Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Kavya Maran: ನಮ್ಮ ದೇಶದ ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಗೂ ಕಾವ್ಯ ಮಾರನ್ ಹೆಸರು ಗೊತ್ತಿಲ್ಲದೇ ಇರಲು ಸಾಧ್ಯವೇ ಇಲ್ಲ.. ಈ ಬ್ಯೂಟಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಹೈದರಾಬಾದ್ ಸನ್ರೈಸರ್ಸ್ ತಂಡದ ಮಾಲೀಕರಾದ ನಂತರ ಅವರು ಹೆಚ್ಚು ಅವರು ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದಾರೆ..
Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ. ನಾಯಕತ್ವ ಕಳೆದುಕೊಂಡಿರುವ ಬಗ್ಗೆ ಆಯ್ಕೆಗಾರರು ನೀಡಿರುವ ಕಾರಣಗಳು ಸಮಂಜಸವಲ್ಲ, ಡ್ರೆಸ್ಸಿಂಗ್ ರೂಮ್ನಿಂದ ಬಂದ ಪ್ರತಿಕ್ರಿಯೆ ಮತ್ತು ಆಟಗಾರರ ದೂರಿನಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಮುಕ್ತಗೊಳಿಸಿರಬಹುದು ಎಂದು ಮಾಜಿ ಕ್ರಿಕೆಟಿಗ ಶಾಕಿಂಗ್ ಸುದ್ದಿ ಹೊರಹಾಕಿದ್ದಾರೆ.
Champions Trophy 2025: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿ ಯ ನಿರ್ಧಾರದಿಂದ ಆಘಾತಕ್ಕೊಳಗಾಗಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ 2025 ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. 8 ದೇಶಗಳು ಭಾಗವಹಿಸುವ ಈ ಪಂದ್ಯಾವಳಿಯನ್ನು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ.
Hardik Pandya: ಹೊಸ ಟಿ20ಐ ಕ್ಯಾಪ್ಟನ್ ಆಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸದಿರುವುದು ನನಗೇನು ಆಶ್ಚರ್ಯವಿಲ್ಲ ಎಂದು ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಹೇಳಿದ್ದಾರೆ.
IND W vs PAK W : ಮಂಗಳವಾರ, ಜುಲೈ 23 ರಂದು ಡಂಬುಲಾ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ಎದುರಳಿ ತಂಡವನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.
IND vs SL: ಟೀಮ್ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್ ಅವರ ಪ್ರಯಾಣವು ಟೀಕೆಗಳೊಂದಿಗೆ ಪ್ರಾರಂಭವಾಯಿತು. ಶ್ರೀಲಂಕಾ ತಂಡದ ಆಯ್ಕೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಅವರನ್ನು ಪ್ರಶ್ನಿಸುತ್ತಿದ್ದಾರೆ.
Ajit Agarkar: ಟೀಂ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಮೊದಲ ಬಾರಿಗೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು ಇವರೊಂದಿಗೆಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೂಡ ಭಾಗಿಯಾಗಿದ್ದರು. ಈ ಇಬ್ಬರು ಮಾಧ್ಯಮದವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ್ದರು, ಅದರಲ್ಲೂ ಇತ್ತೀಚೆಗೆ ಚರ್ಚೆಗೀಡಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಕೈ ತಪ್ಪಿದ ನಾಯಕತ್ವದ ಕುರಿತು ಕೂಡ ಪ್ರಶ್ನೆಗಳು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಆಯ್ಕೆಗಾರ ಅಜಿತ್ ಅಗರ್ಕರ್ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
IND W vs UAE W Highlights: ಮಹಿಳಾ ಕ್ರಿಕೆಟ್ ತಂಡದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದೊಡ್ಡ ವರ್ಚಸ್ಸು ಕಾಣಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತವು 201 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಲು ಮುಂದಾದ ಯುಎಇ ತಂಡವು ಸಂಪೂರ್ಣ ಓವರ್ನಲ್ಲಿ ಕೇವಲ 123 ರನ್ಗಳನ್ನು ತಲುಪಲು ಸಾಧ್ಯವಾಯಿತು.
Kohli clarified the old fight with Gambhir: ಹಿಂದಿನ ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಮಾತಿನ ಯುದ್ಧವನ್ನು ಇಬ್ಬರ ಅಭಿಮಾನಿಗಳು ಎಂದಿಗೂ ಮರೆಯುವುದಿಲ್ಲ.
Axar Patel: ಟಿ20 ವಿಶ್ವಕಪ್ 2024ರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲಿ ತಪ್ಪು ಸಮಯದಲ್ಲಿ ಔಟಾಗುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದು 11 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ.
