Punjab New Chief Minister: ಪಂಜಾಬ್ ಕಾಂಗ್ರೆಸ್ನಲ್ಲಿ (Congress) ನೂತನ ಮುಖ್ಯಮಂತ್ರಿಗಾಗಿ ಇನ್ನೂ ಯಾವುದೇ ಒಂದು ಮುಖದ ಮೇಲೆ ಒಮ್ಮತ ಮೂಡಿಬಂದಿಲ್ಲ. ಈ ಕುರಿತು ಹೇಳಿಕೆ ನೀಡಿದ್ದ ಪಕ್ಷದ ಹಿರಿಯ ಮುಖಂಡೆ ಅಂಬಿಕಾ ಸೋನಿ ಕೇವಲ ಸಿಖ್ ಮುಖ ಮಾತ್ರ ಪಂಜಾಬ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ರಾಜ್ಯ ಘಟಕಗಳಲ್ಲಿ ಮತ್ತು ಕೇಂದ್ರದಲ್ಲಿ ಹಲವು ವಿಭಾಗಗಳಾಗಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಈಗ ಪ್ರಶಾಂತ್ ಕಿಶೋರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಚರ್ಚೆಯನ್ನು ನಡೆಸಲಾಗುತ್ತಿದೆ.
2024 ರ ರಾಷ್ಟ್ರೀಯ ಚುನಾವಣೆಗೆ ವ್ಯವಸ್ಥಿತವಾಗಿ ಯೋಜಿಸಿ ಒಗ್ಗಟ್ಟಿನಿಂದ ಕೆಲಸ ಮಾಡಲು ಎಲ್ಲ ರೀತಿಯ ಒತ್ತಡಗಳನ್ನು ಮೀರಬೇಕೆಂದು ಸೋನಿಯಾ ಗಾಂಧೀ ಸರ್ವಪಕ್ಷದ ಸಭೆಯಲ್ಲಿ ಪ್ರತಿಪಕ್ಷಗಳಿಗೆ ಕರೆ ನೀಡಿದ್ದಾರೆ.
ದೇಶಾದ್ಯಂತ ಮ್ಯೂಕೋರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೋವಿಡ್ನಲ್ಲಿ ಪತ್ತೆಯಾಗುತ್ತಿರುವ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ನೀಡಲು ಅಗತ್ಯ ಔಷಧವಾದ ಲಿಪೊಸೋಮಲ್ ಆಂಫೊಟೆರಿಸಿನ್-ಬಿ ಪೂರೈಕೆಯ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಭಾರತದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವನ್ನು ಎದುರಿಸಲು ರಾಷ್ಟ್ರವ್ಯಾಪಿ ಕಾರ್ಯತಂತ್ರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ವೀಡಿಯೋ ಸಂದೇಶದಲ್ಲಿ ಕರೆ ನೀಡಿದ್ದಾರೆ.
ಕರೋನವೈರಸ್ ಪ್ರಕರಣಗಳ ಉಲ್ಬಣ ಹೆಚ್ಚಾಗಿರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿ ಇಂದು ಕಾಂಗ್ರೆಸ್ ಪಕ್ಷದ ಆಡಳಿತವಿರುವ ರಾಜ್ಯಗಳ ಸಿಎಂ ಗಳೊಂದಿಗೆ ವರ್ಚುವಲ್ ಸಭೆಯನ್ನು ನಡೆಸಿದರು.ಈ ಸಭೆಯಲ್ಲಿ ರಾಹುಲ್ ಗಾಂಧೀ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಬೆಲೆಗಳ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ (ಫೆಬ್ರವರಿ 21, 2021) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಉನ್ನತ ಮಟ್ಟದಲ್ಲಿವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಅಧ್ಯಕ್ಷರ ಬಗ್ಗೆ ಪ್ರತಿಭಟನೆ ನಡೆದಿತ್ತು.
