ಅಪನಂಬಿಕೆಯ ವಾತಾವರಣವನ್ನು ಸೃಷ್ಟಿಸಲು ಭಯ, ಭಾವನೆಗಳು ಮತ್ತು ವದಂತಿಗಳನ್ನು ಹುಟ್ಟುಹಾಕುವ ಮೂಲಕ ಅವರನ್ನು ದಾರಿ ತಪ್ಪಿಸುವ ಏಕೀಕೃತ ಪ್ರಯತ್ನಗಳ ವಿರುದ್ಧ ಬಿಹಾರದ ಜನರು ಹೆಚ್ಚಿನ ಜಾಗರೂಕರಾಗಿರಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ.
ವೈದ್ಯಕೀಯ ತಪಾಸಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಅವರೊಂದಿಗೆ ಅವರ ಪುತ್ರ ಮತ್ತು ಪಕ್ಷದ ಮುಖಂಡ ರಾಹುಲ್ ಗಾಂಧಿ ತೆರಳಲಿದ್ದಾರೆ.
ಗುಲಾಂ ನಬಿ ಆಜಾದ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಟ್ಟು ಮಾಜಿ ಸಚಿವ ತಾರಿಕ್ ಅನ್ವರ್ ಅವರಿಗೆ ಡಬಲ್ ಬಡ್ತಿ ನೀಡುವ ಮೂಲಕ ಸೋನಿಯಾ ಗಾಂಧಿ ಶುಕ್ರವಾರ ಪಕ್ಷದಲ್ಲಿ ಪ್ರಮುಖ ಪುನರ್ರಚನೆ ಮಾಡಿದ್ದಾರೆ.ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ ಸೋನಿಯಾಗಾಂಧಿ ಗಾಂಧಿಗೆ ಪತ್ರ ಬರೆದ 23 ಜನರ ಗುಂಪಿನಲ್ಲಿ ಆಜಾದ್ ಅತ್ಯಂತ ಹಿರಿಯ ನಾಯಕರಾಗಿದ್ದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಬಡ ವಿರೋಧಿ ಮತ್ತು ದೇಶ್ ವಿರೋಧಿ ಪಡೆಗಳು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ವಿಷವನ್ನು ಹರಡುತ್ತಿವೆ, ಇದು ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
COVID-19 ವೈರಸ್ ಇರುವ ಕಾರಣಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡುವಂತೆ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಬಾಕಿ ಉಳಿದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪಾಲು, ಮತ್ತು ನೀಟ್ ಮತ್ತು ಜೆಇಇ ಪರೀಕ್ಷೆಯ ಸಮಸ್ಯೆ ಚರ್ಚಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್ ಹೊಸ ಅಧ್ಯಕ್ಷರ ಬಗ್ಗೆ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ನಾನು ಮತ್ತೊಮ್ಮೆ ಅಧ್ಯಕ್ಷೆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಇನ್ನೊಂದೆಡೆ ಮತ್ತೊಮ್ಮೆ ರಾಹುಲ್ ಗಾಂಧಿಯವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಬೇಡಿಕೆ ಹೆಚ್ಚಾಗಿದೆ.
ಆಗಸ್ಟ್ 24 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಗೆ ಮುಂಚಿತವಾಗಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಮೂಲಗಳ ಪ್ರಕಾರ, ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಔಪಚಾರಿಕವಾಗಿ ಘೋಷಿಸಬಹುದು ಎನ್ನಲಾಗಿದೆ.
ಇತ್ತೀಚೆಗಷ್ಟೇ ಈ ಕುರಿತು ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಪೂರ್ಣಾವಧಿ ಅಧ್ಯಕ್ಷರ ನೇಮಕ ಆಯ್ಕೆಯಾಗುವವರೆಗೆ ಸೋನಿಯಾ ಗಾಂಧಿ ಪಕ್ಷದ ಆಂತರಿಕ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದಿತ್ತು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ವಾಡಿಕೆಯ ಪರೀಕ್ಷೆಗಳಿಗಾಗಿ ಗುರುವಾರದಂದು ದೆಹಲಿಯಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ದೇಶವು ಯಥಾಸ್ಥಿತಿ ಪುನಃ ಸ್ಥಾಪನೆಯಾಗಲಿದೆ ಎಂಬ ಭರವಸೆಯನ್ನು ಬಯಸುತ್ತದೆ ಮತ್ತು ಚೀನಾವು ವಾಸ್ತವಿಕ ನಿಯಂತ್ರಣದ ರೇಖೆಯ ಮೂಲ ಸ್ಥಾನಕ್ಕೆ ಮರಳಲಿದೆ" ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹೇಳಿದರು. ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಅವರು ಮಾತನಾಡಿ ಕೇಂದ್ರ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದರು.
ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ತಡರಾತ್ರಿ ಚೀನಾದ ಸೈನ್ಯದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಭಾರತೀಯ ಸೇನೆಯ 20 ಸೈನಿಕರು ಸಾವನ್ನಪ್ಪಿದ ಪೂರ್ವ ಲಡಾಖ್ನ ಪರಿಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದಾರೆ.
ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸದಿರುವ ಕಾರಣಕ್ಕಾಗಿ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಮತ್ತು ಮುಂದಿನ ಆರು ತಿಂಗಳವರೆಗೆ ದೇಶದ ಪ್ರತಿ ನಿರ್ಗತಿಕರಿಗೆ ಕೇಂದ್ರವು 7,500 ರೂ. ನೀಡಬೇಕೆಂದು ಆಗ್ರಹಿಸಿದ್ದಾರೆ
ಸೋನಿಯಾ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.