ವೆಂಬರ್ 2021 ರಲ್ಲಿ ಈ ವರ್ಷ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಮಹಿಳೆಯರಿಗೆ ಅವಕಾಶ ನೀಡಿದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರಿಗೆ ಪರೀಕ್ಷೆಗೆ ಹಾಜರಾಗುವ ಹಕ್ಕನ್ನು ನಿರಾಕರಿಸಲು ಅವರು ಬಯಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
Girls Permitted To Join NDA: ಈ ವರ್ಷ ನಡೆಯಲಿರುವ NDA ಪ್ರವೇಶ ಪರೀಕ್ಷೆಯಲ್ಲಿ ಯುವತಿಯರಿಗೂ ಕೂಡ ಕೂಡ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಆಗಸ್ಟ್ 18 ರಂದು ಆದೇಶಿಸಿತ್ತು. ಈ ವೇಳೆ ಸಶಸ್ತ್ರ ಪಡೆಗಳಲ್ಲಿ (Armed Forces) ಪ್ರವೇಶದ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತ್ತು.
ಸುಪ್ರೀಂಕೋರ್ಟ್ ತನ್ನ ಮಹತ್ವದ ನಿರ್ಧಾರವೊಂದರಲ್ಲಿ, NEET 2021 ಪ್ರವೇಶ ಪರೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಹೇಳಿದ್ದು, ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ NEET ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸೆಪ್ಟೆಂಬರ್ 6 ರಿಂದ ಹನ್ನೊಂದನೇ ತರಗತಿಯ ಪರೀಕ್ಷೆಯನ್ನು ದೈಹಿಕವಾಗಿ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 13 ಕ್ಕೆ ನಿಗದಿಪಡಿಸಲಾಗಿದೆ.
Vyapam Scam Verdict - ಮಧ್ಯಪ್ರದೇಶದ (Madhya Pradesh )ಬಹು ಚರ್ಚಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಗರಣ ಪ್ರಕರಣದಲ್ಲಿ (Police Constable Recruitment Scam) ಸಿಬಿಐ ನ್ಯಾಯಾಲಯ (CBI Court) ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ ಮಂಗಳವಾರ ಸುಪ್ರೀಂ ಕೋರ್ಟ್ಗೆ ನ್ಯಾಯಾಧೀಶರ ನೇಮಕಕ್ಕಾಗಿ ಒಂಬತ್ತು ಹೆಸರುಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.
SC On Women In NDA - ಇತ್ತೀಚೆಗಷ್ಟೇ ಖಾಯಂ ಸೇವಾ ಆಯೋಗದಲ್ಲಿ (Permanent Service Commission) ಮಹಿಳೆಯರನ್ನು ಸೇರಿಸುವ ಕುರಿತು ಮಹತ್ವದ ತೀರ್ಪು ನೀಡಿದ್ದ ಸರ್ವೋಚ್ಛ ನ್ಯಾಯಾಲಯ ಇದೀಗ ಮಹಿಳೆಯರಿಗೆ ಮತ್ತೊಂದು ದೊಡ್ಡ ಪರಿಹಾರ ನೀಡಿದೆ. ಸುಪ್ರೀಂ ಕೋರ್ಟ್ ಈಗ ಮಹಿಳೆಯರಿಗೆ NDA ಅಂದರೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (National Defence Academy) ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದೆ.
Chief Justice Of India: ಸಂಸತ್ತಿನಲ್ಲಿ ಕಾನೂನಿನ ಅಂಗೀಕಾರದ ಸಮಯದಲ್ಲಿ ಚರ್ಚೆ ನಡೆಯದಿದ್ದರೆ, ನ್ಯಾಯಾಧೀಶರು ಕೂಡ ಕಾನೂನು ಮಾಡುವಾಗ ಸಂಸತ್ತಿನ ಮನೋಭಾವ ಏನೆಂದು ಸರಿಯಾಗಿ ಅರ್ಥಮಾಡಿಕೊಳ್ಳುವುದಿಲ್ಲ ಎಂದು ನ್ಯಾಯಮೂರ್ತಿ ರಮಣ ಹೇಳಿದರು.
Supreme Court Big Verdict: ಕೊವಿಡ್-19ನಿಂದಾಗಿರುವ ಸಾವಿಗೆ 4 ಲಕ್ಷ ರೂ. ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದೂ ಕೂಡ ನ್ಯಾಯಾಲಯ ಹೇಳಿದೆ. ಆದರೆ, ಸಂತ್ರಸ್ತ ಕುಟುಂಬ ಸದಸ್ಯರಿಗೆ ಕನಿಷ್ಠ ಪರಿಹಾರ ಒದಗಿಸುವ ವ್ಯವಸ್ಥೆಯನ್ನುNDMA ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.
One Nation One Ration Card: ದೇಶಾದ್ಯಂತದ ಎಲ್ಲಾ ರಾಜ್ಯಗಳಿಗೆ 'ಒಂದು ದೇಶ ಒಂದು ರೇಶನ್ ಕಾರ್ಡ್' ಯೋಜನೆಯನ್ನು ಜಾರಿಗೊಳಿಸಲು ಸುಪ್ರೀಂ ಇಂದು ಜುಲೈ 31, 2021ರವರೆಗೆ ಡೆಡ್ ಲೈನ್ ಫಿಕ್ಸ್ ಮಾಡಿದೆ.
12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಉತ್ಸುಕರಾಗಿರುವ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳಲು ಎಚ್ಚರಿಕೆ ಮತ್ತು ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.
ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಸಾಧ್ಯವಿಲ್ಲ, ಇದು ಕೇವಲ ನೈಸರ್ಗಿಕ ವಿಪತ್ತುಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ.
2012 ರ ಫೆಬ್ರವರಿಯಲ್ಲಿ ಕೇರಳ ಕರಾವಳಿಯಲ್ಲಿ ಇಬ್ಬರು ಮೀನುಗಾರರನ್ನು ಕೊಂದ ಆರೋಪದ ಮೇಲೆ ಇಬ್ಬರು ಇಟಾಲಿಯನ್ ನೌಕಾಪಡೆಗಳ ಸದಸ್ಯರ ವಿರುದ್ಧ ಭಾರತದಲ್ಲಿ ಕ್ರಿಮಿನಲ್ ಮೊಕದ್ದಮೆ ಮುಚ್ಚುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
CBSE 12th Board: ಕೊರೊನಾ ಮಹಾಮಾರಿಯ ಹಿನ್ನೆಲೆ ಈ ವರ್ಷ ರದ್ದಾಗಿರುವ 12ನೇ ತರಗತಿಯ CBSE 12ನೇ ತರಗತಿಯ ಮೌಲ್ಯಮಾಪನಕ್ಕಾಗಿ ಮಂಡಳಿ ಮುಖ್ಯ ಪ್ರಸ್ತಾವನೆಯೊಂದರ ಮೇಲೆ ಚಿಂತನೆ ನಡೆಸುತ್ತಿದೆ.
ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.