚ್ಚುಚ್ಚಾಗಿ ಮಾತಾಡ್ತಾರೆ. ಬೇಕಾದ ಅನುಕೂಲ ಪಡೆಯ ಬೇಕಾಗಿರುವುದು ಅವರ ಕರ್ತವ್ಯ. ಪರಿಹಾರ ಪಡೆಯಲು ಅವರು ಪ್ರಾಮಾಣಿಕ ಪ್ರಯತ್ನ ಮಾಡಲಿ. ಅದನ್ನು ಮಾಡದೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತಾಡ್ತಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, ‘ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲವೆಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು’ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.