IND vs SL:ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತ ತಂಡದ ಬಗ್ಗೆ ತೀವ್ರವಾಗಿ ಚರ್ಚೆ ಶುರುವಾಗಿದೆ. ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ನೇತೃತ್ವದ ಆಯ್ಕೆ ಸಮಿತಿಯಿಂದ ಕೆಲವು ಆಟಗಾರರಿಗೆ ಅನ್ಯಾಯವಾಗಿದೆ ಎಂದು ಟೀಕಿಸಲಾಗಿದೆ. ರನ್ಗಳ ಸುರಿಮಳೆಗೈದು ಎಲ್ಲರನ್ನು ಇಂಪ್ರೆಸ್ ಮಾಡಿದ್ದ ಅಭಿಷೇಕ್ ಶರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ನಂತಹ ಕ್ರಿಕೆಟಿಗರನ್ನು ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ.
Hardik-Natasha divorce Case: ಎರಡು ಬಾರಿ ಮದುವೆಯಾಗಿದ್ದ ಹಾರ್ದಿಕ್ ಮತ್ತು ನತಾಶಾ ಇದೀಗ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲಾ ಪಂದ್ಯಗಳಲ್ಲಿ ನತಾಶಾ ಕಾಣಿಸಿಕೊಂಡಿರಲಿಲ್ಲ. ಕಳೆದ ಕೆಲ ತಿಂಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನ ವದಂತಿಗೆ ಪ್ರಮುಖ ಕಾರಣವಾಗಿತ್ತು.
Natasa Stankovic-Hardik Pandya: ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಬಹಳ ಸಮಯದಿಂದ ಭಿನ್ನಾಭಿಪ್ರಾಯ ಮತ್ತು ವಿಚ್ಛೇದನದ ವರದಿಗಳು ಇದ್ದವು, ಇದೀಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಆ ಎಲ್ಲಾ ಸುದ್ದಿಗಳಿಗೆ ಅಂತ್ಯ ಹಾಡಿದ್ದಾರೆ. ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರತ್ಯೇಕತೆಯ ಬಗ್ಗೆ ತಿಳಿಸಿದ್ದಾರೆ.
BCCI Announced Indian Team for Sri Lanka Tour: ಅಭಿಮಾನಿಗಳ ಊಹೆಗೂ ನಿಲುಕದಂತಿದ್ದ ಟಿ20 ತಂಡದ ನಾಯಕತ್ವದ ಬಗ್ಗೆ ಬಹುದೊಡ್ಡ ನಿರ್ಧಾರ ಕೈಗೊಳ್ಳಲಾಗಿದೆ. ಟಿ20ಯಲ್ಲಿ ಬಿಸಿಸಿಐ ಟೀಂ ಇಂಡಿಯಾದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ʼಗೆ ಹಸ್ತಾಂತರಿಸಿದೆ.
hardik pandya-natasha stankovic: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಯಾವುದು ಸರಿಯಾಗಿಲ್ಲ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಈ ಮಧ್ಯೆ, ನತಾಶಾ ತನ್ನ ಮಗನೊಂದಿಗೆ ಮುಂಬೈನಿಂದ ತೆರಳಿದ್ದಾರೆ.
Amit Mishra on Virat Kohli: ನಾನು ಮತ್ತು ಕೊಹ್ಲಿ ತುಂಬಾ ಆಪ್ತರಾಗಿದ್ದೆವು. ಆತನೊಂದಿಗೆ ನಾನು Pizza, ಸಮೋಸಾ ಸೇರಿದಂತೆ ಎಲ್ಲಾ ರೀತಿಯ ತಿಂಡಿ-ತಿನಿಸುಗಳನ್ನು ತಿಂದಿರುವೆ. ಆಗಿದ್ದ ಚೀಕುಗೂ (ಕೊಹ್ಲಿ) ಈಗಿನ ಕೊಹ್ಲಿಗೂ ತುಂಬಾ ವ್ಯತ್ಯಾಸವಿದೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
T20 Team India Captain: ಟಿ20 ವಿಶ್ವಕಪ್ 2026 ಅನ್ನು ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾ ಹೊಸ ನಾಯಕನನ್ನು ಸಿದ್ಧಪಡಿಸುತ್ತಿದೆ. ನೂತನ ಕೋಚ್ ಗೌತಮ್ ಗಂಭೀರ್ ಮತ್ತು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆದಾರರು ತೀವ್ರ ಚರ್ಚೆ ನಡೆಸಿ ಹಾರ್ದಿಕ್ ಪಾಂಡ್ಯ ಅವರನ್ನು ಭವಿಷ್ಯದ ನಾಯಕತ್ವ ಯೋಜನೆಯಿಂದ ಹೊರಗಿಟ್ಟಿದ್ದಾರೆ. ಇತ್ತೀಚೆಗಷ್ಟೇ ಭಾರತ ಟಿ20 ವಿಶ್ವಕಪ್ ಗೆದ್ದಿದ್ದು ಗೊತ್ತೇ ಇದೆ. ಅಂತಿಮ ಪಂದ್ಯದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20ಗೆ ವಿದಾಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.