'ಬಿಜೆಪಿಯಲ್ಲಿ ಮೋದಿ ಹೇಗೋ, ಕಾಂಗ್ರೆಸ್ನಲ್ಲಿ ರಾಹುಲ್ ಗಾಂಧಿ ಹಾಗೇ. ಅವರು ಕೇಂದ್ರ ಸರ್ಕಾರದ ವಿರುದ್ಧದ ನಿಜವಾದ ಹೋರಾಟಗಾರ. ಸರ್ವಾಧಿಕಾರಿಗಳು ತಮ್ಮ ವಿರುದ್ಧ ಒಬ್ಬ ವ್ಯಕ್ತಿ ಹೋರಾಟಡಿದರೂ ಭಯ ಪಡುತ್ತಾರೆ.
ಶಿವಸೇನೆ ಸಂಸದ ಸಂಜಯ್ ರೌತ್ ಶನಿವಾರ ಕಾಂಗ್ರೆಸ್ ನೇತೃತ್ವದ ಯುಪಿಎ ಬಣದ ವ್ಯಾಪ್ತಿಯನ್ನು ವಿಸ್ತರಿಸಬೇಕೆಂದು ಕರೆ ನೀಡಿದ್ದು, ಕೇಂದ್ರದ ಸರ್ವಾಧಿಕಾರಿ ವರ್ತನೆಯ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಮತ್ತು ನರೇಂದ್ರ ಮೋದಿ ಸರ್ಕಾರಕ್ಕೆ ಅಸಾಧಾರಣ ಪರ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು.
ಪಕ್ಷದ ಹಿರಿಯ ಭಿನ್ನಮತೀಯ ನಾಯಕರೊಂದಿಗೆ ಸುಧೀರ್ಘವಾಗಿ ಚರ್ಚಿಸಿದ ನಂತರ ಈಗ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಲಂಗಾಣ, ಗುಜರಾತ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ಪಕ್ಷದ ಸಂಘಟನೆಯಲ್ಲಿನ ನಾಯಕತ್ವ ಬದಲಿಸಲು ತೀರ್ಮಾನಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪಕ್ಷದ ನಾಯಕತ್ವದ ಬಗ್ಗೆ ಅಸಮಧಾನಗೊಂಡಿರುವ ಬೆನ್ನಲ್ಲೇ ಇಂದು ನಡೆದ ಭಿನ್ನಮತೀಯರ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ಪರವಾಗಿ ಕೆಲಸ ಮಾಡಲು ಸಿದ್ಧರಿರುವುದಾಗಿ ಹೇಳಿದರು.ಆ ಮೂಲಕ ನೂತನ ವರ್ಷಕ್ಕೆ ಹೊಸ ಅಧ್ಯಕ್ಷರ ನೇಮಕದ ಸಿದ್ದತೆಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸಾರಥ್ಯ ವಹಿಸುವ ಮುನ್ಸೂಚನೆಯನ್ನು ನೀಡಿದ್ದಾರೆ.
ಕಾಂಗ್ರೆಸ್ ಬಂಡುಕೋರರ ಗುಂಪು ಈ ಹಿಂದೆ ಪಕ್ಷದ ನಾಯಕತ್ವದ ವಿಚಾರವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿ ಈ ಹಿಂದೆ ಪತ್ರವನ್ನು ಬರೆದಿತ್ತು, ಈಗ ಅಂತಿಮವಾಗಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಈ ಬಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.ಈ ಸಭೆಯನ್ನು ಏರ್ಪಡಿಸಲು ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎನ್ನಲಾಗಿದೆ.
ಅನೇಕ ಚುನಾವಣಾ ಸೋಲುಗಳ ನಂತರ ಕಾಂಗ್ರೆಸ್ ತನ್ನ ಉನ್ನತ ನಾಯಕತ್ವದ ವಿಚಾರವಾಗಿ ಟೀಕೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದಿವಂಗತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತ್ಮಚರಿತ್ರೆ ಇನ್ನೂ ಹಲವು ಸಂಗತಿಗಳನ್ನು ಬಹಿರಂಗಪಡಿಸಿದೆ.
ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಬಾಲ್ಯವನ್ನು ಕಳೆದ ಅವರು ರಾಷ್ಟ್ರಪತಿ ಹುದ್ದೆವರೆಗೆ ಸಾಗಿದ ಸುದೀರ್ಘ ಪ್ರಯಾಣದ ಮೇಲೆ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ 'ಪ್ರೆಸಿಡೆನ್ಶಿಯಲ್ ಇಯರ್ಸ್' ಬೆಳಕುಚೆಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.