Covid-19 JN.1: ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿವೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. 7 ಜನ ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.
Indira Canteen new Menu: ‘ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ಗಳು ಈಗ ಮತ್ತಷ್ಟು ಶುಚಿ-ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧಗೊಂಡಿವೆ. ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ-ಊಟ ದೊರೆಯುವ ಇಂದಿರಾ ಕ್ಯಾಂಟೀನ್ ಯೋಜನೆಯ ಸಂಪೂರ್ಣ ಸದುಪಯೋಗ ಪಡೆಯಿರಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Drought relief Fund: 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
Siddaramaiah Fake Video Case: ‘ವಿಷಯವನ್ನು ತಿರುಚುವುದು, ವಿಷಯಾಂತರ ಮಾಡುವುದು ಕಾಂಗ್ರೆಸ್ ಪಕ್ಷದ DNAಯಲ್ಲಿ ಅಡಕವಾಗಿದೆ’ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ‘ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಮೊದಲು ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ!’ ಎಂದು ಟೀಕಿಸಿದೆ.
BJP vs Congress: ಪ್ರಧಾನಿ ಮೋದಿಯವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ "ಫೇಕ್ ನ್ಯೂಸ್ ಪೆಡ್ಲರ್" ಗಳಾದ ಸಿಟಿ ರವಿ ಮತ್ತು ಅಶ್ವತ್ಥ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ’ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Belagavi Woman Assault Case: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.
Parliament smoke attack case: ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಲೇಹರ್ ಸಿಂಗ್ ಹೇಳಿದ್ದಾರೆ.
Tipu Sultan Controversy: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ನಾಳೆ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಪ್ಪು ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
ಕುಡತಿನಿ ಬಳಿ 361 ದಿನಗಳಿಂದ ಪ್ರತಿಭಟನಾ ನಿರತ ಭೂ ಸಂತ್ರಸ್ತರ ಹೋರಾಟದ ಕುರಿತ ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಸ್ ಅವರು ಸುವರ್ಣಸೌಧದಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಂದಿಸಿ, ಡಿಸೆಂಬರ್ 14ರ ಗುರುವಾರ ಮಧ್ಯಾಹ್ನ 3.30ಕ್ಕೆ ಕೊಠಡಿ ಸಂಖ್ಯೆ 315 ರಲ್ಲಿ ವಿಶೇಷ ಸಭೆ ಕರೆದಿದ್ದಾರೆ.
ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹವೆಂದು ಬಿಜೆಪಿ ಟೀಕಿಸಿದೆ.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Majestic Nandini booths: ಪ್ರಚಾರದ ತೆವಲಿಗೆ ಬಿದ್ದು ನಂದಿನಿ ಬೂತ್ಗೆ ಹೋಗಿ ಉತ್ಪನ್ನಗಳನ್ನು ಖರೀದಿ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಇದೀಗ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿನ ಶಾಪ್ಗಳನ್ನು ಕ್ಲೋಸ್ ಮಾಡಿಸುತ್ತಿದೆ. ಸೇವ್ ನಂದಿನಿ ಅಭಿಯಾನ ಇದೀಗ ಶುರುವಾಗಿದೆ ತುಘಲಕ್ ಸರ್ಕಾರದಿಂದ ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕಿದೆ.ʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
BJP vs Congress: ‘ಐಸಿಸ್ ಜೊತೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ’ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಸಿಎಂ ಸಿದ್ದರಾಮಯ್ಯನವರು ಮೊದಲಿನಂತೆ ಖಡಕ್ ಆಗಿಲ್ಲ
ಹಿಂದೆ ಖಡಕ್ ಆಗಿ ಅಧಿಕಾರಿಗಳ ಚಳಿ ಬಿಡಿಸಿದ್ದನ್ನು ನೋಡಿದ್ದೇನೆ
ಈಗ ಯಾಕೋ ಗರ ಬಡೆದವರಂತೆ ಸಿದ್ದರಾಮಯ್ಯ ಆಗಿದ್ದಾರೆ
ಕಲಾಪದಲ್ಲಿ ಮುಖ್ಯಮಂತ್ರಿ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್
ಸಿದ್ದರಾಮಯ್ಯರಿಗೆ ಯಾರು ಏನು ಮಾಡಿದ್ರು ಏನು ತಗಲುವುದಿಲ್ಲ
Shri Guru Raghavendra Bank scandal: ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಯಿಂದ ಸಾವಿರಾರು ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.