ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಸುಪ್ರೀಂ ಕೋರ್ಟ್ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಕೀಲರನ್ನು ಆಲಿಸಲು ಸಿದ್ಧವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಬುಧವಾರದಂದು ಹೇಳಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ನಲ್ಲಿ ʻಲೋಕಾʼ ಅರ್ಜಿ ವಿಚಾರಣೆ ಸಾಧ್ಯತೆ ಇದೆ.. ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ರದ್ದಿಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.
2019ರಲ್ಲಿ, ಭಾರತೀಯ ಸೇನೆ ಶಾರ್ಟ್ ಸರ್ವಿಸ್ ಕಮಿಷನ್ (ಎಸ್ಎಸ್ಸಿ) ಮಹಿಳಾ ಅಧಿಕಾರಿಗಳನ್ನು ಶಾಶ್ವತ ನೇಮಕ ಮಾಡಿಕೊಳ್ಳುವಂತೆ ತನ್ನ ನಿಯಮವನ್ನು ಬದಲಾಯಿಸಿತು. ಇಲ್ಲವಾದರೆ ಈ ಅಧಿಕಾರಿಗಳು 14 ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ಹೊಂದುತ್ತಿದ್ದರು
Karnataka hijab Row : ಮಾರ್ಚ್ 9 ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಾಗುವಂತೆ ವಿದ್ಯಾರ್ಥಿಗಳು ಪರಿಹಾರವನ್ನು ಕೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪರ ವಕೀಲ ಶಾದನ್ ಫರಾಸತ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
Interesting Villages In India: ಆರಂಭದಲ್ಲಿ, ಈ ಗ್ರಾಮದ ಜನರ ಹೆಸರುಗಳು ಹಣ್ಣುಗಳು ಮತ್ತು ಪ್ರಾಣಿಗಳೊಂದಿಗೆ ಸಂಬಂಧ ಹೊಂದಿದ್ದವು. ಈ ಜನರು ಪ್ರಪಂಚದ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಪ್ರಾರಂಭಿಸಿದರು. ಅದೇ ರೀತಿಯಲ್ಲಿ ಈ ಜನರು ತಮ್ಮ ಮಕ್ಕಳಿಗೆ ಆ ಪ್ರಸಿದ್ಧ ವಿಷಯಗಳು ಮತ್ತು ವ್ಯಕ್ತಿತ್ವಗಳ ಹೆಸರನ್ನು ಇಡಲು ಪ್ರಾರಂಭಿಸಿದರು. ಈ ಗ್ರಾಮದಲ್ಲಿ ವಾಸಿಸುವ ಜನರ ಹೆಸರುಗಳು ಅಮಿತಾಬ್, ಸಲ್ಮಾನ್, ಶಾರುಖ್ ಮತ್ತು ಅಮೀರ್ ಎಂದೆಲ್ಲಾ ಇದೆ.
ಸೋಷಿಯಲ್ ಮೀಡಿಯಾದಲ್ಲಿ ಸಿಗರೇಟ್ ಸೇದುವ ʼಕಾಳಿʼ ಸಾಕ್ಷಾ ಚಿತ್ರದ ಪೋಸ್ಟರ್ ಹಂಚಿಕೊಂಡು ವಿವಾದಕ್ಕೆ ಕಾರಣವಾಗಿದ್ದ ನಿರ್ದೇಶಕಿ ಲೀನಾ ಮಣಿಮೇಘಲೈ ಅವರನ್ನು ಸುಪ್ರೀಂಕೋರ್ಟ್ ಬಂಧಿಸದಂತೆ ತಡೆಯಾಜ್ಞೆ ಜಾರಿ ಮಾಡಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಕಾಳಿ ಸಿನಿಮಾ ಪೋಸ್ಟರ್ ಮೂಲಕ ಲೀನಾ ಭಾರಿ ವಿವಾದ ಸೃಷ್ಟಿಸಿದ್ದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರು ತಮ್ಮ ಇಬ್ಬರು ಸಾಕು ಹೆಣ್ಣು ಮಕ್ಕಳೊಂದಿಗೆ ಸಾರ್ವಜನಿಕ ಗ್ಯಾಲರಿಯ ಮೂಲಕ ನ್ಯಾಯಾಲಯವನ್ನು ಪ್ರವೇಶಿಸಿದರು ಮತ್ತು ಅವರಿಗೆ ನ್ಯಾಯಾಲಯದ ಕೊಠಡಿ ಮತ್ತು ಅವರ ಕೊಠಡಿಯ ದರ್ಶನ ನೀಡಿದರು
ಸಿನಿಮಾ ಹಾಲ್ಗಳಿಗೆ ಜನರು ಆಹಾರ ತೆಗೆದುಕೊಂಡು ಹೋಗಬಹುದೇ ಎಂಬ ಕುರಿತು ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು "ನಾವು ಚಲನಚಿತ್ರಗಳಿಗೆ ಜಿಲೇಬಿಗಳನ್ನು ತರಲು ಪ್ರಾರಂಭಿಸಬೇಕೇ?" ಎಂದು ಪ್ರಶ್ನಿಸಿದ್ದಾರೆ.
ನೋಟು ರದ್ದು ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ. ಇಬ್ಬರು ಜಡ್ಜ್ಗಳಿಂದ ಇಂದು 2 ಪ್ರತ್ಯೇಕ ತೀರ್ಪು ಪ್ರಕಟವಾಗಲಿದೆ. 2016ರಲ್ಲಿ ನೋಟು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಮಾಡಿತ್ತು.
Supreme court on note ban : 2016ರಲ್ಲಿ 500 ಮತ್ತು 1000 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರ ಕೈಗೊಂಡ ನೋಟು ರದ್ದತಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಸುಮಾರು ಮೂರು ತಿಂಗಳ ನಂತರ, ಕೇಂದ್ರ ಸರ್ಕಾರವು ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನಾಗಿ ನೇಮಿಸಲು ಅಧಿಸೂಚನೆ ಹೊರಡಿಸಿದೆ.
ಯೂಟ್ಯೂಬ್ನಲ್ಲಿನ ಜಾಹೀರಾತುಗಳಿಂದಲೇ ತಾವು ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಎಂದು ಗೂಗಲ್ ಇಂಡಿಯಾದಿಂದ ₹ 75 ಲಕ್ಷ ರೂ. ಪರಿಹಾರವನ್ನು ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರದಂದು ₹ 25,000 ದಂಡವನ್ನು ವಿಧಿಸಿದೆ.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇನ್ನೆನು ಕೆಲವೇ ಗಂಟೆಗಳಲ್ಲಿ ಸುಪ್ರೀಂಕೋರ್ಟ್ನಲ್ಲಿ ಗಡಿ ವಿಚಾರಣೆ ನಡೆಯಲಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಜನರ ಚಿತ್ತ ನ್ಯಾಯಾಲಯದ ಕಡೆ ಮೂಡಿದೆ. ಮತ್ತೊಂದು ಕಡೆ ಮಹಾರಾಷ್ಟ್ರ ಕನ್ನಡಿಗರು ಕರ್ನಾಟಕ ರಾಜ್ಯಕ್ಕೆ ನಮ್ಮನ್ನು ಸೇರಿಸಿ ಎನ್ನುವ ಕೂಗು ದಿನದಿಂದ ದಿನಕ್ಕೆ ವ್ಯಾಪಕವಾಗಿ ಕೇಳಿಬರುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.