ಚುನಾವಣೆ ಫಲಿತಾಂಶಕ್ಕೆ ಮುನ್ನೆವೇ ನಾನು ಸಿಎಂ, ನಾನು ಸಿಎಂ ಎಂದು ಹೇಳುವುದು ಸರಿಯಲ್ಲಾ, ಸಿಎಂ ಯಾರಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗದಲ್ಲೂ ತೀರ್ಮಾನವಾಗುವುದಿಲ್ಲಾ. ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ಕಾಂಗ್ರೆಸ್ ಪಕ್ಷ ಮೋದಿ ಹಾಗೂ ಗಡಿಪಾರ್ ಅಮಿತ್ ಶಾ ಅವರ ಧಮಕಿಗೆ ಹೆದರುವುದಿಲ್ಲ. ಸೋನಿಯಾ ಗಾಂಧಿ ಅವರನ್ನು ಮುಟ್ಟಿದರೆ ಸರ್ಕಾರ ಚೂರಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಿತ್ತೊಗೆಯುವವರೆಗೂ ನಮ್ಮ ಹೋರಾಟ ಮುಂದುವರಿಯಬೇಕು. ನಮ್ಮ ಹೋರಾಟ ಶಾಂತಿಯುತವಾಗಿರಬೇಕು. ಗಾಂಧಿ ತತ್ವ ಹಾಗೂ ನಾಯಕತ್ವದಲ್ಲಿ ಶಾಂತಿಯುತ ಹೋರಾಟ ಮಾಡಿದಂತೆ ನಾವು ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹೆಡ್ಗೆವಾರ್ ಅವರಿಂದ 1925ರಲ್ಲಿ ಸ್ಥಾಪನೆಯಾದ ಆರ್ಎಸ್ಎಸ್ ಯಾವತ್ತಾದರೂ ಒಂದು ದಿನ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಉದಾಹರಣೆ ಇದೆಯಾ? ಸಾವರ್ಕರ್ ಒಬ್ಬ ಮಹಾನ್ ರಾಷ್ಟ್ರಭಕ್ತ ಎಂದು ಹೇಳುತ್ತಾರೆ, ಸಾವರ್ಕರ್ ಬ್ರಿಟೀಷರಿಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟು ನನ್ನನ್ನು ಜೈಲಿನಿಂದ ಬಿಡುಗಡೆ ಮಾಡಿ ಎಂದು ಪರಿಪರಿಯಾಗಿ ಮನವಿ ಮಾಡಿದ್ದರು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಇಡಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ, ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಪ್ರಜಾಪ್ರಭುತ್ವ ಉಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ, ಇದನ್ನು ಬಿಜೆಪಿ ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳಿಂದ ಸೋನಿಯಾ ಗಾಂಧಿ ವಿಚಾರಣೆ ನಡೆಯಲಿದೆ. ಮತ್ತೊಂದೆಡೆ ED ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಲೋಬೊ ಅವರು ಪಕ್ಷಕ್ಕೆ ಹಾನಿ ಮಾಡುವ ಸಂಚು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಗುಂಡೂರಾವ್ ಈ ಬಗ್ಗೆ ಮಾತನಾಡಿದ್ದು, “ಕಾಮತ್ ಮತ್ತು ಲೋಬೋ ಚುನಾವಣೆಗೆ ಮುನ್ನ ಸರ್ವೇಶ್ವರನ ಮುಂದೆ ಪಕ್ಷ ಬಿಡುವುದಿಲ್ಲ ಮತ್ತು ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದವರು. ಇದು ದೇವರಿಗೆ ಎಷ್ಟು ಬೆಲೆ ಕೊಡುತ್ತದೆ ಎಂಬುದಕ್ಕೆ ಸ್ಪಷ್ಟ ಪ್ರತಿಬಿಂಬವಾಗಿದೆ. ಆದರೆ ಈ ಇಬ್ಬರೂ ನಾಯಕರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ್ದಾರೆ.ಇದಕ್ಕೂ ಮೊದಲು ಅವರು ಜೂನ್ 23 ರಂದು ಇಡಿ ಮುಂದೆ ಹಾಜರಾಗಬೇಕಾಗಿತ್ತು,
ಪ್ರತಿಭಟನಾಕಾರರಿಗೆ ಹಿಂದಿಯಲ್ಲಿ ಬರೆದಿರುವ ಪತ್ರದಲ್ಲಿ ಸೋನಿಯಾ ಗಾಂಧಿ, ಈ ಕುರಿತು ಹೊಸ ಸಶಸ್ತ್ರ ಪಡೆಗಳ ನೇಮಕಾತಿ ನೀತಿಯನ್ನು ಸಂಪೂರ್ಣವಾಗಿ ದಿಕ್ಕಿಲ್ಲದ್ದು, ನರೇಂದ್ರ ಮೋದಿ ಸರ್ಕಾರವು ಸೇನಾ ಆಕಾಂಕ್ಷಿಗಳ ಧ್ವನಿಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.